ಬೆಂಗಳೂರು: 50ಕ್ಕೂ ಹೆಚ್ಚು ವರ್ಷ ತಮ್ಮ ಹಾಡಿನ ಮೂಲಕ ಜನಮನ ತಣಿಸಿದ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಸ್ಯಾಂಡಲ್ವುಡ್ ನಟರಾದ ಜಗ್ಗೇಶ್, ಚಾಲೆಜಿಂಗ್ ಸ್ಟಾರ್ ದರ್ಶನ್ ಮತ್ತು ನಿಖಿಲ್ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
40 ಸಾವಿರಕ್ಕೂ ಅಧಿಕ ಹಾಡುಗಳನ್ನೂ ಹಾಡಿದ ಗಾನಕೋಗಿಲೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಈ ಮೂಲಕ ಅಪಾರದವಾದ ಅಭಿಮಾನಿಗಳನ್ನು ಬಿಟ್ಟು ಬಾರದ ಲೋಕಕ್ಕೆ ತೆರಳಿದ್ದಾರೆ. ಇಂದು ಮಧ್ಯಾಹ್ನ ಒಂದು ಗಂಟೆಗೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್ಪಿಬಿಯವರು ಕೊನೆಯುಸಿರೆಳಿದಿದ್ದಾರೆ.
ತಮ್ಮ ಸುಮಧುರ ಕಂಠದಿಂದ ೫೦ಕ್ಕೂ ಹೆಚ್ಚು ವರ್ಷಗಳಿಂದಲೂ ಎಲ್ಲರ ಮನ ತಣಿಸಿದ ಅದ್ಭುತ ಸಹೃದಯಿ ಗಾಯಕ, ಲೆಜೆಂಡ್ ಎಸ್.ಪಿ. ಬಾಲಸುಬ್ರಮಣ್ಯಂ ರವರು ಇಂದು ವಿಧಿವಶರಾಗಿರುವುದು ನಮ್ಮ ದೇಶಕ್ಕೆ ದುಃಖಕರ ಸಂಗತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಂದು ದೇವರಲ್ಲಿ ಮನವಿ ಮಾಡುತ್ತೇನೆ
ನಿಮ್ಮ ದಾಸ ದರ್ಶನ್ pic.twitter.com/PfqOCWsraC
— Darshan Thoogudeepa (@dasadarshan) September 25, 2020
ಎಸ್ಪಿಬಿಯವರ ಸಾವಿಗೆ ಸಂತಾಪ ಸೂಚಿರುವ ನಟ ದರ್ಶನ್ ಅವರು, ತಮ್ಮ ಸುಮಧುರ ಕಂಠದಿಂದ 50ಕ್ಕೂ ಹೆಚ್ಚು ವರ್ಷಗಳಿಂದಲೂ ಎಲ್ಲರ ಮನ ತಣಿಸಿದ ಅದ್ಭುತ ಸಹೃದಯಿ ಗಾಯಕ, ಲೆಜೆಂಡ್ ಎಸ್.ಪಿ. ಬಾಲಸುಬ್ರಹ್ಮಣ್ಯಂ ರವರು ಇಂದು ವಿಧಿವಶರಾಗಿರುವುದು ನಮ್ಮ ದೇಶಕ್ಕೆ ದುಃಖಕರ ಸಂಗತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಂದು ದೇವರಲ್ಲಿ ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
https://www.facebook.com/iamNikhilGowda/posts/3048374941935346
ನಿಖಿಲ್ ಕುಮಾರಸ್ವಾಮಿಯವರು, ನಮ್ಮ ದೇಶ ಎಂದೂ ಮರೆಯದ ಶ್ರೇಷ್ಠ ಗಾಯಕರಾದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನದ ಮೂಲಕ ಸಂಗೀತ ಲೋಕದ ಅಮೂಲ್ಯವಾದ ಕೊಂಡಿ ಕಳಚಿದಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಅವರ ಅಪಾರ ಅಭಿಮಾನಿಗಳಿಗೆ ಈ ಆಘಾತವನ್ನು ಸಹಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಫೇಸ್ಬುಕ್ ಪೋಸ್ಟ್ ಹಾಕಿದ್ದಾರೆ.