Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ಆದೇಶಗಳು, ಒತ್ತಾಯಗಳಿಂದ ಕನ್ನಡ ಕಲಿಸುವ ಕೆಲಸ ಅಸಾಧ್ಯ: ಡಾ.ಗುರುರಾಜ ಕರ್ಜಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರದ ಆದೇಶಗಳು, ಒತ್ತಾಯಗಳಿಂದ ಕನ್ನಡ ಕಲಿಸುವ ಕೆಲಸ ಅಸಾಧ್ಯ: ಡಾ.ಗುರುರಾಜ ಕರ್ಜಗಿ

Bengaluru City

ಸರ್ಕಾರದ ಆದೇಶಗಳು, ಒತ್ತಾಯಗಳಿಂದ ಕನ್ನಡ ಕಲಿಸುವ ಕೆಲಸ ಅಸಾಧ್ಯ: ಡಾ.ಗುರುರಾಜ ಕರ್ಜಗಿ

Public TV
Last updated: July 30, 2021 4:37 pm
Public TV
Share
2 Min Read
GURURAJ KARAJAGI
SHARE

ಬೆಂಗಳೂರು: ಪ್ರೀತಿಯಿಂದ ಕನ್ನಡ ಕಲಿಸುವ ಕೆಲಸವಾಗಬೇಕು ಹೊರತು ಸರ್ಕಾರದ ಆದೇಶಗಳು, ಒತ್ತಾಯಗಳಿಂದ ಕನ್ನಡ ಕಲಿಸುವ ಕೆಲಸ ಅಸಾಧ್ಯ. ಜನರ ಹೃದಯದಲ್ಲಿ ಕನ್ನಡ ಭಾಷೆ ಕಲಿಯುವ ಇಚ್ಛೆ ಮೂಡಬೇಕು ಎಂದು ಶಿಕ್ಷಣ ತಜ್ಞರಾದ ಡಾ.ಗುರುರಾಜ ಕರ್ಜಗಿ ಅಭಿಪ್ರಾಯಪಟ್ಟಿದ್ದಾರೆ.

GURURAJ KARAJAGI AND NAGABARANA

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕನ್ನಡ ಜಾಗೃತಿ ಸಮಿತಿಯ ಸದಸ್ಯರ ಒಂದು ದಿನದ ರಾಜ್ಯಮಟ್ಟದ ಕಾರ್ಯಗಾರವನ್ನು ಬೆಂಗಳೂರಿನ ನಹಾದೇವ ದೇಸಾಯಿ ಸಭಾಂಗಣದಲ್ಲಿ ಇಂದು ಬೆಳಗ್ಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ.ಗುರುರಾಜ ಕರ್ಜಗಿ, ಕನ್ನಡದ ಜಾತ್ರೆಗಳು, ಉತ್ಸವಗಳು, ಕಾರ್ಯಕ್ರಮಗಳ ಕನ್ನಡದ ತೋರಣಗಳಂತೆ ಕಾಣುತ್ತವೆ. ಕನ್ನಡಕ್ಕೆ ತೋರಣದ ಜೊತೆ ಹೂರಣವೂ ಬೇಕು. ಹೀಗಾಗಿ ಕನ್ನಡ ಭಾಷೆಯ ಹೂರಣದ ಕೆಲಸವಾಗಬೇಕು ಎಂದು ತಿಳಿಸಿದರು.

KANNADA medium

ಕನ್ನಡವನ್ನು ದೈಹಿಕವಾಗಿ, ಭಾವನಾತ್ಮಕವಾಗಿ, ಬೌದ್ಧಿಕವಾಗಿ ಹಾಗೂ ಆಧ್ಯಾತ್ಮಿಕವಾಗಿ ಬೆಳೆಸುವ ಕೆಲಸವಾಗಬೇಕು. ಸಾಹಿತಿಗಳು ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಬರೆಯಬೇಕು. ಹೀಗೆ ರಚಿತಗೊಂಡ ಸಾಹಿತ್ಯವನ್ನು ಜನ ಸಾಮಾನ್ಯರಿಗೆ ತಲುಪಿಸುವ ಕೆಲಸವು ಆಗಬೇಕು. ಜೀವನ ಮಾರ್ಗಕ್ಕಾಗಿ ಪೋಷಕರು ತಮ್ಮ ಮಕ್ಕಳಿಗೆ ಇಂಗ್ಲಿಷ್ ಭಾಷೆ ಕಲಿಸಲು ಮುಂದಾಗುತ್ತಾರೆ. ಕನ್ನಡದಿಂದಲೂ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂಬುದು ಪೋಷಕರಿಗೆ ಅರ್ಥವಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲೆಗೊಂದು ಕನ್ನಡ ಮಾಧ್ಯಮ ಮಾದರಿ ಶಾಲೆಗಳನ್ನು ತೆರೆದು ಅಲ್ಲಿನ ಮಕ್ಕಳು ತಾಂತ್ರಿಕ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲೂ ಯಶಸ್ವಿಯಾಗುತ್ತಾರೆ ಎಂಬುದನ್ನು ಸಾಬೀತುಪಡಿಸಬೇಕು. ಆಗ ಪೋಷಕರು ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳಿಗೆ ದಾಖಲಿಸಲು ಮುಂದಾಗುತ್ತಾರೆ. ಕನ್ನಡ ಜಾಗೃತಿ ಸಮಿತಿ ಸದಸ್ಯರು ತಮ್ಮ ಊರುಗಳಲ್ಲಿ ವಾರಕ್ಕೊಂದು ಕನ್ನಡದ ಕಾರ್ಯಕ್ರಮಗಳನ್ನು ಮಾಡಿ ಜನಸಾಮಾನ್ಯರಿಗೆ ಕನ್ನಡ ಭಾಷೆಯನ್ನು ತಲುಪಿಸಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಯಲ್ಲಿ ಬುಕ್ ಬ್ಯಾಂಕ್ ಸ್ಥಾಪನೆಗೆ ಆದೇಶ

ಸಂಸ್ಕøತಿ ಚಿಂತಕ ಸುಚೇಂದ್ರ ಪ್ರಸಾದ್ ಮಾತನಾಡಿ, ಮನೋ ವಿಕೃತಿಗಳನ್ನು ತೊಡೆಯದೆ ಜಾಗೃತಿ ಆಗಲು ಸಾಧ್ಯವಿಲ್ಲ. ನಮ್ಮ ಭಾಷೆಗೆ ಸಂಬಂಧಿಸಿದಂತೆ ಅಭಿವೃದ್ಧಿ ಪ್ರಾಧಿಕಾರ, ಜಾಗೃತಿ ಸಮಿತಿಗಳು ರಚನೆಗೊಂಡಲೇ ಕನ್ನಡಿಗರು ಜಾಗೃತಗೊಳ್ಳಬೇಕಿತ್ತು. ಇದಾಗದಿರುವುದು ದುರದೃಷ್ಟಕರ. ಭಾಷೆಯ ಬದ್ಧತೆಯ ಕೆಲಸಗಳನ್ನು ಮರೆತು ಅಧಿಕಾರದ ಗಾದಿಗಾಗಿ ತಾ ಮುಂದು ನಾ ಮುಂದು ಎಂದು ಮುಗಿ ಬೀಳುವಲ್ಲೇ ಹೆಚ್ಚಿನ ಮಂದಿ ನಿರತರಾಗಿರುವುದು ಬೇಸರದ ಸಂಗತಿ ಎಂದು ನುಡಿದರು.

GURURAJ KARJAGI AND NAGABARANA

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಮಾತನಾಡಿ, ಕನ್ನಡ ಜಾಗೃತಿ ಸಮಿತಿ ಸದಸ್ಯರು ಕನ್ನಡದ ಕಾವಲುಪಡೆಯಂತೆ ಕೆಲಸ ಮಾಡಬೇಕು. ಸದಸ್ಯರು ತಮ್ಮ ಆತ್ಮ ವಿಮರ್ಶೆ ಮಾಡಿಕೊಂಡು ಆಶಯಗಳನ್ನು ಗುರುತಿಸಿಕೊಂಡು ಕನ್ನಡದ ಕೆಲಸಗಳನ್ನು ಮಾಡಬೇಕು. ಕನ್ನಡ ಕಾಯಕ ವರ್ಷದ ಶಪಥವನ್ನು ಈಡೀರಿಸುವ ನಿಟ್ಟಿನಲ್ಲಿ ಬಹಳ ಗಟ್ಟಿತನದಿಂದ ಕನ್ನಡದ ಕಾಯಕವನ್ನು ಮಾಡಬೇಕು ಎಂದು ಸೂಚಿಸಿದರು.

ಕಾರ್ಯಕ್ರಮಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಡಾ.ಸಂತೋಷ ಹಾನಗಲ್ಲ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಪ್ತ ಕಾರ್ಯದರ್ಶಿ ಡಾ.ವೀರಶೆಟ್ಟಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.

TAGGED:Dr Guraj KarajagigovernmentkannadaKannada SchoollanguagePublic TVSuchendra PrasadTS Nagabharanaಕನ್ನಡಕನ್ನಡ ಜಾಗೃತಿ ಸಮಿತಿಕನ್ನಡ ಶಾಲೆಟಿ.ಎಸ್ ನಾಗಾಭರಣಡಾ.ಗುರುರಾಜ ಕರ್ಜಗಿಪಬ್ಲಿಕ್ ಟಿವಿಭಾಷೆಸರ್ಕಾರಸುಚೇಂದ್ರ ಪ್ರಸಾದ್
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

ಸಾಂದರ್ಭಿಕ ಚಿತ್ರ
Bengaluru City

ಸಹಜ ಸ್ಥಿತಿಗೆ ಮರಳುತ್ತಿದೆ ಆಟೋ ಚಾಲಕರ ಗ್ಯಾಸ್ ಪರದಾಟ

Public TV
By Public TV
19 minutes ago
Shobha Karandlaje 1
Bagalkot

ಮೀಸಲು ಕಾನೂನು – ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸ್ತ್ರೀ ಸಮಾವೇಶ: ಶೋಭಾ ಕರಂದ್ಲಾಜೆ

Public TV
By Public TV
30 minutes ago
Islamabad Talks
Latest

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ ಆರಂಭ – ಇರಾನಿನ ಕೆಲ ಬೇಡಿಕೆಗಳಿಗೆ ಅಮೆರಿಕ ತಾತ್ವಿಕ ಒಪ್ಪಿಗೆ

Public TV
By Public TV
51 minutes ago
BMW Car Accident
Crime

ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ – ಹೈಕೋರ್ಟ್‌ನ ಹಿರಿಯ ವಕೀಲ ಸಾವು

Public TV
By Public TV
1 hour ago
zameer ahmed s.s.mallikarjun
Bengaluru City

ದಾವಣಗೆರೆ ದಕ್ಷಿಣ ದಂಗಲ್ ಎಫೆಕ್ಟ್ – ಸ್ವಪಕ್ಷದಲ್ಲೇ ಸಚಿವ ಜಮೀರ್‌ಗೆ ಟ್ರಬಲ್, ತಿರುಗಿಬಿದ್ದ ಮತ್ತೊಂದು ಮುಸ್ಲಿಂ ಬಣ

Public TV
By Public TV
2 hours ago
Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?