– ಇದು ದಿಢೀರ್ ನಿರ್ಧಾರ ಅಲ್ಲ
ಬೆಂಗಳೂರು: ಸದ್ಯದ ಪರಿಸ್ಥಿತಿ ಅರ್ಥ ಮಾಡಿಕೊಂಡು, ಸಾರ್ವಜನಿಕರು ಕಡ್ಡಾಯವಾಗಿ ಕೊರೊನಾ ನಿಯಮಗಳ ಪಾಲಿಸಬೇಕೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಮಾಧ್ಯಮಗಳ ಮೂಲಕ ಕೋವಿಡ್ ನಿಯಮಗಳನ್ನ ಪಾಲಿಸುವಂತೆ ಸಾರ್ವಜನಿಕರಿಗೆ ಹೇಳುತ್ತಾ ಬಂದಿದ್ದೇನೆ. ಆದ್ರೂ ಜನ ಮಾತ್ರ ನಿಯಮ ಪಾಲನೆ ಆಗದ ಹಿನ್ನೆಲೆ ಕಠಿಣ ನಿಯಮ ಜಾರಿಗೊಳಿಸಲಾಗ್ತಿದೆ. ಕೊರೊನಾ ಎರಡನೇ ಅಲೆಯ ಹೊಸ್ತಿಲಿನಲ್ಲಿ ಎಲ್ಲ ಆರ್ಥಿಕ ಚಟುವಟಿಕೆಗಳಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡಿತ್ತು. ಸದ್ಯ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕೆಂದು ಸೂಚಿಸಿದರು.
ಈ ಎರಡು ತಿಂಗಳು ಯಾವುದೇ ಕ್ರಮ ತೆಗೆದುಕೊಳ್ಳದಿದ್ರೆ ಸರ್ಕಾರ ಜವಾಬ್ದಾರಿ ಆಗಬೇಕಾಗುತ್ತದೆ. ಇನ್ನೆರಡು ತಿಂಗಳು ಈ ಅಲೆಯ ತೀವ್ರತೆ ರಾಜ್ಯದಲ್ಲಿರಲಿದ್ದು, ಮೇ ಅಂತ್ಯಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಆಗಬಹುದು ಎಂದು ತಜ್ಞರು ಹೇಳಿದ್ದಾರೆ. ಹಾಗಾಗಿ ಮಕ್ಕಳು ಸೇರಿದಂತೆ ಜನರ ರಕ್ಷಣೆ ಸರ್ಕಾರದ ಕೆಲಸ. ಸಿಎಂ, ಮಂತ್ರಿಗಳು, ತಜ್ಞರು ಜೊತೆ ಚರ್ಚಿಸಿ ಸಲಹಾ ಸಮಿತಿಗಳ ವರದಿ ಆಧರಿಸಿ ಈ ಕಠಿಣ ನಿಯಮ ತರಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಒಳ್ಳೆ ಸಿನಿಮಾ ಕೊಲೆಯಾದಂತಾಗುತ್ತೆ, ಮಾ.31ರಂದು ರಾತ್ರಿ ಗೊತ್ತಾಗಿದ್ರೂ ರಿಲೀಸ್ ಮಾಡ್ತಿರ್ಲಿಲ್ಲ: ಪುನೀತ್
ಈ ಪರಿಸ್ಥಿತಿ ಕೈ ಮೀರಿ ಹೋಗಬಾರದೆಂಬ ಉದ್ದೇಶದಿಂದ ಅನಿವಾರ್ಯವಾಗಿ ನಿಯಮಗಳನ್ನ ಪಾಲನೆ ಮಾಡಬೇಕು. ನಾನು ಯಾರ ಒಬ್ಬರಿಗೂ ಮಾತನಾಡಲ್ಲ. ವಲಯವಾರು ಎಲ್ಲರ ಬಗ್ಗೆಯೂ ಗೌರವವಿದೆ. ಜಿಮ್, ಕ್ಲಬ್, ಸ್ವಿಮ್ಮಿಂಗ್ ಪೂಲ್, ಖಾಸಗಿ ಶಾಲೆಯ ಮಾಲೀಕರು ಸೇರಿದಂತೆ ಎಲ್ಲ ವರ್ಗದವರು ತಮಗೆ ರಿಯಾಯ್ತಿ ನೀಡಬೇಕೆಂದು ಮಾಧ್ಯಮಗಳ ಮುಂದೆ ಹೇಳುತ್ತಿದ್ದಾರೆ. ಈ ನಿಯಮಗಳೆಲ್ಲ ತಾತ್ಕಾಲಿಕ. ಇದರಿಂದಲೇ ಕೊರೊನಾ ಕಡಿಮೆ ಆಗುತ್ತೆ ಅಂತನೂ ಹೇಳಲ್ಲ. ಆದ್ರೆ ಮಹಾಮಾರಿಯ ನಿಯಂತ್ರಣಕ್ಕಾಗಿ ಕೆಲ ರೂಲ್ಸ್ ಪಾಲಿಸಬೇಕು ಎಂದು ಸಾರ್ವಜನಿಕರಲ್ಲಿ ಸುಧಾಕರ್ ಮನವಿ ಮಾಡಿಕೊಂಡರು. ಇದನ್ನೂ ಓದಿ: ಲಾಕ್ಡೌನ್, ನೈಟ್ ಕರ್ಫ್ಯೂ ಇಲ್ಲ, ಬಿಗಿ ಕ್ರಮ ಜಾರಿ: ಸಿಎಸ್ ರವಿಕುಮಾರ್