ಸಮಸ್ಯೆ ಹೇಳಿದ ಗ್ರಾ.ಪಂ. ಸದಸ್ಯನನ್ನ ವೇದಿಕೆಯಿಂದ ಇಳಿಸಿದ ಸಿದ್ದರಾಮಯ್ಯ

Public TV
1 Min Read
BGK SIDDU copy

ಬಾಗಲಕೋಟೆ: ಸಮಸ್ಯೆ ಹೇಳಿದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಮಾಜಿ ಸಿಎಂ, ಬದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಬಲವಂತವಾಗಿ ವೇದಿಕೆಯಿಂದ ಕೆಳಗೆ ಇಳಿಸಿದ್ದಾರೆ.

ಜಿಲ್ಲೆಯ ಬದಾಮಿ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಅಯೋಜಿಸಲಾಗಿತ್ತು. ಈ ಸಭೆಗೆ ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯ ಸಹ ಭಾಗಿಯಾಗಿದ್ದರು. ವೇದಿಕೆಯಲ್ಲೇ ಸಿದ್ದರಾಮಯ್ಯನವರ ಎದುರೇ ಕಿತ್ತಲಿ ಗ್ರಾಮದ ಗ್ರಾಪಂ ಸದಸ್ಯ ಸಂಗಣ್ಣ ಜಾಬಣ್ಣವರ್ ಅಸಮಧಾನ ಹೊರಹಾಕಿದರು.

BGK SIDDU 1 copy

ಯಾರೂ ಸಹ ಹಳ್ಳಿ ಭಾಗದ ಕಡೆಗೆ ಬಂದಿಲ್ಲ. ನಮ್ಮ ಗ್ರಾಮದ ಆಶ್ರಯ ಮನೆಗಳು ಹಾಳಾಗಿ ಹೋಗಿವೆ. ಸಿದ್ದರಾಮಯ್ಯನವರು ಬಂದು ಪಿಡಿಒಗಳಿಗೆ ಎಚ್ಚರಿಕೆ ನೀಡಿದರೂ ಏನು ಬದಲಾವಣೆಯಾಗಿಲ್ಲ. ಹಳ್ಳಿಗಳ ಕಡೆಗೆ ಬಂದು ಜನ್ರು ಸಮಸ್ಯೆಯನ್ನ ಆಲಿಸಬೇಕು ಎಂದು ಭಾಷಣದದಲ್ಲಿ ಸಂಗಣ್ಣ ಜಾವಣ್ಣವರ್ ಹೇಳಿದರು.

BGK SIDDU 2 copy

ಸಂಗಣ್ಣ ಜಾವಣ್ಣವರ್ ಸಮಸ್ಯೆ ಹೇಳುತ್ತಿದ್ದಂತೆ ಕೋಪಗೊಂಡ ಸಿದ್ದರಾಮಯ್ಯನವರು ಸದಸ್ಯನ ಬಳಿ ಬಂದು ಬಲವಂತವಾಗಿ ವೇದಿಕೆಯಿಂದ ಕೆಳಗೆ ಇಳಿಸಿದರು. ದಿಢೀರ್ ಘಟನೆಯಿಂದ ಕಾರ್ಯಕ್ರಮದಲ್ಲಿ ಗದ್ದಲ ಉಂಟಾಯಿತು.

Share This Article
Leave a Comment

Leave a Reply

Your email address will not be published. Required fields are marked *