ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ ಇಂದು ನಿಧನರಾಗಿದ್ದಾರೆ.
ಹೊಸಪೇಟೆಯ ರಾಣಿಪೇಟೆಯಲ್ಲಿ ಮಧ್ಯಾಹ್ನ 12.30ಕ್ಕೆ ಪೃಥ್ವಿರಾಜ್ ಸಿಂಗ್ (84) ನಿಧನರಾಗಿದ್ದಾರೆ. ಪೃಥ್ವಿ ರಾಜ್ ಸಿಂಗ್ ಅವರು ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ಹೊಸಪೇಟೆ ರಾಣಿಪೇಟೆಯ ಮನೆಗೆ ಕರೆ ತರಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಪೃಥ್ವಿರಾಜ್ ಸಿಂಗ್ ಅವರ ಕಣ್ಣುಗಳನ್ನು ಆಸ್ಪತ್ರೆಗೆ ದಾನ ಮಾಡಲು ನಿರ್ಧರಿಸಲಾಗಿದೆ. ಸಾವಿಗೂ ಮುಂಚೆಯೇ ಕಣ್ಣು ದಾನ ಮಾಡಲು ಪೃಥ್ವಿ ರಾಜ್ ಸಿಂಗ್ ಅವರು ನಿರ್ಧಾರ ಮಾಡಿದ್ದರು. ರಾಣಿಪೇಟೆಯಲ್ಲಿ ಇಂದು ಸಂಜೆ 4 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಸಂಜೆ 6 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜುಲೈ 18 ರಿಂದ 22ರವರೆಗೆ ಭಾರೀ ಮಳೆ- ಹವಾಮಾನ ಇಲಾಖೆ