Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಾಂಸ್ಕೃತಿಕ ಸುಂದರ ನಗರಿ ಮೈಸೂರಿನ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಎಸ್.ಟಿ.ಸೋಮಶೇಖರ್

Public TV
Last updated: June 21, 2021 10:14 pm
Public TV
Share
3 Min Read
S T Somashekhar 2
SHARE

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲೆಯ ಜನತೆಯ ಒಟ್ಟಾರೆ ಯೋಗಕ್ಷೇಮಕ್ಕೆ ಶ್ರಮವಹಿಸುತ್ತಿದೆ. ಈ ನಿಟ್ಟಿನಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಸೂರಿನ ಅಭಿವೃದ್ಧಿಯ ದೃಷ್ಟಿಯಿಂದ ನಿರ್ಣಯವನ್ನು ತೆಗೆದುಕೊಂಡಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಹಣವನ್ನು ಬಳಸಲು ಒಪ್ಪಿಗೆ ನೀಡುವ ಮೂಲಕ 2 ದಶಕಗಳಿಂದ ಎದುರಾಗಿದ್ದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಮುಂದಾಗಲಾಗಿದೆ. ಅಭಿವೃದ್ಧಿಯ ದೃಷ್ಟಿಯಿಂದ ಮುಡಾ ಕೈಗೊಳ್ಳಬೇಕಾದ ಕಾಮಗಾರಿಗಳಿಗೆ ಒಪ್ಪಿಗೆ ಸೂಚಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಬಿ,ಎಸ್.ಯಡಿಯೂರಪ್ಪ ಅವರನ್ನು ವೈಯಕ್ತಿಕವಾಗಿ ಹಾಗೂ ಜಿಲ್ಲೆಯ ಜನತೆ ಪರವಾಗಿ ಅಭಿನಂದಿಸುತ್ತೇನೆ.

mys st somashekhar

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಈಗಾಗಲೇ ನಿರ್ಮಾಣ ಮಾಡಲಾಗಿರುವ ಅನೇಕ ಬಡವಾಣೆಗಳಲ್ಲಿ ಬಾಕಿ ಉಳಿಸಲಾಗಿದ್ದ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಮುಡಾದಲ್ಲಿರುವ 422 ಕೋಟಿ ರೂಪಾಯಿಯನ್ನು ಬಳಕೆ ಮಾಡುವ ಮೂಲಕ ಕಾಮಗಾರಿಗಳನ್ನು ಕೈಗೊಳ್ಳಲು ಇಂದಿನ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಇದರ ಮೂಲಕ ಮುಡಾದಿಂದ ಅಭಿವೃದ್ಧಿಪಡಿಸಲಾದ ಬಡವಾಣೆಗಳಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಲು ಪೂರ್ವದಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಏಕಕಾಲದಲ್ಲಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ಹೀಗೆ ಮಾಡುವುದರ ಜನತೆಗೆ ಅನುಕೂಲ ಕಲ್ಪಿಸಲಾಗುವುದು, ಜೊತೆಗೆ ಮೈಸೂರು ನಗರ ಪಾಲಿಕೆಗೆ ಸುಸಜ್ಜಿತ ಬಡಾವಣೆಗಳನ್ನು ನಿರ್ವಹಣೆಗಾಗಿ ಹಸ್ತಾಂತರವನ್ನು ಮಾಡಲಾಗುವುದು.

SOMASHEKHAR e1594735293715

ಮುಡಾ ವತಿಯಿಂದ ಕಳೆದ 25 ವರ್ಷಗಳಿಂದ ಸುಮಾರು 15 ಬಡಾವಣೆಗಳನ್ನು ನಿರ್ಮಿಸಿ ಒಟ್ಟು 46746 ನಿವೇಶನಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಸದರಿ ಬಡಾವಣೆಗಳನ್ನು ಪ್ರಾಧಿಕಾರವು ಅಭಿವೃದ್ಧಿಪಡಿಸಿ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಬೇಕಿದ್ದರೂ, ಆರ್ಥಿಕ ದೃಷ್ಟಿಯಿಂದ ಸಂಪೂರ್ಣ ಕೆಲಸಗಳನ್ನು ಮಾಡಲಾಗದೆ ಕೆಲವನ್ನು ಹಸ್ತಾಂತರ ಮಾಡಲಾಗಿತ್ತು. ಆದರೆ ಇದರಿಂದ ಅಲ್ಲಿನ ನಿವಾಸಿಗಳಿಗೆ ಅನೇಕ ತೊಂದರೆಗಳು ಎದುರಾಗಿದ್ದು, ಅನೇಕ ದೂರುಗಳು ಬರತೊಡಗಿದ್ದವು. ಅಂದರೆ ಕೆಲವು ಹಳೇ ಬಡಾವಣೆಗಳಲ್ಲಿ ಆಗಿನ ಸಂದರ್ಭಕ್ಕೆ ತಕ್ಕಂತೆ ಪ್ಲಾನಿಂಗ್ ಗಳನ್ನು ಮಾಡಿ ರಸ್ತೆಗಳ ನಿರ್ಮಾಣ, ಒಳಚರಂಡಿ, ವಿದ್ಯುತ್ ಸಂಪರ್ಕ, ನೀರಿನ ವ್ಯವಸ್ಥೆ ಸೇರಿದಂತೆ ಅನೇಕ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು. ಆದರೆ, ಇಂದು ತಂತ್ರಜ್ಞಾನಗಳು ಬೆಳೆದಿರುವುದರಿಂದ ದೊಡ್ಡ ಮಟ್ಟದ ವಾಹನಗಳ ಸಂಚಾರ, ಡ್ರೈನೇಜ್ ನಿರ್ವಹಣೆ ಸೇರಿದಂತೆ ಹಲವು ತೊಡಕುಗಳು ಕಾಣಿಸಿಕೊಂಡಿವೆ.

Mysuru Palike 2

ಇದನ್ನು ಮನಗೊಂಡ ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್ ಅವರು ನನ್ನ ಗಮನಕ್ಕೆ ತಂದಿದ್ದರು. ಅವರು ಮತ್ತು ಅವರ ತಂಡಗಳ ಜೊತೆಗೆ ನಾನೂ ಸಹ ಅನೇಕ ಬಾರಿ ಹಲವಾರು ಬಡಾವಣೆಗಳಿಗೆ ಭೇಟಿ ನೀಡಿ ಖುದ್ದು ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದ್ದೇವೆ. ಮೈಸೂರು ನಗರದ ಅಭಿವೃದ್ಧಿಯೂ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಆಗಬೇಕಾದ ಕೆಲಸಗಳು ಹಾಗೂ ವೆಚ್ಚದ ಬಗ್ಗೆ ರೂಪುರೇಷೆ ಸಿದ್ಧಪಡಿಸಿ, ಸಚಿವ ಸಂಪುಟದ ಮುಂದೆ ಇಡಲಾಗಿತ್ತು. ಈಗ ಮುಡಾದಲ್ಲಿರುವ ಹಣವನ್ನು ಬಡಾವಣೆಗಳ ಮೂಲ ಸೌಕರ್ಯ ಕಾಮಗಾರಿಗಳಿಗೆ ಬಳಸಿಕೊಳ್ಳಲು ಅನುಮೋದನೆ ನೀಡುವ ನಿರ್ಣಯವನ್ನು ತೆಗೆದುಕೊಂಡಿರುವುದರಿಂದ ಬಡಾವಣೆಗಳ ಅಭಿವೃದ್ಧಿಗೆ ಮತ್ತಷ್ಟು ಬಲ ಬಂದಂತೆ ಆಗುತ್ತದೆ.

mysuru dasara ninasam satish 1

ಈ ನಿಟ್ಟಿನಲ್ಲಿ ಹಾಲಿ ಇರುವ ಹೊರವರ್ತುಲ ರಸ್ತೆಗೆ ಸಂಪರ್ಕ ರಸ್ತೆಯನ್ನು ಕಲ್ಪಿಸುವುದು, ಮಹಾಯೋಜನೆಯ ರಸ್ತೆಗಳಿಗೆ ಸಂಪರ್ಕ ರಸ್ತೆಯನ್ನು ನಿರ್ಮಿಸುವುದು, ಕೆಲವು ಬಡಾವಣೆಗಳಲ್ಲಿ ಒಳಚರಂಡಿ ವ್ಯವಸ್ಥೆಗಳಿಗೆ ಸಂಬಂಧಪಟ್ಟಂತೆ ಮ್ಯಾನ್ಹೋಲ್ ಗಳ ನಿರ್ಮಾಣ, ಯುಜಿಡಿ ಲೈನ್ ಗಳು ಮತ್ತು ಟ್ರಂಕ್ ಲೈನ್ ಗಳನ್ನು ಜೋಡಣೆ ಮಾಡಿರಬೇಕಾಗಿರುತ್ತದೆ. ಇನ್ನು ಮೈಸೂರಿಗೆ ನೀರು ಸರಬರಾಜು ವ್ಯವಸ್ಥೆಗಳ ಮೇಲೂ ಗಮನಹರಿಸಬೇಕಿದ್ದು, ಹಳೆ ಉಂಡವಾಡಿ ಯೋಜನೆ ಮತ್ತು ಕಬಿನಿ ಉನ್ನತೀಕರಣ ಯೋಜನೆ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಸದರಿ ಯೋಜನೆಯಡಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಕಲ್ಪಿಸಬೇಕಿದ್ದು, ಈ ನಿಟ್ಟಿನಲ್ಲಿ ಮೈಸೂರು ಅಭಿವೃದ್ಧಿಗೆ ಮುಡಾ ವತಿಯಿಂದ ಕಾರ್ಯಯೋಜನೆಗಳು ಅನುಷ್ಠಾನಕ್ಕೆ ಬರಲಿದೆ.

mysuru chamundeshwari

ಮೈಸೂರು ನಗರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್ ಅವರು ಸೇರಿದಂತೆ ಜನಪ್ರತಿನಿಧಿಗಳಿಗೆ ಹಾಗೂ ವಿಶೇಷವಾಗಿ ಮಾನ್ಯ ನಗರಾಭಿವೃದ್ಧಿ ಸಚಿವರಾದ ಬಿ.ಎ. ಬಸವರಾಜು ಅವರನ್ನು ಅಭಿನಂದಿಸುತ್ತೇನೆ ಅಂತಾ ಸಚಿವ ಸೋಮಶೇಖರ್ ತಿಳಿಸಿದ್ದಾರೆ.

TAGGED:mysuruPublic TVS T Somashekharಎಸ್ ಟಿ ಸೋಮಶೇಖರ್ಪಬ್ಲಿಕ್ ಟಿವಿಮೈಸೂರು
Share This Article
Facebook Whatsapp Whatsapp Telegram

You Might Also Like

Weather
Bengaluru City

ಮುಂದಿನ 3 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ

Public TV
By Public TV
2 minutes ago
blackbox
Explainer

Explainer: ವಿಮಾನ ಸುಟ್ಟು ಬೂದಿಯಾದರೂ ‘ಬ್ಲ್ಯಾಕ್‌ಬಾಕ್ಸ್‌’ಗೆ ಏನಾಗಲ್ಲ – ಏನಿದು ಪೆಟ್ಟಿಗೆ? ಫ್ಲೈಟ್‌ ಆಕ್ಸಿಡೆಂಟ್‌ಗಳಲ್ಲಿ ಏಕೆ ಮುಖ್ಯ?

Public TV
By Public TV
7 minutes ago
Explainer Chinas rare earth export curbs hit the auto industry india worldwide Electric Vehicle
Automobile

Explainer| ಅಪರೂಪದ ಭೂ ಖನಿಜ ರಫ್ತಿಗೆ ಚೀನಾ ನಿಷೇಧ: ಭಾರತದ ಮೇಲೆ ಪರಿಣಾಮ ಏನು?

Public TV
By Public TV
7 minutes ago
G Parameshwar 1 1
Districts

ಶೀಘ್ರದಲ್ಲೇ 8,000 ಪೊಲೀಸ್ ಪೇದೆಗಳ ಹುದ್ದೆ ಭರ್ತಿ – ಜಿ.ಪರಮೇಶ್ವರ್

Public TV
By Public TV
19 minutes ago
Darshan Devil Cinema 1
Cinema

ಇದೇ ವಾರ ಮುಗಿಯಲಿದೆ ದರ್ಶನ್ ಡೆವಿಲ್ ಶೂಟಿಂಗ್ !

Public TV
By Public TV
24 minutes ago
rakshit shetty shree ananthapadmanabha temple
Cinema

ಪೆರ್ಡೂರು ಅನಂತಪದ್ಮನಾಭನಿಗೆ ಮುಷ್ಟಿ ಕಾಣಿಕೆ ಅರ್ಪಿಸಿದ ರಕ್ಷಿತ್ ಶೆಟ್ಟಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?