Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ 5 ವರ್ಷ ಗ್ರಾಮೀಣ ಸೇವೆ ಕಡ್ಡಾಯ ಮಾಡಿ- ಸಿಎಂಗೆ ಸೋಮಶೇಖರ್ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ 5 ವರ್ಷ ಗ್ರಾಮೀಣ ಸೇವೆ ಕಡ್ಡಾಯ ಮಾಡಿ- ಸಿಎಂಗೆ ಸೋಮಶೇಖರ್ ಪತ್ರ

Bengaluru City

ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ 5 ವರ್ಷ ಗ್ರಾಮೀಣ ಸೇವೆ ಕಡ್ಡಾಯ ಮಾಡಿ- ಸಿಎಂಗೆ ಸೋಮಶೇಖರ್ ಪತ್ರ

Public TV
Last updated: May 23, 2021 5:51 pm
Public TV
Share
3 Min Read
mys st somashekhar
SHARE

ಬೆಂಗಳೂರು: ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ ಗ್ರಾಮೀಣ ಸೇವೆ ಕಡ್ಡಾಯ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಚಿವ ಎಸ್.ಟಿ.ಸೋಮಶೇಖರ್ ಪತ್ರ ಬರೆದಿದ್ದಾರೆ.

ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ ಕನಿಷ್ಟ 5 ವರ್ಷಗಳ ಕಾಲ ಗ್ರಾಮೀಣ ಸೇವೆ ಕಡ್ಡಾಯ ಮಾಡಬೇಕು ಎಂದು ಎಸ್.ಟಿ.ಸೋಮಶೇಖರ್ ಒತ್ತಾಯಿಸಿದ್ದಾರೆ.

rcr cm bsy

ಈ ಹಿಂದೆ ಸಹ ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಸರ್ಕಾರಿ ವೈದ್ಯರು ಗ್ರಾಮೀಣ ಭಾಗದಲ್ಲಿ ಸೇವೆ ಮಾಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ವೈದ್ಯಕೀಯ ಪದವಿ ಪಡೆಯುವವರಿಗೆ ಇಂಟರ್ನ್‍ಶಿಪ್ ಅಥವಾ ಇಂತಿಷ್ಟು ವರ್ಷಗಳ ಕಾಲ ಗ್ರಾಮೀಣ ಸೇವೆ ಕಡ್ಡಾಯ ಮಾಡಬೇಕು ಎಂದು ಹಲವರು ಧ್ವನಿ ಎತ್ತಿದ್ದರು. ಇದಕ್ಕೆ ಕೆಲವರು ವಿರೋಧ ಸಹ ವ್ಯಕ್ತಪಡಿಸಿದ್ದರು. ಇದೀಗ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಿಎಂಗೆ ಪತ್ರ ಬರೆಯುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.

ಪತ್ರದಲ್ಲಿ ಏನಿದೆ?
ನಮ್ಮ ರಾಜ್ಯದಲ್ಲಿ ಪ್ರತಿಭಾವಂತರಿಗೇನೂ ಕೊರತೆ ಇಲ್ಲ. ಹಾಗೇ ರಾಜ್ಯ ಸರ್ಕಾರ ಸಹ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ಹಾಗೂ ಆರ್ಥಿಕ ಸಹಕಾರವನ್ನು ನೀಡುತ್ತಾ ಬಂದಿದೆ. ಇದಕ್ಕೆ ವೈದ್ಯಕೀಯ ಶಿಕ್ಷಣ ರಂಗವೂ ಹೊರತಾಗಿಲ್ಲ. ಪ್ರತಿ ವರ್ಷ ವೈದ್ಯಕೀಯ ಶಿಕ್ಷಣಕ್ಕೆ ಸರ್ಕಾರ ಅಗಾಧವಾಗಿ ಖರ್ಚು ಮಾಡುತ್ತಾ ಬಂದಿದೆ. ಸರ್ಕಾರಿ ಕೋಟಾದಲ್ಲಿ ಓದುವ ಒಬ್ಬ ವೈದ್ಯಕೀಯ ವಿದ್ಯಾರ್ಥಿ ವಿದ್ಯಾಭ್ಯಾಸ ಅವಧಿಯನ್ನು ಮುಗಿಸುವ ಹೊತ್ತಿಗೆ ಸರ್ಕಾರದಿಂದ 40 ರಿಂದ 50 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದೆ. ಸರ್ಕಾರ ಇಷ್ಟೆಲ್ಲಾ ವೆಚ್ಚ ಮಾಡಿದರೂ ನಮ್ಮ ಪ್ರತಿಭೆಗಳು ನಮಗೆ ದಕ್ಕುತ್ತಿಲ್ಲ. ಕೆಲವು ವೈದ್ಯರು ನಮ್ಮ ಸೌಲಭ್ಯವನ್ನು ಪಡೆದು, ಕಲಿತು ವಿದೇಶಗಳಿಗೆ ಹೋಗಿ ಅಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಹೀಗಾಗಿ ನಮ್ಮ ರಾಜ್ಯದಲ್ಲಿ ವೈದ್ಯರ ಕೊರತೆ ಹೆಚ್ಚಾಗುತ್ತಿದೆ. ತಮ್ಮ ಕಾಲಾವಧಿಯಲ್ಲಿ ಇಂಥದ್ದೊಂದು ಪ್ರಕ್ರಿಯೆಗೆ ಕಡಿವಾಣ ಬೀಳಬೇಕಿದೆ. ನಮ್ಮ ಪ್ರತಿಭೆಗಳು ನಮ್ಮಲ್ಲಿಯೇ ಸೇವೆ ಸಲ್ಲಿಸುವಂತಾಗಬೇಕು. ಪ್ರತಿಭಾ ಪಲಾಯನ ನಿಲ್ಲುವಂತಾಗಬೇಕು.

happy smiling female doctordd

ಸರ್ಕಾರಿ ಕೋಟಾದಲ್ಲಿ ಕಲಿತ ವೈದ್ಯರು ಕನಿಷ್ಠ ನಮ್ಮ ರಾಜ್ಯದಲ್ಲಿ 5 ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಈ ಮೂಲಕ ನಮ್ಮ ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ಸಹ ನುರಿತ ತಜ್ಞ ವೈದ್ಯರ ಸೇವೆ ಲಭಿಸಬೇಕು. ಇಂದು ಹಳ್ಳಿ ಎಂದರೆ ಮೂಗು ಮುರಿಯುವ ಮನೋಭಾವ ಹೆಚ್ಚಾಗುತ್ತಿದೆ. ಆದರೆ ಹಳ್ಳಿ ಸಶಕ್ತವಾಗಿದ್ದರೆ, ಆರೋಗ್ಯವಾಗಿದ್ದರೆ ದೇಶದ ಅಭಿವೃದ್ಧಿ ಎಂಬುದನ್ನು ಎಲ್ಲರಿಗೂ ಮನವರಿಕೆ ಮಾಡಿಕೊಡಬೇಕಿದೆ. ಹಳ್ಳಿಗಳಲ್ಲಿ ಕೆಲಸ ಮಾಡುವ ಮನೋಭಾವಕ್ಕೆ ನಾವು ಪ್ರೋತ್ಸಾಹ ನೀಡಬೇಕಿದ್ದು, ಇದಕ್ಕೊಂದು ಸೂಕ್ತ ಕಾನೂನು ಚೌಕಟ್ಟು ನಿರ್ಮಾಣ ಮಾಡುವುದು ಮುಖ್ಯವಾಗುತ್ತದೆ.

ಹೀಗಾಗಿ ನಮ್ಮ ರಾಜ್ಯದ ಸಕಲ ಸೌಕರ್ಯವನ್ನು ಪಡೆದು ವೈದ್ಯರಾಗಿ ಹೊರ ಬರುವ ಪ್ರತಿಯೊಬ್ಬರೂ ಸಹ ರಾಜ್ಯದಲ್ಲಿ 5 ವರ್ಷ ಕಡ್ಡಾಯವಾಗಿ ವೃತ್ತಿಯನ್ನು ಸಲ್ಲಿಸಬೇಕು ಎಂಬ ನಿಟ್ಟಿನಲ್ಲಿ ಕಾನೂನೊಂದನ್ನು ತಾವು ರೂಪಿಸಬೇಕು. ಈಗಾಗಲೇ ಹೀಗೆ ಸೇವೆ ಮಾಡುವ ವೈದ್ಯರಿಗೆ ಅತಿ ಹೆಚ್ಚಿನ ವೇತನವನ್ನು ನೀಡುತ್ತೇವೆ. ಸೌಲಭ್ಯಗಳನ್ನು ಕೊಡುತ್ತೇವೆಂದರೂ ವೈದ್ಯರು ಮುಂದೆ ಬರುತ್ತಿಲ್ಲ. ಹೀಗಾಗಿ ಈ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಅನುದಾನವನ್ನು ಕಲ್ಪಿಸಿಕೊಡುವ ಮೂಲಕ ಹಳ್ಳಿಗಳಿಗೂ ಉತ್ತಮ ವೈದ್ಯಕೀಯ ಸೇವೆ ಲಭಿಸುವಂತೆ ಮಾಡಬೇಕಿದೆ. ಈ ಮೂಲಕ ನಮ್ಮ ರಾಜ್ಯದ ಹಣವನ್ನು ಬಳಸಿ ವೈದ್ಯರಾದವರ ಸೇವೆಯನ್ನು ನಮ್ಮ ರಾಜ್ಯದ ನಾಗರಿಕರಿಗೇ ಲಭಿಸುವಂತಾಗಬೇಕು.

DOCTOR

ಈಗ ಕೊರೊನಾ ಸಂಕಷ್ಟ ಕಾಲವಾಗಿರುವುದರಿಂದ ಇಂಥದ್ದೊಂದು ನಿಲುವಿನ ಅಗತ್ಯವಿದೆ. ಜೊತೆಗೆ ಸರ್ಕಾರಿ ಸೌಲಭ್ಯ ಪಡೆಯುವ ಪ್ರತಿಯೊಬ್ಬರಲ್ಲೂ ಇಂತಹ ಮನೋಭಾವ ಬರಬೇಕಿದೆ. ಇಂತಹ ಸಂದಿಗ್ದ ಸಂದರ್ಭದಲ್ಲಿ ಜನಸಾಮಾನ್ಯರಿಗೆ ವೈದ್ಯಕೀಯ ನೆರವು ಸಿಗಬೇಕೆಂದರೆ ಕಠಿಣವಾದ ನಿರ್ಧಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ, ಸದನದಲ್ಲಿ ಮಂಡಿಸಿ ಜಾರಿಗೊಳಿಸಬೇಕಾಗಿ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಈ ಮೂಲಕ ಪ್ರತಿಭಾ ಪಲಾಯನಕ್ಕೆ ತಡೆ ಹಾಕಬೇಕಿದೆ.

Doctor

ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುವ ಬಗ್ಗೆ ಕಟ್ಟುನಿಟ್ಟಿನ ನೀತಿಯನ್ನು ಸರ್ಕಾರದಿಂದ ರಚಿಸಬೇಕಿದ್ದು, ವೈದ್ಯಕೀಯ ಶಿಕ್ಷಣ ಓದಿಗೆ ಅವರು ಮುಂದಾಗುವಾಗಲೇ ಸರ್ಕಾರಿ ಕೋಟಾದ ಲಾಭ ಪಡೆಯಬೇಕೆಂದಿದ್ದರೆ, ಅವರ ಮೆರಿಟ್ ಆಧಾರದ ಜೊತೆಗೆ ರಾಜ್ಯದಲ್ಲಿ 5 ವರ್ಷ ಸೇವೆ ಸಲ್ಲಿಸುತ್ತೇವೆಂಬ ಕರಾರಿಗೆ ಮೊದಲೇ ಸಹಿ ಹಾಕಿಸಿಕೊಳ್ಳುವಂತಹ ನಿಟ್ಟಿನಲ್ಲಿ ಕಾನೂನು ರೂಪಿಸಿದರೆ ಪರಿಹಾರ ದೊರಕಬಹುದು ಎಂಬುದು ನನ್ನ ಅಭಿಪ್ರಾಯವಾಗಿದೆ. ಈ ನಿಟ್ಟಿನಲ್ಲಿ ತಾವುಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳುವಂತೆ ಮತ್ತೊಮ್ಮೆ ತಮ್ಮಲ್ಲಿ ಮನವಿ ಮಾಡುತ್ತೇನೆ.

TAGGED:bengaluruCM BS YediyurappaMedical EducationMinister ST SomashekharPublic TVservicestudentsvillageಪಬ್ಲಿಕ್ ಟಿವಿಬೆಂಗಳೂರುವಿದ್ಯಾರ್ಥಿಗಳುವೈದ್ಯಕೀಯ ಶಿಕ್ಷಣಸಚಿವ ಎಸ್.ಟಿ.ಸೋಮಶೇಖರ್ಸಿಎಂ ಬಿ.ಎಸ್.ಯಡಿಯೂರಪ್ಪಸೇವೆಹಳ್ಳಿ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

Traffic Rules Violation Chikkamagaluru Court
Chikkamagaluru

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

Public TV
By Public TV
3 minutes ago
LPG Cylinders Jagalur
Davanagere

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

Public TV
By Public TV
29 minutes ago
kabul hospital pak strikes
Latest

ಅನಾಗರಿಕ, ಹೇಡಿತನದ ಕೃತ್ಯ: ಕಾಬೂಲ್‌ ಆಸ್ಪತ್ರೆ ಮೇಲಿನ ಪಾಕ್‌ ದಾಳಿ ಖಂಡಿಸಿದ ಭಾರತ

Public TV
By Public TV
53 minutes ago
Four workers fall ill due to chemical reaction in Hubballi
Dharwad

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

Public TV
By Public TV
59 minutes ago
congress leader pm modi
Chikkamagaluru

ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್ ನಾಯಕಿ

Public TV
By Public TV
1 hour ago
DK Shivakumar 9
Bengaluru City

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜೊತೆ ಚರ್ಚೆ: ಡಿಕೆಶಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?