ಸರಕಾರದ ಕ್ರಮಕ್ಕೆ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಸ್ವಾಗತ

Public TV
1 Min Read
namaz

ಬೆಂಗಳೂರು: ಕೊರೊನಾ ಪರಿಹಾರ ಪ್ಯಾಕೇಜ್‍ನಲ್ಲಿ ಮಸ್ಜಿದ್ ಇಮಾಮರಿಗೂ ಸಹಾಯ ಧನ ಘೋಷಿಸಿರುವ ರಾಜ್ಯ ಸರಕಾರದ ಕ್ರಮವನ್ನು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಜ್ಯಾಧ್ಯಕ್ಷ ಹಝ್ರತ್ ಮೌಲಾನಾ ಅತೀಕುರ್ ರಹ್ಮಾನ್ ಅಶ್ರಫಿ ಸ್ವಾಗತಿಸಿದ್ದಾರೆ.

ಕೋವಿಡ್ ನಿಗ್ರಹಕ್ಕಾಗಿ ವಿಧಿಸಲಾಗಿದ್ದ ಲಾಕ್‍ಡೌನ್ ವೇಳೆ ರಾಜ್ಯ ಸರಕಾರವು ದೇವಸ್ಥಾನಗಳ ಅರ್ಚಕರಿಗೆ ಪರಿಹಾರ ಘೋಷಿಸಿತ್ತು. ಅದರಂತೆ ಮಸ್ಜಿದ್ ಇಮಾಮರಿಗೂ ಪರಿಹಾರ ಘೋಷಿಸಬೇಕೆಂದು ಈ ಮುನ್ನ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಜ್ಯಾಧ್ಯಕ್ಷ ಮೌಲಾನಾ ಅತೀಕುರ್ರಹ್ಮಾನ್ ಅಶ್ರಫಿರವರು ಮನವಿ ಮಾಡಿಕೊಂಡಿದ್ದರು.

bakrid namaz

ಕೊರೊನಾ ಮತ್ತು ಲಾಕ್ ಡೌನ್ ಸಂಕಷ್ಟದ ಪ್ರಾರಂಭದಿಂದಲೂ ಮಸ್ಜಿದ್ ಇಮಾಮರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಜೀವನ ನಿರ್ವಹಣೆಗಾಗಿ ಆದಾಯವಿಲ್ಲದೆ ಅವರು ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದರು. ಇದನ್ನು ಮನಗಂಡಿದ್ದ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್, ಇಮಾಮರಿಗೆ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಸರಕಾರವನ್ನು ನಿರಂತರವಾಗಿ ಆಗ್ರಹಿಸುತ್ತಾ ಬಂದಿತ್ತು. ಪತ್ರಿಕಾ ಪ್ರಕಟನೆ ಮೂಲಕ ಮತ್ತು ಶಾಸಕರು ಹಾಗೂ ಸರಕಾರದ ಅಧಿಕೃತರನ್ನು ಸಂಪರ್ಕಿಸಿ ತನ್ನ ಬೇಡಿಕೆಯನ್ನು ಮುಂದಿಟ್ಟಿತ್ತು. ಇದೀಗ ಪರಿಹಾರ ಪ್ಯಾಕೇಜ್ ನಲ್ಲಿ ಮಸ್ಜಿದ್ ಇಮಾಮರು ಮತ್ತು ಮುಅಝ್ಝಿನ್ ಗಳನ್ನು ಪರಿಗಣಿಸಿರುವುದು ಸಂತಸದ ವಿಚಾರವಾಗಿದೆ ಮತ್ತು ಇದಕ್ಕಾಗಿ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಜ್ಯ ಸರಕಾರಕ್ಕೆ ಅಭಿನಂದನೆಯನ್ನು ಸಲ್ಲಿಸಿದೆ. ಇದನ್ನು ಓದಿ: ಕೊರೊನಾ ನಿಯಮ ಉಲ್ಲಂಘನೆ-ಹುಟ್ಟುಹಬ್ಬ ಆಚರಿಸಿಕೊಂಡ ಸಬ್ ಇನ್‌ಸ್ಪೆಕ್ಟರ್

BSY 11

ಪರಿಹಾರ ವಿತರಣೆಯ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಮತ್ತು ಸಂಕಷ್ಟದಲ್ಲಿರುವ ಎಲ್ಲಾ ಇಮಾಮರಿಗೂ ಸಮರ್ಪಕವಾಗಿ ಸಹಾಯಧನ ತಲುಪಿಸಲು ಕ್ರಮಕೈಗೊಳ್ಳಬೇಕು. ಅದೇ ರೀತಿ ಈ ಪರಿಹಾರ ಪ್ಯಾಕೇಜನ್ನು ರಾಜ್ಯದಲ್ಲಿರುವ ಮದ್ರಸ ಅಧ್ಯಾಪಕರಿಗೂ ವಿಸ್ತರಿಸಬೇಕೆಂದು ಮೌಲಾನಾ ಅತೀಕುರ್ ರಹ್ಮಾನ್ ಅಶ್ರಫಿ ಒತ್ತಾಯಿಸಿದ್ದಾರೆ. ಇದನ್ನು ಓದಿ:ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

Share This Article
Leave a Comment

Leave a Reply

Your email address will not be published. Required fields are marked *