– ಮಾಸ್ಕ್ ಧರಿಸದ ಸಂಸದ
ಶಿವಮೊಗ್ಗ: ಪಕ್ಷದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ.
ಜಿಲ್ಲೆಯ ಶಿಕಾರಿಪುರ ಪುರಸಭೆಯ ಇಬ್ಬರು ಕಾಂಗ್ರೆಸ್ ಸದಸ್ಯರು ಸದಸ್ಯತ್ವ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು. ಇದೇ ವೇಳೆ ಮೂವರು ಪಕ್ಷೇತರ ಸದಸ್ಯರು ಸಹ ಬಿಜೆಪಿಗೆ ಸೇರ್ಪಡೆಯಾದರು. ಆದರೆ ಈ ವೇಳೆ ಸಾರ್ವಜನಿಕರಿಗೆ ಬುದ್ದಿ ಹೇಳಬೇಕಾದ ಸಂಸದರೇ ಈ ರೀತಿ ಕೊರೊನಾ ನಿಯಮ ಉಲ್ಲಂಘಿಸಿದರೆ ಇನ್ನು ಬೇರೆಯವರಿಗೆ ಏನು ಹೇಳಲು ಸಾಧ್ಯ ಎಂದು ಸಾರ್ವಜನಿಕರು ಚರ್ಚಿಸುವಂತಾಗಿದೆ.
ಇತ್ತೀಚೆಗೆ ಶಿಕಾರಿಪುರದಲ್ಲೂ ಸಹ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಿದ್ದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಸಂಸದರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೆಲ್ಲಾ ನೋಡಿದರೆ ಸರ್ಕಾರದ ಸೂಚನೆ, ಆದೇಶ ಕೇವಲ ಸಾರ್ವಜನಿಕರಿಗೆ ಮಾತ್ರ ತಮಗಲ್ಲ ಎಂಬುವಂತಾಗಿದೆ ಜನಪ್ರತಿನಿಧಿಗಳ ವರ್ತನೆ.