Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಗೆ ಆರ್‌ಎಸ್‌ಎಸ್ ವಲಯದಲ್ಲಿ ಆಕ್ಷೇಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರದ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಗೆ ಆರ್‌ಎಸ್‌ಎಸ್ ವಲಯದಲ್ಲಿ ಆಕ್ಷೇಪ

Bengaluru City

ಸರ್ಕಾರದ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಗೆ ಆರ್‌ಎಸ್‌ಎಸ್ ವಲಯದಲ್ಲಿ ಆಕ್ಷೇಪ

Public TV
Last updated: June 28, 2020 8:08 pm
Public TV
Share
2 Min Read
bsy 4
SHARE

ಬೆಂಗಳೂರು: ಯಾರು ಬೇಕಾದರೂ ಕೃಷಿಭೂಮಿ ಖರೀದಿಸಬಹುದೆಂಬ ನಿಯಮವನ್ನು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜಾರಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಶಾಕಿಂಗ್ ನ್ಯೂಸ್. ಬಿಜೆಪಿ ಸರ್ಕಾರದ ಈ ನಿರ್ಧಾರಕ್ಕೆ ಆರ್‌ಎಸ್‌ಎಸ್ ಚಿಂತನೆಗಳಿಂದ ಪ್ರೇರಿತರಾಗಿರುವ ಇತರೇ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

ಭಾರತೀಯ ಕಿಸಾನ್ ಸಂಘ, ಸ್ವದೇಶಿ ಜಾಗರಣ ಮಂಚ್ ಮತ್ತು ಕೃಷಿ ಪ್ರಯೋಗ ಪರಿವಾರಗಳಿಂದ ಕಾಯ್ದೆಯ ತಿದ್ದುಪಡಿಗೆ ಆಕ್ಷೇಪ ವ್ಯಕ್ತವಾಗಿದೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಸಂಘಟನೆಗಳ ಮುಖ್ಯಸ್ಥರ ನಿಯೋಗ, ಭೂ ಸುಧಾರಣಾ ತಿದ್ದುಪಡಿ ಬಗ್ಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಿದೆ.

BSY 3

ಭಾರತೀಯ ಕಿಸಾನ್ ಸಂಘ ದ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಾಸರಘಟ್ಟ, ಸ್ವದೇಶಿ ಜಾಗರಣ ಮಂಚ್ ನ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಜಗದೀಶ್, ಅಖಿಲ ಭಾರತ ಸಂಯೋಜಕ್ ಪ್ರೊ.ಕುಮಾರಸ್ವಾಮಿ, ಕೃಷಿ ಪ್ರಯೋಗ ಪರಿವಾರದ ಅರುಣ ಮತ್ತು ವೃಷಾಂಕ್ ಭಟ್ ಇದ್ದ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನು ಅವರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿತ್ತು.

land reform

ಸಂಘಟನೆಗಳ ಒತ್ತಾಯ ಮತ್ತು ಆಕ್ಷೇಪಣೆಗಳೇನು?
1. 79 ಎ, ಬಿ ತಿದ್ದುಪಡಿ ಮೂಲಕ ರೈತರಲ್ಲದವರಿಗೆ ಕೃಷಿ ಭೂಮಿ ಖರೀದಿಸಲು ಅವಕಾಶ ಕೊಡುವುದು, ಸ್ವಾಗತಾರ್ಹ. ಕೃಷಿಗೆ ಹೆಸರು, ವಿದ್ಯಾವಂತರು ಬರುವುದು ಒಳ್ಳೆಯದೇ ಆದರೆ ಹಾಗೆ ಕೃಷಿ ಭೂಮಿ ಪಡೆದವರು ಅಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಯನ್ನು ಮಾಡಬೇಕು ಕೈಗಾರಿಕಾ ಉದ್ದೇಶಕ್ಕೆ ಈ ಭೂಮಿಯನ್ನು ಬಳಸಬಾರದು ಮತ್ತು ಮುಂದೆ ಸದರಿ ಭೂಮಿಯನ್ನು ಕೈಗಾರಿಕೆ ಉದ್ದೇಶಕ್ಕೆ ಮಾರುವ ಅವಕಾಶವೂ ಇರಬಾರದು ಎಂಬುದು ಆಗ್ರಹ.
2. ಆದರೆ ಸರ್ಕಾರದ ಈ ಕಾಯ್ದೆ ತಿದ್ದುಪಡಿ ಪ್ರಸ್ತಾಪ ಕೈಗಾರಿಕೆಗಳಿಗೆ, ರಿಯಲ್ ಎಸ್ಟೇಟ್ ಉದ್ಯಮಕ್ಕೆ ಪೂರಕವಾಗಿದೆ ಎಂಬ ವಾದ ಕೇಳಿಬರುತ್ತಿದೆ. ಸರ್ಕಾರ ರೈತರ ಪರವಾಗಿ ಸ್ಪಷ್ಟ ನಿಲುವು ಪ್ರಕಟಿಸದಿರುವುದು ಆತಂಕಕ್ಕೆ ಕಾರಣವಾಗಿದೆ.
3. ಹೀಗಾಗಿ ಕಾಯ್ದೆಗೆ ತಿದ್ದುಪಡಿ ತರುವ ಮೊದಲು ನೀವು ರೈತ ಸಂಘಟನೆಗಳೊಂದಿಗೆ ಚರ್ಚಿಸಬೇಕು. ವಿಷಯ ಪರಿಣಿತರ ಸಮಿತಿ ರಚಿಸಿ ಸಲಹೆ ಪಡೆಯಬೇಕು.

farmers
4 ಹೊಸದಾಗಿ ಕೃಷಿ ಭೂಮಿ ಖರೀದಿಸುವರಿಗೆ ಗರಿಷ್ಠ ಮಿತಿಯನ್ನು ಹಿಂದಿನಂತೆಯೇ 54 ಎಕರೆಗೆ ಮುಂದುವರಿಸುವುದು ಮತ್ತು ಹೊಸದಾಗಿ ಕೃಷಿ ಭೂಮಿ ಖರೀದಿಸಿದರು ಕನಿಷ್ಠ 8 ವರ್ಷ ಮಾರುವಂತಿಲ್ಲ ಎಂಬ ಷರತ್ತಿರಲಿ.
5, ಕೃಷಿ ಭೂಮಿಯಲ್ಲಿ ಇಂತಹ ಕೃಷಿ ಪೂರಕ ಘಟಕಗಳನ್ನು ನಿರ್ಮಿಸಲು ಕಂದಾಯ ಇಲಾಖೆಯ ಅನುಮತಿಯ ಅಗತ್ಯ ಇರಕೂಡದು. ರೈತರಿಗೆ ಮನೆ, ಕೊಟ್ಟಿಗೆ, ಕೃಷಿ ಸಂಸ್ಕರಣಾ ಘಟಕ, ಗೋದಾಮು, ಹೋಮ್ ಸ್ಟೇ, ಒಂದು ಎಕರೆಗಿಂತ ಹೆಚ್ಚಿನ ಜಾಗದಲ್ಲಿ ಘಟಕಗಳು ಬಂದಲ್ಲಿ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳ ಅನುಮತಿ ಅಗತ್ಯ ಎಂದು ನಮೂದಿಸಬೇಕು.
6 ಟ್ರಸ್ಟ್, ಕಂಪನಿ, ರಾಜ್ಯದ ಕೇಂದ್ರದ ಬಹುರಾಜ್ಯ ಸಹಕಾರಿ ಕಾಯ್ದೆಗಳಲ್ಲಿ ನೋಂದಣಿ ಮಾಡುವ ಸಂಸ್ಥೆಗಳು ರೈತರಿಂದ ಭೂಮಿ ಖರೀದಿಸುವಾಗ ಖರೀದಿಸುವವರ ಪೂರ್ತಿ ವಿವರ ಮತ್ತು ಖರೀದಿಸುವ ಉದ್ದೇಶ ಮಾರುವ ರೈತರಿಗೆ ತಿಳಿಯುವಂತಾಗಬೇಕು.

agriculture farmers 2
6 ಪ್ಲಾನೇಷನ್ ಕಾಯ್ದೆ ಅಡಿಯಲ್ಲಿ ಸಾವಿರಾರು ಎಕರೆ ಭೂಮಿ ಹೊಂದಲು ಅವಕಾಶವಿದೆ. ಈ ಕಾಯ್ದೆಯನ್ನು ಮರುಪರಿಶೀಲಿಸಬೇಕು.
8 ನೀರಾವರಿ ಕಲ್ಪಿಸಲಾಗಿದೆ ಸರ್ಕಾರ ಸಾವಿರಾರು ಕೋಟಿ ಹಣ ಖರ್ಚು ಮಾಡಿದೆ. ಈಗ ಅದೆ ನೀರಾವರಿ ಭೂಮಿಯನ್ನು ಕೈಗಾರಿಕೆಗೆ ನೀಡುವ ಬಗ್ಗೆ ಬಿಗಿ ನೀತಿ ಬೇಕು.
9. ಭೂ ಸುಧಾರಣಾ ಕಾಯಿಯಲ್ಲಿ ತರುವ ಮಾರ್ಪಾಡುಗಳನ್ನು ಪುರ್ವಾನ್ವಯದಿಂದ ಜಾರಿಗೊಳಿಸುವುದು ಬೇಡ. ಹೀಗೆ ಮಾಡುವುದರಿಂದ ಸರ್ಕಾರ ಹೊಸಬರನ್ನು ಕೃಷಿ ಕ್ಷೇತ್ರಕ್ಕೆ ಹಿತ ರಕ್ಷಣೆಗೆ ಬದ್ಧವಾಗಿದೆ ಎಂಬ ಸಂದೇಶ ಸಮಾಜಕ್ಕೆ ಹೋಗುತ್ತದೆ.

TAGGED:AmendmentbengalurugovernmentLand Reforms ActObjectionOrganizationsPublic TVಆಕ್ಷೇಪಣೆಆರ್‍ಎಸ್‍ಎಸ್ತಿದ್ದುಪಡಿಪಬ್ಲಿಕ್ ಟಿವಿಬೆಂಗಳೂರುಭೂ ಸುಧಾರಣೆ ಕಾಯ್ದೆಸಂಘಟನೆಗಳುಸರ್ಕಾರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

byadarahalli Crime
Bengaluru City

ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

Public TV
By Public TV
17 minutes ago
DK Shivakumar 1 1
Bengaluru City

ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ಪವರ್ ಕ್ಲೈಮ್!

Public TV
By Public TV
44 minutes ago
Mantralaya Hundi Counting 1 1
Districts

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

Public TV
By Public TV
2 hours ago
Trump announces three week extension of Israel Lebanon ceasefire
Latest

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Public TV
By Public TV
2 hours ago
Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
2 hours ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?