Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮುದ್ರದಲ್ಲಿ ಸಿಕ್ತು ಕೋಟಿ ಬೆಲೆಬಾಳುವ ತಿಮಿಂಗಿಲ ವಾಂತಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಸಮುದ್ರದಲ್ಲಿ ಸಿಕ್ತು ಕೋಟಿ ಬೆಲೆಬಾಳುವ ತಿಮಿಂಗಿಲ ವಾಂತಿ!

Karnataka

ಸಮುದ್ರದಲ್ಲಿ ಸಿಕ್ತು ಕೋಟಿ ಬೆಲೆಬಾಳುವ ತಿಮಿಂಗಿಲ ವಾಂತಿ!

Public TV
Last updated: April 24, 2021 9:10 pm
Public TV
Share
3 Min Read
Ambergris
SHARE

ಕಾರವಾರ: ಕೋಟ್ಯಂತರ ಬೆಲೆ ಬಾಳುವ ಅತ್ಯಂತ ವಿರಳವಾಗಿ ಸಿಗುವ ‘ತಿಮಿಂಗಿಲದ ವಾಂತಿ’ಯ (ಅಂಬೇರ್ಗ್ರಿಸ್) ಸುಮಾರು ಒಂದು ಕೆ.ಜಿ. ತೂಕದ ತುಣುಕು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರದಲ್ಲಿ ಮೀನುಗಾರನಿಗೆ ದೊರೆತಿದ್ದು, ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.

ಮುರುಡೇಶ್ವರದ ಕಡಲತೀರದಲ್ಲಿ ಮೀನುಗಾರಿಕೆ ನಡೆಸುತಿದ್ದ ಜನಾರ್ಧನ್ ಹರಿಕಾಂತ್ ಅವರಿಗೆ ಕಡಲತೀರದಲ್ಲಿ ತೆರಳುವಾಗ ತಿಮಿಂಗಿಲದ ವಾಂತಿ ಕಂಡಿದ್ದು ಕಲ್ಲಿನಾಕಾರದಲ್ಲಿತ್ತು. ಇದನ್ನು ಮನೆಗೆ ತಂದು ತಿಳಿದವರ ಮೂಲಕ ಪರೀಕ್ಷಿಸಿದಾಗ ಇದು ತಿಮಿಂಗಿಲದ ವಾಂತಿ ಎಂದು ಗೊತ್ತಾಗಿದ್ದು, ಕೋಟ್ಯಂತರ ರೂಪಾಯಿ ಬೆಲೆಬಾಳುತ್ತದೆ ಎಂದು ತಿಳಿದಿದ್ದಾರೆ. ನಂತರ ನಮ್ಮ ದೇಶದಲ್ಲಿ ಇದನ್ನು ಮಾರಲು ಅನುಮತಿ ಇಲ್ಲ ಎಂಬುದನ್ನು ತಿಳಿದ ಅವರು, ಹೊನ್ನಾವರ ವಿಭಾಗದ ಅರಣ್ಯಾಧಿಕಾರಿ ರಂಗನಾಥ್ ರವರಿಗೆ ಹಸ್ತಾಂತರಿಸಿದ್ದಾರೆ.

vlcsnap 2021 04 24 20h48m56s417 e1619277618230

ಏನಿದು ತಿಮಿಂಗಿಳದ ವಾಂತಿ? ವಿಶೇಷ ಏನು?
ಅಂಬೇರ್ಗ್ರಿಸ್ ಎಂದು ಇಂಗ್ಲೀಷ್ ನಲ್ಲಿ ಹೇಳುವ ಹಾಗೂ ಕನ್ನಡದಲ್ಲಿ ತಿಮಿಂಗಿಲ ವಾಂತಿ ಎಂದರೆ ತಿಮಿಂಗಿಲ ಸೇವಿಸಿದ ಆಹಾರ ಜೀರ್ಣವಾಗದೇ ಹೊರಕ್ಕೆ ಹಾಕಿದಾಗ ದ್ರವ ಮಿಶ್ರಿತ ಘನ ವಸ್ತುವಿಗೆ ಅಂಬೇರ್ಗ್ರಿಸ್ ಅಥವಾ ತಿಮಿಂಗಿಲ ವಾಂತಿ ಎಂದು ಹೇಳುತ್ತಾರೆ.

ಈ ಕುರಿತು ಕಾರವಾರದ ಕಡಲಜೀವ ವಿಜ್ಞಾನ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಶಿವಕುಮಾರ ಹರಗಿ ಮಾಹಿತಿ ನೀಡಿದ್ದು, ಎಲ್ಲ ತಿಮಿಂಗಿಲಗಳ ವಾಂತಿ ಹೆಚ್ಚು ಬೆಲೆಬಾಳದು. ಸ್ಪೆರ್ಮ್ ವೇಲ್ ಪ್ರಭೇದದ ತಿಮಿಂಗಿಲಗಳಿಂದ ಮಾತ್ರ ಅಂಬೇರ್ಗ್ರಿಸ್ ಹೊರ ಬರುತ್ತದೆ. ಪಶ್ಚಿಮ ಕರಾವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲೇ ಇದ್ದು, ಪಶ್ಚಿಮ ಭಾಗದಿಂದಲೇ ವಲಸೆ ಹೋಗುತ್ತವೆ. ಅವು ಮಣಕಿ (ಸ್ಕ್ವಿಡ್), ಕಪ್ಪೆ ಬೊಂಡಾಸ್ (ಕಟಲ್ ಫಿಶ್) ಮೀನುಗಳನ್ನು ಬೇಟೆಯಾಡಿ ತಿನ್ನುತ್ತವೆ.

vlcsnap 2021 04 24 20h49m01s548 e1619277658663

ಕೆಲವೊಮ್ಮೆ ಈ ಮೀನುಗಳ ಗಟ್ಟಿಯಾದ ಎಲುಬುಗಳು ತಿಮಿಂಗಿಲದಲ್ಲಿ ಸಂಪೂರ್ಣವಾಗಿ ಜೀರ್ಣವಾಗುವುದಿಲ್ಲ. ಅದು ಜೀರ್ಣಾಂಗದಲ್ಲೇ ತಿಂಗಳು, ವರ್ಷಗಟ್ಟಲೇ ಉಳಿಯುತ್ತದೆ. ಇದರಿಂದ ತಿಮಿಂಗಿಲ ಕಿರಿಕಿರಿ ಅನುಭವಿಸುತ್ತದೆ. ಕೊನೆಗೆ ವಾಂತಿ ಮಾಡಿ ಹೊರ ಹಾಕುತ್ತದೆ. ಕೆಲವೊಮ್ಮೆ ಮಲದಲ್ಲೂ ಸೇರಿರುತ್ತದೆ. ಮೀನಿನ ಮೂಳೆಗಳು ತಿಮಿಂಗಿಲದ ಹೊಟ್ಟೆಯಲ್ಲಿ ತಿಂಗಳುಗಟ್ಟಲೆ ಸಂಗ್ರಹವಾಗಿದ್ದಾಗ ಹಲವು ರಾಸಾಯನಿಕ ಪ್ರಕ್ರಿಯೆಗಳಿಗೆ ಒಳಗಾಗುತ್ತದೆ. ಅದು ಮೇಣದಂಥ ರಚನೆಯಾಗಿ ಪರಿವರ್ತನೆಯಾಗುತ್ತದೆ ಎಂದು ವಿವರಿಸಿದರು.

ಈ ಹಂತದಲ್ಲಿ ಆ ವಸ್ತು ಸುಗಂಧ ಪಡೆದುಕೊಂಡಿರುತ್ತದೆ. ತಿಮಿಂಗಿಲ ಹೊರಹಾಕಿದ ವಾಂತಿಯು ಮೊದಲು ಭಾರವಾಗಿದ್ದು, ನಂತರ ಸಮುದ್ರದಲ್ಲಿ ರಾಸಾಯನಿಕ ಪ್ರಕ್ರಿಯೆಯಲ್ಲಿ ಗಟ್ಟಿಯಾಗಿ, ನಿಧಾನ ಗತಿಯಲ್ಲಿ ನೀರಿನಲ್ಲಿ ತೇಲುತ್ತದೆ. ಕೆಲವೊಮ್ಮೆ ಪ್ರಖರ ಬಿಸಿಲಿಗೆ ಕರಗುವ ಸಾಧ್ಯತೆಯೂ ಇರುತ್ತದೆ. ಒಂದು ವೇಳೆ ತಿಮಿಂಗಿಲ ಮೀನುಗಳನ್ನು ತಿಂದ ಒಂದೆರಡು ವಾರಗಳಲ್ಲೇ ಎಲುಬುಗಳನ್ನು ಹೊರ ಹಾಕಿದರೆ ಅದು ಅಸಹನೀಯ ವಾಸನೆಯಿಂದ ಕೂಡಿರುತ್ತದೆ ಎಂದು ತಿಳಿಸಿದರು.

sperm whale

ಕೋಟಿ ಬೆಲೆ ಏಕೆ?
ಬಲು ಅಪರೂಪಕ್ಕೆ ಒಂದು ಬಾರಿ ಮಾತ್ರ ತಿಮಿಂಗಿಲಗಳು ವಾಂತಿ ಮಾಡಿಕೊಳ್ಳುತ್ತವೆ. ಒಂದು ತಿಮಿಂಗಿಲ ಒಂದು ಕೆ.ಜಿ. ಇಂದ ಹತ್ತು ಕೆ.ಜಿ.ಗೂ ಹೆಚ್ಚು ವಾಂತಿ ಮಾಡಿಕೊಳ್ಳುತ್ತದೆ. ಹೊಟ್ಟೆಯಲ್ಲಿ ಇದ್ದಾಗಲೇ ಜೀರ್ಣಾಂಗದಲ್ಲಿ ಇವು ರಾಸಾಯನಿಕಕ್ಕೆ ಒಳಗಾಗುವುದರಿಂದ ಇದರ ವಾಂತಿ ಯಲ್ಲಿ ಸುಗಂಧ ಭರಿತವಾಗಿರುತ್ತದೆ. ಮೊದಲು ಇದನ್ನು ಸುಟ್ಟಾಗ ವ್ಯಾಕ್ಸ್ ನಂತೆ ಕರಗಿ ಕೆಟ್ಟ ವಾಸನೆ ಬರುತ್ತದೆ. ಆದರೆ ನಂತರ ಸುಂಗಂಧಭರಿತವಾಗಿರುತ್ತದೆ.

sperm whale 2

ಸುಗಂಧ ದ್ರವ್ಯ ಉತ್ಪಾದನೆಯಲ್ಲಿ ಇದಕ್ಕೆ ಅತೀ ಬೇಡಿಕೆ ಇದೆ. ಹೀಗಾಗಿ ಪಾಶ್ಚಿಮಾತ್ಯ ದೇಶಗಳಲ್ಲಿ ಇದಕ್ಕೆ ಒಂದು ಕೆ.ಜಿ.ಗೆ ಕೋಟಿ ಬೆಲೆ ಇರುತ್ತದೆ. ಹೀಗಾಗಿ ವೇಲ್ ಗಳ ಮಾರಣ ಹೋಮ ಸಹ ನಡೆಯುತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಡಬ್ಲ್ಯೂಡಬ್ಲ್ಯೂಎಫ್ ಹಾಗೂ ನಮ್ಮ ದೇಶದ ಅರಣ್ಯ ಕಾಯ್ದೆ ಪ್ರಕಾರ ಇವುಗಳನ್ನು ಸಂಗ್ರಹಿಸುವುದು, ಮಾರುವುದು ಕಾನೂನು ಬಾಹಿರ, ಶಿಕ್ಷಾರ್ಹ ಅಪರಾಧವಾಗಿದೆ. ಹಲವು ದೇಶಗಳಲ್ಲಿ ಇವುಗಳ ಮಾರಾಟ, ಆಮದಿಗೆ ಅನುಮತಿ ಇದೆ. ಹೀಗಾಗಿ ಇದರ ಮೌಲ್ಯ ಹೆಚ್ಚು ಪಡೆದುಕೊಂಡಿದ್ದು, ಕಳ್ಳಹಾದಿಯಲ್ಲಿ ಸಹ ಮಾರಾಟವಾಗುತ್ತದೆ.

TAGGED:Public TVseaUttara Kannadawhaleಉತ್ತರ ಕನ್ನಡತಿಮಿಂಗಿಲಪಬ್ಲಿಕ್ ಟಿವಿಸಮುದ್ರ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
13 minutes ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
14 minutes ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
35 minutes ago
Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
51 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
52 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?