ಸರ್ಕಾರಿ ಬಸ್ ಪಲ್ಟಿ – 15ಕ್ಕೂ ಅಧಿಕ ಮಂದಿಗೆ ಗಾಯ

Public TV
1 Min Read
Bidar 2

ಬೀದರ್: ಕಾರಿಗೆ ಡಿಕ್ಕಿ ಹೊಡೆಯೋದನ್ನು ತಪ್ಪಿಸಲು ಹೋಗಿ ಸರ್ಕಾರಿ ಬಸ್ಸೊಂದು ಪಲ್ಟಿಯಾಗಿದ್ದು, 15ಕ್ಕೂ ಅಧಿಕ ಮಂದಿಗೆ ಗಾಯವಾಗಿರುವ ಘಟನೆ ಬೀದರಿನ ಹುಮನಾಬಾದ್ ತಾಲೂಕಿನ ದುಬಲಗುಂಡಿಯಲ್ಲಿ ನಡೆದಿದೆ.

ಸುಮಾರು 27 ಪ್ರಯಾಣಿಕರು ಪ್ರಯಾಣಿಸುತ್ತಿದ್ದ ಬಸ್‍ಗೆ ದುಬಲಗುಂಡಿ ಕ್ರಾಸಿನ ಬಳಿ ಕಾರೊಂದು ಅಡ್ಡ ಬಂದಿದೆ. ಈ ವೇಳೆ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಬಸ್ ಚಾಲಕ ಸಡನ್ ಬ್ರೇಕ್ ಹಾಕಿದ್ದಾರೆ. ಈ ಕಾರಣದಿಂದ ಬಸ್ ರಸ್ತೆಯ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ.

Bidar

ಈ ಅಪಘಾತದಲ್ಲಿ ಸುಮಾರು 15ಕ್ಕೂ ಹೆಚ್ಚಿನ ಮಂದಿಗೆ ಸಣ್ಣ ಪುಟ್ಟಗಾಯಗಳು ಆಗಿವೆ. ಆದರೆ ಅದೃಷ್ಟವಾಶತ್ ಯಾವುದೇ ಸಾವು ಸಂಭವಿಸಿಲ್ಲ. ಗಾಯಗೊಂಡ ಎಲ್ಲರನ್ನು ಹುಮನಾಬಾದ್ ಹಾಗೂ ಹಳ್ಳಿಖೇಡ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಶಾಸಕ ರಾಜಶೇಖರ್ ಪಾಟೀಲ್ ಬಂದು ಗಾಯಗೊಂಡವರಿಗೆ ಸಾಂತ್ವನ ಹೇಳಿದ್ದಾರೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *