Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡು ಯುವ ವೈದ್ಯೆ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡು ಯುವ ವೈದ್ಯೆ ಸಾವು

Crime

ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡು ಯುವ ವೈದ್ಯೆ ಸಾವು

Public TV
Last updated: June 22, 2021 8:22 am
Public TV
Share
2 Min Read
viswamaya 2 1
SHARE

– ಮದುವೆಯಾಗಿ ವರ್ಷಕ್ಕೆ ಆತ್ಮಹತ್ಯೆ..?

ತಿರುವನಂತಪುರಂ: ವರ್ಷದ ಹಿಂದಷ್ಟೇ ವಿವಾಹವಾಗಿದ್ದ 24 ವರ್ಷದ ಯುವ ವೈದ್ಯೆ ಪತಿಯ ಮನೆಯಲ್ಲೇ ಸಾವನ್ನಪ್ಪಿದ್ದು, ಇದಕ್ಕೂ ಮುನ್ನ ತನಗೆ ನೀಡಿದ ಕಿರುಕುಳದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾಳೆ.

ಕೇರಳದ ಕೊಲ್ಲಂ ಜಿಲ್ಲೆಯ ಸಾಸ್ತಂಕೋಟಾ ಬಳಿಯ ಸಾಸ್ತಮ್ನಾಡದಲ್ಲಿ ಘಟನೆ ನಡೆದಿದ್ದು, ಸಾವನ್ನಪ್ಪಿದ 24 ವರ್ಷದ ಯುವ ವೈದ್ಯೆಯನ್ನು ವಿಸ್ಮಯ.ವಿ.ನೈಯರ್ ಎಂದು ಗುರುತಿಸಲಾಗಿದೆ. ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಆ್ಯಂಡ್ ಸರ್ಜರಿ ವಿದ್ಯಾರ್ಥಿನಿಯಾಗಿದ್ದ ವಿಸ್ಮಯ 2020ರ ಮೇ ತಿಂಗಳಲ್ಲಿ ಮೋಟಾರು ವಾಹನ ಇಲಾಖೆಯ ಅಧಿಕಾರಿ ಎಸ್.ಕಿರಣ್‍ಕುಮಾರ್ ಜೊತೆ ವಿವಾಹವಾಗಿದ್ದರು. ಮನೆಯವರು ಅದ್ಧೂರಿಯಾಗಿ ವಿವಾಹ ಮಾಡಿಕೊಟ್ಟಿದ್ದರು. ದಂಪತಿ ಕೇರಳದ ಕೊಲ್ಲಂನಲ್ಲಿ ವಾಸವಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

Vismaya Kiran 210621 6505 medium

ಘಟನೆ ನಡೆಯುವುದಕ್ಕೂ 2 ದಿನ ಮುಂಚೆ ತನ್ನ ಸೋದರ ಸಂಬಂಧಿಗೆ ಈ ಕುರಿತು ತಿಳಿಸಿದ್ದು, ವರದಕ್ಷಿಣೆ ಸಂಬಂಧ ಪತಿ ಕಿರುಕುಳ ನೀಡುತ್ತಿದ್ದು, ಹಲವು ಬಾರಿ ಹೊಡೆದಿದ್ದಾನೆ ಎಂದು ವಿವರಿಸಿದ್ದಾಳೆ.

ಸೋಮವಾರ ಬೆಳಗ್ಗೆ ಗಂಡನ ಮನೆಯಲ್ಲಿ ವಿಸ್ಮಯ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ದೇಹದ ಮೇಲೆ ಗಾಯದ ಗುರುತುಗಳಿವೆ. ಸಾವಿಗೂ ಮುನ್ನನ ವಿಸ್ಮಯ ತನ್ನ ಸೋದರ ಸಂಬಂಧಿ ಜೊತೆ ನೋವನ್ನು ತೋಡಿಕೊಂಡಿದ್ದು, ಪತಿಯ ಚಿತ್ರ ಹಿಂಸೆಯನ್ನು ಸಹಿಸಲಾಗುತ್ತಿಲ್ಲ, ವರದಕ್ಷಿಣೆ ಬೇಕೆಂದು ನಿತ್ಯ ಹಿಂಸೆ ನಿಡುತ್ತಿದ್ದಾನೆ ಎಂದು ತಿಳಿಸಿದ್ದಾಳೆ. ಈ ಕುರಿತು ಭಾನುವಾರ ರಾತ್ರಿ ಸಹ ಸೋದರಸಂಬಂಧಿ ಜೊತೆ ಸಾಮಾಜಿಕ ಜಾಲತಾಣಗಳ ಮೂಲಕ ಫೋಟೋಗಳನ್ನು ಹಂಚಿಕೊಂಡಿದ್ದು, ಕಿರುಕುಳ ಸಹಿಸಲಾಗುತ್ತಿಲ್ಲ. ಬಹುಶಃ ಇದೇ ಕೊನೆಯ ಮೆಸೇಜ್ ಆಗಬಹುದು ಎಂದು ಹೇಳಿಕೊಂಡಿದ್ದಳು. ಮರುದಿನ ಬೆಳಗ್ಗೆ ವಿಸ್ಮಯ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

Vismaya injury photo 21062021 650 medium

ವಿಸ್ಮಯ ತಂದೆ ತ್ರಿವಿಕ್ರಮನ್ ನೈಯರ್ ಈ ಕುರಿತು ಮಾಹಿತಿ ನೀಡಿದ್ದು, ಈ ಹಿಂದೆ ಸಹ ಆತನ ಹಲ್ಲೆ ಮಾಡಿದ್ದ, ಒಮ್ಮೆ ಅವಳೊಂದಿಗೆ ನಾನು ಮನೆಗೆ ತೆರಳಿದಾಗ ಪಾರ್ಟಿ ಮಾಡಿ, ಎಲ್ಲರೂ ಕುಡಿದಿದ್ದರು. ನಾವು ಮನೆಗೆ ಪ್ರವೇಶಿಸುತ್ತಿದ್ದಂತೆ ಆತ ವಿಸ್ಮಯಳನ್ನು ಹೊಡೆಯಲು ಆರಂಭಿಸಿದ. ಈ ಕುರಿತು ನನ್ನ ಮಗ ಪ್ರಶ್ನಿಸಲು ಹೋದಾಗ ಅವನನ್ನೂ ಹೊಡೆದಿದ್ದ. ಆಗಲೂ ಈ ಕುರಿತು ನಾವು ಪ್ಯಾಟ್ರೋಲ್ ಪೊಲೀಸರಿಗೆ ತಿಳಿಸಿದ್ದೆವು. ಪೊಲೀಸರು ಆತನನ್ನು ಠಾಣೆಗೆ ಕರೆದೊಯ್ದಿದ್ದೆವು. ಸರ್ಕಲ್ ಇನ್‍ಸ್ಪೆಕ್ಟರ್ ಕಿರಣ್ ಕುಟುಂಬಸ್ಥರನ್ನು ಕರೆದು ಸಂಧಾನ ನಡೆಸಿದ್ದರು. ಬಳಿಕ ನನ್ನ ಮಗ ಇದೊಂದು ಬಾರಿ ಬಿಟ್ಟುಬಿಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದ. ಬಳಿಕ ನನ್ನ ಮಗಳು ನಮ್ಮ ಮನೆಯಲ್ಲೇ ಇದ್ದಳು. ಆದರೆ ಎರಡು ತಿಂಗಳ ಹಿಂದೆ ಅವಳು ಬಿಎಎಂಎಸ್ ಪರೀಕ್ಷೆ ಬರೆಯಲು ಕಾಲೇಜಿಗೆ ಹೋಗುವಾಗ ಕಿರಣ್ ಅವಳನ್ನು ಮನೆಗೆ ಕರೆದೊಯ್ದಿದ್ದ. ಬಳಿಕ ಅವಳು ನಮ್ಮ ಮನೆಗೆ ಬಂದಿರಲಿಲ್ಲ ಎಂದು ವಿವರಿಸಿದ್ದಾರೆ.

Kiran 210621 650 medium

ಈ ಘಟನೆ ನಡೆದ ಬಳಿಕ ವಿಸ್ಮಯ ತನ್ನ ತಾಯಿಗೆ ಮಾತ್ರ ಕರೆ ಮಾಡುತ್ತಿದ್ದಳು. ತಂದೆ, ಸಹೋದರನಿಗೆ ಕರೆ ಮಾಡುತ್ತಿರಲಿಲ್ಲ. ಇದೆಲ್ಲ ನನಗೆ ಈಗ ತಿಳಿದಿದೆ. ಕಿರಣ್ ಹಲ್ಲೆ ಮಾಡಿರುವುದನ್ನು ಅವಳು ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಳು. ಅಲ್ಲದೆ ಎರಡು ದಿನಗಳ ಹಿಂದೆ ನನ್ನ ಸೋದರ ಸಂಬಂಧಿಗೂ ಮೆಸೇಜ್ ಮಾಡಿ, ಕಿರಣ್ ಕೆಲಸಕ್ಕೆ ಹೋದಾಗ ನನ್ನನ್ನು ಮನೆಯಿಂದ ಕರೆದುಕೊಂಡು ಹೋಗು ಎಂದು ತಿಳಿಸಿದ್ದಳು ಎಂದು ವಿವರಿಸಿದ್ದಾರೆ.

vismaya medium

ಮರುದಿನ ಬೆಳಗ್ಗೆ ವಿಸ್ಮಯ ದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಗಳ ಸಾವಿಗೆ ಆಕೆಯ ಪತಿಯೇ ಕಾರಣ, ಮದುವೆ ಸಮಯದಲ್ಲಿ ಒಂದು ಎಕರೆ ಭೂಮಿ, ಒಂದು ಕಾರನ್ನು ನೀಡಲಾಗಿದೆ. ಆದರೂ ಅಳಿಯನ ಹಣದಾಹ ಕಡಿಮೆಯಾಗಿರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದೀಗ ಆರೋಪಿ ಕಿರಣ್ ಕುಮಾರ್‍ನನ್ನು ಬಂಧಿಸಲಾಗಿದೆ.

TAGGED:doctorDowryhusbandkeralapolicePublic TVWifeಕೇರಳಪತಿಪತ್ನಿಪಬ್ಲಿಕ್ ಟಿವಿಪೊಲೀಸರುವರದಕ್ಷಿಣೆವೈದ್ಯೆ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Hardeep Singh Puri e1632403467811
Latest

Jeffrey Epstein Files | ನಾನು 3-4 ಬಾರಿ ಭೇಟಿಯಾಗಿದ್ದೆ – ಕೇಂದ್ರ ಸಚಿವ ಹರ್ದೀಪ್‌ ಪುರಿ

Public TV
By Public TV
7 minutes ago
h.d.deve gowda
Latest

ಕೈಗಾರಿಕಾ ಕಾರಿಡಾರ್; ಬೆಂಗಳೂರಿನಿಂದ ಮಂಗಳೂರಿಗೆ ವಿಸ್ತರಿಸಲು ಹೆಚ್.ಡಿ.ದೇವೇಗೌಡ ಸಲಹೆ

Public TV
By Public TV
28 minutes ago
Eshwar Khandre
Bengaluru City

ಎನ್.ಎಂ.ಡಿ.ಸಿ ಅಕ್ರಮ ಅದಿರು ರವಾನೆ ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Public TV
By Public TV
57 minutes ago
love jihad mangaluru
Dakshina Kannada

ಕರಾವಳಿಯಲ್ಲಿ ಮತ್ತೆ ಲವ್ ಜಿಹಾದ್ ಆರೋಪ; ಯುವಕನ ಜೊತೆ ಪರಾರಿಯದ ಕೇರಳ ಯುವತಿ

Public TV
By Public TV
1 hour ago
rahul gandhi kiren rijiju
Latest

ರಾಹುಲ್ ಗಾಂಧಿ ಭಾಷಣದ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಬಿಜೆಪಿ ನಿರ್ಧಾರ

Public TV
By Public TV
2 hours ago
BD Bhukanth
Bengaluru City

ಬಿಜೆಪಿ ಕಾರ್ಯಕರ್ತನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನ ಹಿಂಪಡೆದ ಸರ್ಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?