ಬಳ್ಳಾರಿ: ನಟ ಅಜಯ್ ರಾವ್ ಅವರು ಅರಣ್ಯ ಸಚಿವ ಆನಂದ್ ಸಿಂಗ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಹೌದು. ವಿಜಯನಗರ ಜಿಲ್ಲೆಯಾಗುತ್ತಿರುವುದಕ್ಕೆ ನಟ ಅಜಯ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿರುವ ಆನಂದ್ ಸಿಂಗ್ ಅಚೇರಿಗೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.
ಮೂಲತಃ ಹೊಸಪೇಟೆಯ ನಿವಾಸಿಯಾಗಿರುವ ಅಜಯ್ ರಾವ್, ಹೊಸಪೇಟೆ ಕೇಂದ್ರಿತ ವಿಜಯನಗರ ಜಿಲ್ಲೆ ರಚನೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಜಿಲ್ಲೆ ಘೋಷಣೆಯಾಗುವ ಮೂಲಕ ವಿಜಯನಗರ ಗತವೈಭವ ಮರಳಿ ಬಂದಂತಾಗಿದೆ. ನಾನು ಕೂಡ ಹೊಸಪೇಟೆ ನಗರದಲ್ಲಿ ಹುಟ್ಟಿದ್ದಕ್ಕೆ ಹೆಮ್ಮೆಯಾಗುತ್ತಿದೆ ಎಂದಿದ್ದಾರೆ.
ನನ್ನ ಹೂಟ್ಟೂರು ಹೊಸಪೇಟೆ ಈಗ ವಿಜಯನಗರ ಜಿಲ್ಲೆಯಾಗುತ್ತಿರುವುದು ಹೆಮ್ಮೆಯ ವಿಷಯ. ಸರ್ಕಾರ ಆದಷ್ಟು ಬೇಗ ಫೈನಲ್ ನೋಟಿಫಿಕೇಷನ್ ಸಹ ಹೊರಡಿಸಲಿ. ಫೈನಲ್ ನೋಟಿಫಿಕೇಷನ್ ಗಾಗಿ ಎದುರು ನೋಡುತ್ತಿರುವೆ. ವಿಜಯನಗರ ಜಿಲ್ಲೆಯ ಅಭಿವೃದ್ಧಿಗೆ ನಾನು ಕೂಡ ಕೈ ಜೋಡಿಸುವೆ ಎಂದು ನಟ ಭರವಸೆ ನೀಡಿದ್ದಾರೆ.