Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದ್ಯದಲ್ಲೇ ಕೆಜಿಎಫ್ ಬಳಿ ತಲೆ ಎತ್ತಲಿರುವ ಬೃಹತ್ ಕೈಗಾರಿಕಾ ಟೌನ್‍ಶಿಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸದ್ಯದಲ್ಲೇ ಕೆಜಿಎಫ್ ಬಳಿ ತಲೆ ಎತ್ತಲಿರುವ ಬೃಹತ್ ಕೈಗಾರಿಕಾ ಟೌನ್‍ಶಿಪ್

Latest

ಸದ್ಯದಲ್ಲೇ ಕೆಜಿಎಫ್ ಬಳಿ ತಲೆ ಎತ್ತಲಿರುವ ಬೃಹತ್ ಕೈಗಾರಿಕಾ ಟೌನ್‍ಶಿಪ್

Public TV
Last updated: August 11, 2021 5:30 pm
Public TV
Share
3 Min Read
Murugesh Nirani Pralhad Joshi 3
SHARE

– ಪ್ರಹ್ಲಾದ್ ಜೋಶಿ ಜೊತೆ ಮುರುಗೇಶ್ ನಿರಾಣಿ ಚರ್ಚೆ

ನವದೆಹಲಿ: ಕೋಲಾರ ಜಿಲ್ಲೆ ಕೆಜಿಎಫ್ ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಯಲ್ಲಿ ಬಳಕೆಯಾಗದೇ ಇರುವ ಜಮೀನಿನಲ್ಲಿ ಕೈಗಾರಿಕಾ ಟೌನ್‍ಶಿಪ್ (ಇಂಡಸ್ಟ್ರಿಯಲ್ ಟೌನ್‍ಶಿಪ್) ಪ್ರಾರಂಭಿಸಲು ಅನುಮತಿ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಸಂಬಂಧ ಬುಧವಾರ ನವದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ನಿರಾಣಿಯವರು, ಕೆಜಿಎಪ್ ನಲ್ಲಿ ಟೌನ್‍ಶಿಪ್ ನಿರ್ಮಾಣದ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಕೆಜಿಎಫ್ ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಗೆ ಬರುವ ಸುಮಾರು 3,212 ಎಕರೆ ಪ್ರದೇಶದಲ್ಲಿ ಕೇಂದ್ರ ಸರ್ಕಾರವು ಡ್ರೋಣ್ ಮೂಲಕ ಸಮೀಕ್ಷೆ ನಡೆಸಿದ್ದು, ಇಲ್ಲಿ ಗಣಿಗಾರಿಕೆ ನಡೆಸಲು ಸೂಕ್ತವಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಈ ಹಿನ್ನೆಲೆಯಲ್ಲಿ ಬಳಕೆಯಾಗದೆ ಉಳಿದಿರುವ ಜಮೀನಿನಲ್ಲಿ ಕೈಗಾರಿಕಾ ಟೌನ್‍ಶಿಪ್ ನಿರ್ಮಾಣ ಮಾಡಲು ಅನುಮತಿ ನೀಡುವಂತೆ ಸಚಿವರಿಗೆ ವಸ್ತುಸ್ಥಿತಿಯನ್ನು ನಿರಾಣಿ ಅವರು ವಿವರಿಸಿದರು. ಟೌನ್‍ಶಿಪ್ ನಿರ್ಮಾಣವಾದರೆ ಈ ಭಾಗದಲ್ಲಿ ಕೈಗಾರಿಕಾ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಅನುಕೂಲವಾಗುತ್ತದೆ. ಅಲ್ಲದೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ ಉದ್ಯೋಗ ಸೃಷ್ಟಿಸಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕೆಜಿಎಫ್ ನಗರವು ರಾಜಧಾನಿ ಬೆಂಗಳೂರಿನಿಂದ ಸುಮಾರು 100 ಕಿ.ಮೀ ವ್ಯಾಪ್ತಿಯಲ್ಲಿದ್ದು, ವಿಶ್ವದರ್ಜೆಯ ರಾಷ್ಟ್ರೀಯ ಹೆದ್ದಾರಿಗಳು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅತ್ಯುತ್ತಮ ರೈಲ್ವೆ ಸಂಪರ್ಕ ಹೊಂದಿದೆ. ಅಲ್ಲದೆ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಕೂಡ ಇಲ್ಲಿಯೇ ಹಾದು ಹೋಗುವುದರಿಂದ ಕೈಗಾರಿಕಾ ಬೆಳವಣಿಗೆಗೆ ಸಾಕಷ್ಟು ಸಹಕಾರಿಯಾಗಲಿದೆ. ಟೌನ್‍ಶಿಪ್ ನಿರ್ಮಾಣ ಮಾಡಲು ಯೋಗ್ಯವಾಗಿರುವುದರಿಂದ ನಮ್ಮ ಮನವಿಯನ್ನು ಪರಿಗಣಿಸಬೇಕೆಂದು ಕೋರಿದರು.

Murugesh Nirani Pralhad Joshi 1

ಕೆಜಿಎಫ್ ಚಿನ್ನದ ಗಣಿಯು ಅತ್ಯಂತ ಪುರಾತನವಾದ ಗಣಿ ಪ್ರದೇಶವಾಗಿತ್ತು. ಬ್ರಿಟಿಷರ ಕಾಲದಿಂದಲೇ ಇಲ್ಲಿ ಗಣಿಗಾರಿಕೆಯನ್ನು ನಡೆಸಲಾಗುತ್ತಿತ್ತು. ಕಳೆದ ಹಲವಾರು ವರ್ಷಗಳಿಂದ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ. ಭಾರತೀಯ ಪರಂಪರೆಯಲ್ಲಿ ಚಿನ್ನಕ್ಕೆ ಅಗ್ರಸ್ಥಾನ. ದೇಶದಲ್ಲಿ ಚಿನ್ನದ ಉತ್ಪಾದನೆ ಪ್ರಮಾಣ ಕಡಿಮೆಯಿರುವುದರಿಂದ ವಿದೇಶಗಳಿಂದ ಪ್ರತಿವರ್ಷ 30 ಬಿಲಿಯ ಡಾಲರ್ (ಅಂದಾಜು 2 ಲಕ್ಷ ಕೋಟಿ ರೂ.ಗೂ ಹೆಚ್ಚು) ಮೌಲ್ಯದ ಚಿನ್ನವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ದೇಶೀಯವಾಗಿ ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿಯಲ್ಲಿ ವಾರ್ಷಿಕ 2ರಿಂದ 3 ಟನ್ ಉತ್ಪಾದಿಸಲಾಗುತ್ತಿದೆ. 19 ವರ್ಷಗಳ ಹಿಂದೆ ಮುಚ್ಚಲಾಗಿದ್ದ ಕೋಲಾರ ಗೋಲ್ಡ್ ಫೀಲ್ಡ್(ಕೆಜಿಎಫ್)ಗಳಲ್ಲಿ ಮತ್ತೆ ಚಿನ್ನದ ಗಣಿಗಾರಿಕೆ ಆರಂಭಿಸಲು ಕೇಂದ್ರ ಅನುಮತಿ ನೀಡಿದೆ ಎಂದು ತಿಳಿಸಿದರು.

Met Union Minister of Parliamentary Affairs, Coal & Mines Shri @JoshiPralhad Avaru in New Delhi and discussed the development of an Industrial Township at KGF in Kolar district by utilising unused vacant land at Bharat Gold Mines and other issues. pic.twitter.com/ZzUS0r7kbQ

— Dr. Murugesh R Nirani (@NiraniMurugesh) August 11, 2021

12,500 ಎಕರೆಯಲ್ಲಿ ಚಿನ್ನ
ಬಿಜಿಎಂಎಲ್‍ಗೆ ಸೇರಿದ ಗಣಿ ಪ್ರದೇಶ ಸುಮಾರು 12,500 ಎಕರೆಗಳಿದ್ದು, ಈ ಪ್ರದೇಶದಲ್ಲಿ ಚಾಂಪಿಯನ್ ರೀಫ್, ಮಾರಿಕುಪ್ಪಂ, ಗೋಲ್ಕೊಂಡ, ಚಿಗರಿಗುಂಟೆ, ಬಿಸಾನತ್ತಂ, ಮೈಸೂರು ಮೈನ್ಸ್, ನಂದಿದುರ್ಗ್, ಹೆನ್ರೀಸ್ ಸೇರಿದಂತೆ 30ಕ್ಕೂ ಹೆಚ್ಚು ಭಾಗಗಳಲ್ಲಿ ಚಿನ್ನವನ್ನು ಹೊರ ತೆಗೆಯಲಾಗಿದೆ ಎಂದು ವಿವರಿಸಿದರು.

ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಸಚಿವರಾದ ಶ್ರೀ @JoshiPralhad ಅವರನ್ನು ನವದೆಹಲಿಯಲ್ಲಿ ಇಂದು ಭೇಟಿಯಾಗಿ ಕೋಲಾರ ಜಿಲ್ಲೆ ಕೆಜಿಫ್ ನಲ್ಲಿರುವ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ಗೆ ಸೇರಿರುವ ಬಳಕೆಯಾಗದ ಜಮೀನಿನಲ್ಲಿ ಕೈಗಾರಿಕಾ ಟೌನ್ ಶಿಪ್ ಪ್ರಾರಂಭಿಸಲು ಅನುಮತಿ‌ ನೀಡುವಂತೆ ಮನವಿ ಪತ್ರ ಸಲ್ಲಿಸಲಾಯಿತು.

— Dr. Murugesh R Nirani (@NiraniMurugesh) August 11, 2021

ಕೆಜಿಎಫ್ ಚಿನ್ನದ ಗಣಿ ಪ್ರಪಂಚದಲ್ಲೇ ಅತ್ಯಂತ ಹಳೆಯದು. ಕೆಜಿಎಫ್ ಭಾಗದಲ್ಲಿ ಚೋಳರ ಕಾಲದಲ್ಲಿ ಚಿನ್ನದ ನಿಕ್ಷೇಪ ಶೋಧಿಸಿದ್ದರ ಬಗ್ಗೆ ಇತಿಹಾಸದ ದಾಖಲೆಗಳಿವೆ. ನಂತರ ಭೂಗರ್ಭ ಶಾಸಜ್ಞರ ಸಹಾಯದಿಂದ ಹೈದರಾಲಿ ಹಾಗೂ ಟಿಪ್ಪು ಸುಲ್ತಾನರ ಕಾಲದಲ್ಲಿ ಚಿನ್ನವನ್ನು ಹೊರ ತೆಗೆಯಲಾಗುತ್ತಿತ್ತು ಎಂದು ಈಸ್ಟ್ ಇಂಡಿಯಾ ಕಂಪನಿ ದಾಖಲೆಗಳಲ್ಲಿಉಲ್ಲೇಖವಿದೆ.

Murugesh Nirani Pralhad Joshi 1 1

ಕೆಜಿಎಫ್ ಚಿನ್ನದ ಗಣಿ ಪ್ರಪಂಚದಲ್ಲೇ ಅತ್ಯಂತ ಆಳವಾದ ಗಣಿ. ಸುಮಾರು 3,200 ಮೀಟರ್ (10,500 ಅಡಿಗಳು) ಆಳದ ಗಣಿಗಳಿವೆ. ಜತೆಗೆ ಚಿನ್ನದ ಅದಿರು ಹೊರತೆಗೆಯಲು ಸುಮಾರು 1,400 ಕಿ.ಮೀ.ಗಳಷ್ಟು ಉದ್ದದ ಸುರಂಗ ಕೊರೆಯಲಾಗಿದೆ. ಕಾರ್ಮಿಕರು ಗಣಿಯ ಆಳಕ್ಕೆ ಇಳಿಯಲು 30ಕ್ಕೂ ಹೆಚ್ಚು ಶಾಪ್ಟ್ ಗಳನ್ನು ನಿರ್ಮಿಸಲಾಗಿತ್ತು. ಕಂಪನಿ ಉತ್ತುಂಗದಲ್ಲಿದ್ದಾಗ ಸುಮಾರು 35 ಸಾವಿರ ಕಾರ್ಮಿಕರು ಗಣಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದರು.

Murugesh Nirani Pralhad Joshi 2

ಈ ಗಣಿಯಲ್ಲಿ ಒಂದು ಟನ್ ನಿಕ್ಷೇಪದಿಂದ ಸುಮಾರು 3.07 ಗ್ರಾಂ.ನಿಂದ 4.09 ಗ್ರಾಂ.ಗಳಷ್ಟು ಚಿನ್ನ ಲಭಿಸುತ್ತಿತ್ತು. ಹಾಗಾಗಿ ಗಣಿಯನ್ನು ಮುಚ್ಚುವವರೆಗೆ ಬಿಜಿಎಂಎಲ್‍ನ ಅಧಿಕೃತ ದಾಖಲೆಗಳ ಮಾಹಿತಿ ಪ್ರಕಾರ ಒಟ್ಟು 800 ಟನ್ ಚಿನ್ನವನ್ನು ಉತ್ಪಾದಿಸಲಾಗಿದೆ. ಇದಕ್ಕೂ ಮೊದಲು, ಚೋಳರ ಕಾಲದಲ್ಲಿ ಮತ್ತು ಹೈದರಾಲಿ ಹಾಗೂ ಟಿಪ್ಪುಸುಲ್ತಾನರ ಕಾಲದಲ್ಲಿ ಸುಮಾರು 6,200 ಕೆ.ಜಿ.ಗಳಷ್ಟು ಚಿನ್ನವನ್ನು ಉತ್ಪಾದಿಸಲಾಗಿತ್ತು ಎಂಬುದನ್ನು ದಾಖಲೆಗಳ ಸಮೇತ ವಿವರಿಸಿದರು. ಇದನ್ನೂ ಓದಿ: ರೋಹಿಣಿ ಸಿಂಧೂರಿ ಅಮಾನತು ಮಾಡಿ, ಅವರ ವಿರುದ್ಧ ತನಿಖೆ ನಡೆಸಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ಸೂಕ್ತ ಭರವಸೆ
ಸಚಿವ ನಿರಾಣಿಯವರ ಕೋರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರು ಸದ್ಯದಲ್ಲಿಯೇ ಸ್ಥಳಕ್ಕೆ ಅಧಿಕಾರಿಗಳನ್ನು ಕಳುಹಿಸಿ ವಸ್ತುಸ್ಥಿತಿ ಅಧ್ಯಯನ ನಡೆಸುವಂತೆ ಸೂಚನೆ ನೀಡಲಾಗುವುದು. ಕೆಜಿಎಫ್ ನಲ್ಲಿ ಕೈಗಾರಿಕಾ ಟೌನ್‍ಶಿಪ್ ಸ್ಥಾಪನೆ ಮಾಡಲು ಕೇಂದ್ರದಿಂದ ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿ ಭರವಸೆ ಕೊಟ್ಟರು. ಇದನ್ನೂ ಓದಿ: ಈಶ್ವರಪ್ಪ ವರ್ತನೆಯಿಂದ ಬಿಜೆಪಿಗಂತೂ ಒಳ್ಳೆಯದಾಗಲ್ಲ: ಬೇಳೂರು ಗೋಪಾಲಕೃಷ್ಣ

TAGGED:Industrial TownshipkgfMurugesh niraniprahlad joshiPublic TVಕೆಜಿಎಫ್ಕೈಗಾರಿಕಾ ಟೌನ್‍ಶಿಪ್ಪಬ್ಲಿಕ್ ಟಿವಿಪ್ರಹ್ಲಾದ್ ಜೋಶಿಮುರುಗೇಶ್ ನಿರಾಣಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
12 minutes ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
16 minutes ago
Mumbai Dentist
Crime

ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ಶ್ರದ್ಧಾ ವಾಕರ್‌ ಹತ್ಯೆ ಕೇಸ್‌ ಉಲ್ಲೇಖ

Public TV
By Public TV
1 hour ago
Eshwar Khandre
Bengaluru City

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Public TV
By Public TV
1 hour ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
2 hours ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?