Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸರ್ಕಾರದ ಮಾರ್ಗಸೂಚಿಯಿಂದ ಸಾಧ್ಯವಿಲ್ಲ, ಜನರು ಎಚ್ಚೆತ್ತುಕೊಂಡಾಗ ಮಾತ್ರ ಕೊರೊನಾ ನಿಯಂತ್ರಣ: ಡಿವಿಎಸ್

Public TV
Last updated: July 18, 2021 7:52 pm
Public TV
Share
2 Min Read
Sadananda Gowda GOPALAIAH e1626617864557
SHARE

ಬೆಂಗಳೂರು: ಸರ್ಕಾರ ನಿಯಮಗಳನ್ನು ಜಾರಿ ಮಾಡಿದ ತಕ್ಷಣ ಸೋಂಕು ನಿಯಂತ್ರಣಕ್ಕೆ ಬಂದುಬಿಡುತ್ತದೆ ಎಂದುಕೊಳ್ಳಬೇಡಿ. ಪ್ರತಿಯೊಬ್ಬರು ಎಚ್ಚೆತ್ತುಕೊಂಡು ನಿಮ್ಮ ನಿಮ್ಮ ಮನೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ, ಅನಗತ್ಯವಾಗಿ ಹೊರಗೆ ಹೋಗದಿರುವುದು ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಂಡರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬದಂತೆ ತಡೆಗಟ್ಟುವುದಾದರೆ ಸಾರ್ವಜನಿಕರ ಸಹಕಾರ ಅತ್ಯಂತ ಮಹತ್ವದ್ದು ಎಂದು ಅಭಿಪ್ರಾಯಪಟ್ಟರು.

corona 1 medium

ದೇಶದಲ್ಲಿ ಪ್ರಧಾನಿ ನರೇಂದ್ರಮೋದಿ, ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ನಿಯಂತ್ರಣವನ್ನು ಅತ್ಯಂತ ಸಮರ್ಪಕವಾಗಿ ನಿಯಂತ್ರಿಸಿದ್ದಾರೆ. ಅತ್ಯಂತ ಸೋಂಕು ಹೊಂದಿರುವ ಅಪಖ್ಯಾತಿಗೆ ಗುರಿಯಾಗಿದ್ದ ಭಾರತ ಇಂದು ವಿಶ್ವವೇ ನಿಬ್ಬೆರಗಾಗುವಂತೆ ಕೊರೊನಾ ನಿಯಂತ್ರಣ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಬಕಾರಿ ಇಲಾಖೆ ಸಚಿವ ಗೋಪಾಲಯ್ಯನವರು ಹಾಸನ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣಕ್ಕೆ ಶಕ್ತಿಮೀರಿ ಶ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಆಹಾರದ ಕಿಟ್ ವಿತರಣೆ, ಸಾರ್ವಜನಿಕರಿಗೆ ಉಚಿತವಾಗಿ ಆಹಾರಧಾನ್ಯಗಳ ವಿತರಣೆ, ಮಾಸ್ಕ್ ಸ್ಯಾನಿಟೈಸರ್, ಲಸಿಕೆ, ಔಷಧಿಗಳನ್ನು ಕೊಡುವ ಮೂಲಕ ನೊಂದವರ ಕಣ್ಣೀರನ್ನು ಒರೆಸಿದ್ದಾರೆ ಎಂದು ಪ್ರಶಂಸಿಸಿದರು. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.1.09ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,708 ಕೊರೊನಾ ಕೇಸ್

BSY MODI MEETING

ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ದೇಗುಲವಿದ್ದಂತೆ. ಇದು ನೊಂದವರ ಪಾಲಿಗೆ ಕಣ್ಣೀರು ಒರೆಸುವ ಆಲಯ. ಹಸಿದವರ ಪಾಲಿಗೆ ದೇಗುಲವಿದ್ದಂತೆ. ಇದನ್ನು ಮಾಡಿ ತೋರಿಸಿದ್ದು ಗೋಪಾಲಯ್ಯನವರ ಹೆಗ್ಗಳಿಕೆ ಎಂದು ಪ್ರಶಂಸಿದರು.

ಲಾಕ್ ಡೌನ್ ಸಂದರ್ಭದಲ್ಲೂ ನಂಬಿದವರನ್ನು ಕೈಬಿಡದೆ ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಆದಷ್ಟು ಶೀಘ್ರ ಎಲ್ಲರೂ ಕೊರೊನಾ ಮುಕ್ತರಾಗಿ ಎಲ್ಲರಿಗೂ ಉದ್ಯೋಗ ಸಿಗುವಂತಾಗಲಿ ಎಂದು ಸದಾನಂದಗೌಡ ಆಶಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ರೈತ ನಾಯಕ ಜಿ.ಮಾದೇಗೌಡ ಅವರು ಕಾವೇರಿ ನದಿನೀರಿಗಾಗಿ ನಡೆಸಿದ ಹೋರಾಟವನ್ನು ಅವರು ಸ್ಮರಿಸಿದರು.

ಮಹಾಲಕ್ಷ್ಮಿ ಲೇಔಟ್ ನ ನಮ್ಮ ಶಾಸಕರ ಕಚೇರಿಯಲ್ಲಿ ಇಂದು ಹಿರಿಯ ಗಾಂಧಿವಾದಿ ಮಾಜಿ ಸಂಸದ ಜಿ.ಮಾದೇಗೌಡರ ಭಾವಚಿತ್ರಕ್ಕೆ ಮಾನ್ಯ ಸಂಸದ ಶ್ರೀ ಡಿ.ವಿ.ಸದಾನಂದ ಗೌಡ ಅವರೊಂದಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ರಾಘವೇಂದ್ರ ಶೆಟ್ಟಿ, ರಾಜ್ಯ ಒಬಿಸಿ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ಹರೀಶ್, ಮುಂತಾದವರು ಉಪಸ್ಥಿತರಿದ್ದರು. pic.twitter.com/8b2nOxYP08

— K Gopalaiah (@GopalaiahK) July 18, 2021

ಅಬಕಾರಿ ಸಚಿವ ಗೋಪಾಲಯ್ಯ ಮಾತನಾಡಿ, ಕೊರೊನಾದಂತಹ ಕಷ್ಟದ ಸಂದರ್ಭದಲ್ಲೂ ನನ್ನ ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಿಕೊಡುವ ಪ್ರಾಮಾಣಿಕ ಕೆಲಸ ಮಾಡುತ್ತಿದ್ದೇನೆ ಇಂದು ನಾನು ಈ ಮಟ್ಟಕ್ಕೆ ಬೆಳೆಯಬೇಕಾದರೆ ನಿಮ್ಮ ಆಶೀರ್ವಾದವೇ ಕಾರಣ. ನನಗೆ ಎಷ್ಟೇ, ಕಷ್ಟ ನೋವುಗಳಿದ್ದರೂ ಇಂತಹ ಸಂದರ್ಭದಲ್ಲಿ ನಿಮ್ಮನ್ನು ಕೈಬಿಡುವುದಿಲ್ಲ ಎಂದು ಹೇಳಿದರು.

ಸಾರ್ವಜನಿಕರು ಕೊರೊನಾ ನಮ್ಮನ್ನು ಬಿಟ್ಟು ಹೋಗಿದೆ ಎಂದು ಭಾವಿಸಿಕೊಳ್ಳಬೇಡಿ. ಅದು ಈಗಲೂ ಇದೆ. ಮೂರನೇ ಅಲೆ ಬರಬಹುದೆಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಎಚ್ಚೆತ್ತುಕೊಂಡು ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಕ್ಷೇತ್ರದ ಜನರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಒ ಬಿ ಸಿ ಅಧ್ಯಕ್ಷ ನೆ ಲ ನರೇಂದ್ರ ಬಾಬು ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ .ಮಾಜಿ ಉಪ ಮೇಯರ್ ಹರೀಶ್. ಮುಖಂಡರುಗಳಾದ ಜಯರಾಮಯ್ಯ ವೆಂಕಟೇಶ ಮೂರ್ತಿ ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು.

TAGGED:CoronaCorona VirusCovid 19Karnarakasadananda gowdaಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಬೆಂಗಳೂರು
Share This Article
Facebook Whatsapp Whatsapp Telegram

Cinema Updates

mysore sandal soap tamannaah bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ – ಬರೋಬ್ಬರಿ 6.20 ಕೋಟಿ ಸಂಭಾವನೆ
3 minutes ago
dhanush 1 1
ಎಪಿಜೆ ಅಬ್ದುಲ್ ಕಲಾಂ ಬಯೋಪಿಕ್‌ನಲ್ಲಿ ಧನುಷ್
29 minutes ago
aishwarya rai
ಕಾನ್ 2025: ಸಿಂಧೂರ ಹಣೆಗಿಟ್ಟು ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಐಶ್ವರ್ಯಾ ರೈ
1 hour ago
Madenuru Manu
Exclusive: ಕಾಮಿಡಿ ಕಿಲಾಡಿ ಸ್ಟಾರ್‌, ನಟ ಮಡೆನೂರು ಮನು ವಿರುದ್ಧ ರೇಪ್‌ ಕೇಸ್‌
1 hour ago

You Might Also Like

pramoda devi wadiyar
Court

ರಾಜ್ಯ ಸರ್ಕಾರಕ್ಕೆ ಹಿನ್ನಡೆ – ರಾಜಮನೆತನಕ್ಕೆ 3,400 ಕೋಟಿಯ ಟಿಡಿಆರ್ ನೀಡಲು ಸುಪ್ರೀಂ ಆದೇಶ

Public TV
By Public TV
40 minutes ago
Alok Kumar ADGP
Bengaluru City

ಕೊನೆ ಕ್ಷಣದಲ್ಲಿ ಡಿಜಿಪಿ ಪ್ರಮೋಷನ್‌ಗೆ ತಡೆ – ಅಲೋಕ್ ಕುಮಾರ್‌ಗೆ ಇಲಾಖೆಯಲ್ಲೇ ಪಿತೂರಿ?

Public TV
By Public TV
41 minutes ago
DK Shivakumar 5
Bengaluru City

ರನ್ಯಾ ಮದುವೆಗೆ ಪರಮೇಶ್ವರ್‌ 20 ಲಕ್ಷ ಗಿಫ್ಟ್‌ ಕೊಟ್ಟಿರಬಹುದು: ಡಿಕೆಶಿ

Public TV
By Public TV
46 minutes ago
Hassan Bride Exam
Districts

ಮದುವೆ ಮಂಟಪದಿಂದ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು ಎಕ್ಸಾಂ ಬರೆದ ನವವಧು

Public TV
By Public TV
1 hour ago
Hassan Cab driver dies after collapsing due to heart attack in Bengaluru
Bengaluru City

ಬೆಂಗಳೂರು | ನಿಂತಲ್ಲೇ ಹೃದಯಾಘಾತ – ಕುಸಿದುಬಿದ್ದು ಕ್ಯಾಬ್‌ ಚಾಲಕ ಸಾವು

Public TV
By Public TV
1 hour ago
yash mother pushpa 1
Cinema

ಮೊದಲ ಸಿನಿಮಾ ರಿಲೀಸ್‌ಗೂ ಮುನ್ನವೇ 2ನೇ ಪ್ರಾಜೆಕ್ಟ್ ಬಗ್ಗೆ ಯಶ್ ತಾಯಿ ಗುಡ್ ನ್ಯೂಸ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?