Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ಮಾರ್ಗಸೂಚಿಯಿಂದ ಸಾಧ್ಯವಿಲ್ಲ, ಜನರು ಎಚ್ಚೆತ್ತುಕೊಂಡಾಗ ಮಾತ್ರ ಕೊರೊನಾ ನಿಯಂತ್ರಣ: ಡಿವಿಎಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರದ ಮಾರ್ಗಸೂಚಿಯಿಂದ ಸಾಧ್ಯವಿಲ್ಲ, ಜನರು ಎಚ್ಚೆತ್ತುಕೊಂಡಾಗ ಮಾತ್ರ ಕೊರೊನಾ ನಿಯಂತ್ರಣ: ಡಿವಿಎಸ್

Bengaluru City

ಸರ್ಕಾರದ ಮಾರ್ಗಸೂಚಿಯಿಂದ ಸಾಧ್ಯವಿಲ್ಲ, ಜನರು ಎಚ್ಚೆತ್ತುಕೊಂಡಾಗ ಮಾತ್ರ ಕೊರೊನಾ ನಿಯಂತ್ರಣ: ಡಿವಿಎಸ್

Public TV
Last updated: July 18, 2021 7:52 pm
Public TV
Share
2 Min Read
Sadananda Gowda GOPALAIAH e1626617864557
SHARE

ಬೆಂಗಳೂರು: ಸರ್ಕಾರ ನಿಯಮಗಳನ್ನು ಜಾರಿ ಮಾಡಿದ ತಕ್ಷಣ ಸೋಂಕು ನಿಯಂತ್ರಣಕ್ಕೆ ಬಂದುಬಿಡುತ್ತದೆ ಎಂದುಕೊಳ್ಳಬೇಡಿ. ಪ್ರತಿಯೊಬ್ಬರು ಎಚ್ಚೆತ್ತುಕೊಂಡು ನಿಮ್ಮ ನಿಮ್ಮ ಮನೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ, ಅನಗತ್ಯವಾಗಿ ಹೊರಗೆ ಹೋಗದಿರುವುದು ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಂಡರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬದಂತೆ ತಡೆಗಟ್ಟುವುದಾದರೆ ಸಾರ್ವಜನಿಕರ ಸಹಕಾರ ಅತ್ಯಂತ ಮಹತ್ವದ್ದು ಎಂದು ಅಭಿಪ್ರಾಯಪಟ್ಟರು.

corona 1 medium

ದೇಶದಲ್ಲಿ ಪ್ರಧಾನಿ ನರೇಂದ್ರಮೋದಿ, ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ನಿಯಂತ್ರಣವನ್ನು ಅತ್ಯಂತ ಸಮರ್ಪಕವಾಗಿ ನಿಯಂತ್ರಿಸಿದ್ದಾರೆ. ಅತ್ಯಂತ ಸೋಂಕು ಹೊಂದಿರುವ ಅಪಖ್ಯಾತಿಗೆ ಗುರಿಯಾಗಿದ್ದ ಭಾರತ ಇಂದು ವಿಶ್ವವೇ ನಿಬ್ಬೆರಗಾಗುವಂತೆ ಕೊರೊನಾ ನಿಯಂತ್ರಣ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಬಕಾರಿ ಇಲಾಖೆ ಸಚಿವ ಗೋಪಾಲಯ್ಯನವರು ಹಾಸನ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣಕ್ಕೆ ಶಕ್ತಿಮೀರಿ ಶ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಆಹಾರದ ಕಿಟ್ ವಿತರಣೆ, ಸಾರ್ವಜನಿಕರಿಗೆ ಉಚಿತವಾಗಿ ಆಹಾರಧಾನ್ಯಗಳ ವಿತರಣೆ, ಮಾಸ್ಕ್ ಸ್ಯಾನಿಟೈಸರ್, ಲಸಿಕೆ, ಔಷಧಿಗಳನ್ನು ಕೊಡುವ ಮೂಲಕ ನೊಂದವರ ಕಣ್ಣೀರನ್ನು ಒರೆಸಿದ್ದಾರೆ ಎಂದು ಪ್ರಶಂಸಿಸಿದರು. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.1.09ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,708 ಕೊರೊನಾ ಕೇಸ್

BSY MODI MEETING

ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ದೇಗುಲವಿದ್ದಂತೆ. ಇದು ನೊಂದವರ ಪಾಲಿಗೆ ಕಣ್ಣೀರು ಒರೆಸುವ ಆಲಯ. ಹಸಿದವರ ಪಾಲಿಗೆ ದೇಗುಲವಿದ್ದಂತೆ. ಇದನ್ನು ಮಾಡಿ ತೋರಿಸಿದ್ದು ಗೋಪಾಲಯ್ಯನವರ ಹೆಗ್ಗಳಿಕೆ ಎಂದು ಪ್ರಶಂಸಿದರು.

ಲಾಕ್ ಡೌನ್ ಸಂದರ್ಭದಲ್ಲೂ ನಂಬಿದವರನ್ನು ಕೈಬಿಡದೆ ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಆದಷ್ಟು ಶೀಘ್ರ ಎಲ್ಲರೂ ಕೊರೊನಾ ಮುಕ್ತರಾಗಿ ಎಲ್ಲರಿಗೂ ಉದ್ಯೋಗ ಸಿಗುವಂತಾಗಲಿ ಎಂದು ಸದಾನಂದಗೌಡ ಆಶಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ರೈತ ನಾಯಕ ಜಿ.ಮಾದೇಗೌಡ ಅವರು ಕಾವೇರಿ ನದಿನೀರಿಗಾಗಿ ನಡೆಸಿದ ಹೋರಾಟವನ್ನು ಅವರು ಸ್ಮರಿಸಿದರು.

ಮಹಾಲಕ್ಷ್ಮಿ ಲೇಔಟ್ ನ ನಮ್ಮ ಶಾಸಕರ ಕಚೇರಿಯಲ್ಲಿ ಇಂದು ಹಿರಿಯ ಗಾಂಧಿವಾದಿ ಮಾಜಿ ಸಂಸದ ಜಿ.ಮಾದೇಗೌಡರ ಭಾವಚಿತ್ರಕ್ಕೆ ಮಾನ್ಯ ಸಂಸದ ಶ್ರೀ ಡಿ.ವಿ.ಸದಾನಂದ ಗೌಡ ಅವರೊಂದಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ರಾಘವೇಂದ್ರ ಶೆಟ್ಟಿ, ರಾಜ್ಯ ಒಬಿಸಿ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ಹರೀಶ್, ಮುಂತಾದವರು ಉಪಸ್ಥಿತರಿದ್ದರು. pic.twitter.com/8b2nOxYP08

— K Gopalaiah (@GopalaiahK) July 18, 2021

ಅಬಕಾರಿ ಸಚಿವ ಗೋಪಾಲಯ್ಯ ಮಾತನಾಡಿ, ಕೊರೊನಾದಂತಹ ಕಷ್ಟದ ಸಂದರ್ಭದಲ್ಲೂ ನನ್ನ ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಿಕೊಡುವ ಪ್ರಾಮಾಣಿಕ ಕೆಲಸ ಮಾಡುತ್ತಿದ್ದೇನೆ ಇಂದು ನಾನು ಈ ಮಟ್ಟಕ್ಕೆ ಬೆಳೆಯಬೇಕಾದರೆ ನಿಮ್ಮ ಆಶೀರ್ವಾದವೇ ಕಾರಣ. ನನಗೆ ಎಷ್ಟೇ, ಕಷ್ಟ ನೋವುಗಳಿದ್ದರೂ ಇಂತಹ ಸಂದರ್ಭದಲ್ಲಿ ನಿಮ್ಮನ್ನು ಕೈಬಿಡುವುದಿಲ್ಲ ಎಂದು ಹೇಳಿದರು.

ಸಾರ್ವಜನಿಕರು ಕೊರೊನಾ ನಮ್ಮನ್ನು ಬಿಟ್ಟು ಹೋಗಿದೆ ಎಂದು ಭಾವಿಸಿಕೊಳ್ಳಬೇಡಿ. ಅದು ಈಗಲೂ ಇದೆ. ಮೂರನೇ ಅಲೆ ಬರಬಹುದೆಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಎಚ್ಚೆತ್ತುಕೊಂಡು ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಕ್ಷೇತ್ರದ ಜನರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಒ ಬಿ ಸಿ ಅಧ್ಯಕ್ಷ ನೆ ಲ ನರೇಂದ್ರ ಬಾಬು ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ .ಮಾಜಿ ಉಪ ಮೇಯರ್ ಹರೀಶ್. ಮುಖಂಡರುಗಳಾದ ಜಯರಾಮಯ್ಯ ವೆಂಕಟೇಶ ಮೂರ್ತಿ ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು.

TAGGED:CoronaCorona VirusCovid 19Karnarakasadananda gowdaಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಬೆಂಗಳೂರು
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

Hubballi Rape Case
Crime

ರೇಪ್ ಮಾಡಿ ವಿಡಿಯೋ ಹರಿಬಿಟ್ಟ ದುರುಳರು – ಕಾಮುಕರಿಗೆ ಥಳಿಸಿ ಪೊಲೀಸರಿಗೊಪ್ಪಿಸಿದ ಜನ

Public TV
By Public TV
11 minutes ago
Karwar
Crime

JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್‌ – ಆರೋಪಿ ಎಸ್ಕೇಪ್‌

Public TV
By Public TV
14 minutes ago
elon musk and x
Latest

ಅಶ್ಲೀಲತೆ ಪ್ರಸಾರ – ಕೇಂದ್ರದ ಎಚ್ಚರಿಕೆ ಬೆನ್ನಲ್ಲೇ ‌`X’ ನಿಂದ 3,500 ಪೋಸ್ಟ್, 600 ಖಾತೆ ಡಿಲೀಟ್‌

Public TV
By Public TV
30 minutes ago
Ballari Violence BJP preparing for Bellari to Bengaluru Padayatra on jan 17
Bellary

ಸರ್ಕಾರದ ವಿರುದ್ಧ ತೊಡೆ ತಟ್ಟಿದ ಗಣಿ ಧಣಿಗಳು – ಬಳ್ಳಾರಿ ಟು ಬೆಂಗಳೂರು ಪಾದಯಾತ್ರೆಗೆ ಬಿಜೆಪಿ ಸಿದ್ಧತೆ

Public TV
By Public TV
40 minutes ago
Bheemanna Khandre Eshwar Khandre
Bidar

ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು – ತಂದೆಯ ಆರೋಗ್ಯ ವಿಚಾರಿಸಿದ ಈಶ್ವರ್ ಖಂಡ್ರೆ

Public TV
By Public TV
53 minutes ago
US AirStrike
Latest

ಆಪರೇಷನ್‌ ಹಾಕೈ | ಅಮೆರಿಕ ಏರ್‌ಸ್ಟ್ರೈಕ್‌ – ಸಿರಿಯಾದಲ್ಲಿ 36 ಐಸಿಸ್‌ ಉಗ್ರರ ನೆಲೆಗಳು ಉಡೀಸ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?