ಸಾರಿಗೆ ನೌಕರರಲ್ಲಿ ಬಿ.ವೈ ವಿಜಯೇಂದ್ರ ಮನವಿ

Public TV
1 Min Read
VIJAYENDRA 1

ರಾಯಚೂರು: ಜನರಿಗೆ ತೊಂದರೆ ಕೊಡದೆ ಪರಿಸ್ಥಿತಿ ಅರಿತುಕೊಂಡು ನಡೆದುಕೊಳ್ಳುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿಕೊಂಡಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಮುದಗಲ್ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ತೊಂದರೆ ಕೊಡುವಂತ ಕೆಲಸಕ್ಕೆ ಮುಂದಾಗಬಾರದು. ಸಿಎಂ ಹಾಗೂ ಸಾರಿಗೆ ಸಚಿವರು ಹಾಗೂ ಅಧಿಕಾರಿಗಳು ಇದರ ಬಗ್ಗೆ ಚರ್ಚೆ ಮಾಡ್ತಿದ್ದಾರೆ. ಶೀಘ್ರದಲ್ಲೇ ಇದರ ಬಗ್ಗೆ ಪರಿಹಾರ ಕಂಡುಕೊಳ್ತಾರೆ ಎಂದು ತಿಳಿಸಿದ್ದಾರೆ.

VIJAYENDRA

ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಸರ್ಕಾರದ್ದು ಅದರದ್ದೇ ಆದ ಇತಿಮಿತಿಗಳು ಇರುತ್ತವೆ. ಪರಸ್ಥಿತಿ ಅರಿತುಕೊಂಡು ಜನರಿಗೆ ಸಮಸ್ಯೆ ಆಗೋ ರೀತಿಯಲ್ಲಿ ನಡೆದುಕೊಳ್ಳದಂತೆ ಮನವಿ ಮಾಡಿಕೊಂಡರು.

ರಾಜ್ಯದ 31 ಜಿಲ್ಲೆಗಳಲಲಿಯೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಡಿಸೆಂಬರ್‍ನಲ್ಲಿ 4 ದಿನ ಸಾರಿಗೆ ನೌಕರರ ಮುಷ್ಕರ ನಡೆದಿತ್ತು. ಇದೀಗ ಮತ್ತೆ ಇಂದಿನಿಂದ ಅನಿರ್ದಿಷ್ಟಾವಧಿಗೆ ಬಸ್ ಮುಷ್ಕರ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *