ನವದೆಹಲಿ: ಸರ್ದಾರ್ ಬಜಾರ್ನಲ್ಲಿ ವಸತಿ ಕಟ್ಟಡವೊಂದು ಏಕಾಏಕಿ ಕುಸಿದು ಬಿದ್ದು, ಹಲವಾರು ಜನ ಅವಶೇಷದಡಿಯಲ್ಲಿ ಸಿಲುಕಿಕೊಂಡಿರುವುದು ವರದಿಯಾಗಿದೆ.
- Advertisement 2
ಸದರ್ ಬಜಾರ್ ಚಾರ್ಖಿವಾಲಿ ಗಲಿ ಖುರೇಷಿ ನಗರದ ಬಳಿ ವಸತಿ ಕಟ್ಟಡ ಇಂದು ಕುಸಿತಕ್ಕೊಳಗಾಗಿದೆ. ಈಗಾಗಲೇ ಕಟ್ಟಡದ ಅವಶೇಷಗಳಿಂದ ಐದು ಜನರನ್ನು ರಕ್ಷಣೆ ಮಾಡಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಇನ್ನೂ ಹಲವು ಜನ ಕಟ್ಟಡದ ಅವಶೇಷದಡಿಯಲ್ಲಿರುವ ಶಂಕೆ ವ್ಯಕ್ತವಾಗಿದೆ.
- Advertisement 3
- Advertisement 4
ಘಟನಾ ಸ್ಥಳದಲ್ಲಿ 6 ಅಗ್ನಿಶಾಮಕದಳ ತಂಡ ಕಾರ್ಯಚರಣೆಯಲ್ಲಿ ತೊಡಗಿದೆ. ರಕ್ಷಣಾ ಕಾರ್ಯಚರಣೆಯಲ್ಲಿ ತುರ್ತುಚಿಕಿತ್ಸೆಗಾಗಿ ತಂಡವನ್ನ ನಿಯೋಜಿಸಲಾಗಿದೆ. ಈ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದು, ಈ ಘಟನೆಯಿಂದ ತೀವ್ರ ನೋವಾಗಿದೆ. ಕಟ್ಟಡ ದುರಂತದಲ್ಲಿ ಸಿಲುಕಿಕೊಂಡಿರುವವರ ರಕ್ಷಣಾ ಕಾರ್ಯ ನಡೆಯುತ್ತಿದೆ, ನಾನು ಘಟನೆಯ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಕಲೆಹಾಕುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.