ಬೆಂಗಳೂರು: ಸಣ್ಣ ವಿಚಾರಕ್ಕೆ ಶುರುವಾದ ಗಲಾಟೆಯಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಯಾರಂಡಳ್ಳಿಯಲ್ಲಿ ನಡೆದಿದೆ.
ವಿಕಾಸ್ ಕೊಲೆಯಾದ ಯುವಕ. ಆರೋಪಿ ಪೀಟರ್ ಕುಡಿದ ಮತ್ತಿನಲ್ಲಿ ತನ್ನ ಗೆಳೆಯ ವಿಕಾಶ್ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಮೃತ ವಿಕಾಸ್ ಮತ್ತು ಪೀಟರ್ ಇಬ್ಬರು ಇಟ್ಟಿಗೆ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸ್ನೇಹಿತರಾಗಿದ್ದರು.
ಶುಕ್ರವಾರ ಸಂಜೆ ಮೃತ ವಿಕಾಸ್ ಮತ್ತು ಪೀಟರ್ ಒಟ್ಟಿಗೆ ಕುಳಿತು ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಸಣ್ಣ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ಜಗಳ ಶುರುವಾಗಿದೆ. ಗಲಾಟೆ ವಿಕೋಪಕ್ಕೆ ಹೋಗಿ ಆರೋಪಿ ಪೀಟರ್ ಕೋಪದಿಂದ ವಿಕಾಶ್ನ ಎದೆ ಮತ್ತು ಕುತ್ತಿಗೆ ಭಾಗಕ್ಕೆ ಚೂಪಾದ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ವಿಕಾಶ್ ತೀವ್ರ ಗಾಯಗಳಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಆರೋಪಿ ಪೀಟರ್ನನ್ನು ಬಂಧಿಸಿದ್ದಾರೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.