ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ಹಾಗೂ ಉತ್ತರ ಪ್ರದೇಶದ ಮಾಜಿ ಸಚಿವ ಭಗವತಿ ಸಿಂಗ್ ಭಾನುವಾರ ನಿಧನರಾಗಿದ್ದಾರೆ.
ಭಗವತಿ ಸಿಂಗ್(83) ಲಕ್ನೋದ ಬಕ್ಷಿಕಾ ತಲಾಭ್ ಪ್ರದೇಶದ ಪದವಿ ಕಾಲೇಜಿನಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸಾಯುವುದಕ್ಕೂ ಮುನ್ನ ಭಗವತಿ ಸಿಂಗ್ ತಮ್ಮ ಶರೀರವನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ದಾನ ಮಾಡುವುದಾಗಿ ಮಾತು ನೀಡಿದ್ದರು. ಹೀಗಾಗಿ ಅವರ ಅಂತಿಮ ವಿಧಿ ವಿಧಾನವನ್ನು ಮಾಡುತ್ತಿಲ್ಲ ಎಂದು ವರದಿಯಾಗಿದೆ.
ಭಗವತಿ ಸಿಂಗ್ ಸಾವಿಗೆ ಮಾಜಿ ಸಿಎಂ ಅಖಿಲೇಶ್ ಯಾದವ್, ‘ದೇವರು ನಿಮ್ಮ ಆತ್ಮಕ್ಕೆ ಶಾಂತಿ ನೀಡಲಿ, ನಿಮ್ಮ ಕುಟುಂಬಕ್ಕೆ ನಷ್ಟವನ್ನು ಭರಿಸುವ ಶಕ್ತಿ ನೀಡಲಿ’ ಎಂದು ಸಂತಾಪ ಸೂಚಿಸಿದ್ದಾರೆ.
समाजवादी पार्टी के संस्थापक सदस्य , पूर्व सांसद एवं पूर्व मंत्री श्री भगवती सिंह जी का लखनऊ में निधन, अत्यंत दुखद!
शोकाकुल परिजनों के प्रति संवेदना!
ईश्वर दिवंगत आत्मा को शांति एवं शोक संतप्त परिजनों को इस दुख की घड़ी में संबल प्रदान करे।
भावभीनी श्रद्धांजलि! pic.twitter.com/EY5uRg0W98
— Akhilesh Yadav (@yadavakhilesh) April 4, 2021
ಸಮಾಜವಾದಿ ಪಕ್ಷದ ಸಂಸ್ಥಾಪಕರಾಗಿದ್ದ ಭಗವತಿ ಸಿಂಗ್, ಮುಲಾಯಂ ಸಿಂಗ್ ಯಾದವ್ ಅವರ ಆಪ್ತರಾಗಿದ್ದರು.