Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಸಾರಿಗೆ ಸುರಕ್ಷಾ’ ಸಂಚಾರಿ ಐಸಿಯು ಬಸ್‌ ಆಂಬುಲೆನ್ಸ್ ಲೋಕಾರ್ಪಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ‘ಸಾರಿಗೆ ಸುರಕ್ಷಾ’ ಸಂಚಾರಿ ಐಸಿಯು ಬಸ್‌ ಆಂಬುಲೆನ್ಸ್ ಲೋಕಾರ್ಪಣೆ

Belgaum

‘ಸಾರಿಗೆ ಸುರಕ್ಷಾ’ ಸಂಚಾರಿ ಐಸಿಯು ಬಸ್‌ ಆಂಬುಲೆನ್ಸ್ ಲೋಕಾರ್ಪಣೆ

Public TV
Last updated: June 4, 2021 10:29 pm
Public TV
Share
2 Min Read
Sarige Suraksha 1
SHARE

ಬೆಳಗಾವಿ: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ 2ನೇ ಅಲೆಯು ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ವಾ.ಕ.ರ.ಸಾ. ಸಂಸ್ಥೆಯು ‘ಸಾರಿಗೆ ಸುರಕ್ಷಾ’ ಹೆಸರಿನ ಬಸ್ ಆಂಬುಲೆನ್ಸ್ ಪ್ರಾರಂಭಿಸಿದೆ.‌ ಬೆಳಗಾವಿಯ ಸುವರ್ಣ ವಿಧಾನ ಸೌಧದ ಆವರಣದಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ಬಸ್ ಆಂಬುಲೆನ್ಸ್‌ಗೆ ಚಾಲನೆ ನೀಡಿದರು.

ಈ ಆಂಬುಲೆನ್ಸ್ ನಿರ್ಮಾಣಕ್ಕೆ ಒಟ್ಟು ರೂ.7,88,000 (Overhead ಹೊರತುಪಡಿಸಿ) ವೆಚ್ಚ ತಗುಲಿದ್ದು, ಹುಬ್ಬಳ್ಳಿ ಯ ವಾ.ಕ.ರ.ಸಾ. ಸಂಸ್ಥೆಯ ಪ್ರಾದೇಶಿಕ ಕಾರ್ಯಾಗಾರದಲ್ಲಿ ನಿರ್ಮಿಸಲಾಗಿದೆ.

Sarige Suraksha 2 medium

ಆಂಬುಲೆನ್ಸ್ ನಲ್ಲಿ ವಿಶೇಷ ಚಿಕಿತ್ಸಾ ವ್ಯವಸ್ಥೆಗಳು: ಸಾರಿಗೆ ಸುರಕ್ಷಾ ವಾಹನದಲ್ಲಿ ನಾಲ್ಕು ಹಾಸಿಗೆಗಳಿದ್ದು, ಐಸಿಯು ಸೌಲಭ್ಯ ಹೊಂದಿವೆ. ಪ್ರತಿಯೊಂದು ಬೆಡ್‌ಗೂ ಆಕ್ಸಿಜನ್ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿ ಬೆಡ್ ಹಾಗೂ ಕಿಟಕಿಗಳಿಗೆ ಕರ್ಟನ್ ಅಳವಡಿಸಲಾಗಿದೆ. ಅಲ್ಲದೇ, ವಾಹನದಲ್ಲಿರುವ ಪ್ರತಿಯೊಂದು ಬೆಡ್‌ಗಳಿಗೆ ಹಾಗೂ ವಾಹನದೊಳಗೆ ಬೆಳಕಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಾಹನದಲ್ಲಿರುವ 4 ಬೆಡ್‌ಗಳಿಗೂ ಫ್ಯಾನ್ ಅಳವಡಿಸಲಾಗಿದೆ. ಪ್ರತಿ ಬೆಡ್‌ಗಳ ನಡುವೆ ಔಷಧಿ/ವಸ್ತುಗಳ ಸ್ಟೋರ್ ಸ್ಟಾಂಡ್ ಅಳವಡಿಸಲಾಗಿದ್ದು, ಐವಿ ವ್ಯವಸ್ಥೆ, ತುರ್ತು ಔಷಧಿ ವ್ಯವಸ್ಥೆ ಹಾಗೂ ಥರ್ಮಾಮೀಟರ್ ಮತ್ತು ಆಕ್ಸಿಮೀಟರ್ ಒದಗಿಸಲಾಗಿದೆ. ಡ್ಯೂಟಿ ಡಾಕ್ಟರ್/ನರ್ಸ್‌ಗಳಿಗೆ ಪ್ರತ್ಯೇಕ ಕೌಂಟರ್ ಮತ್ತು ಫ್ಯಾನ್ ಅಳವಡಿಸಿರುವುದು ಈ ವಾಹನದ ವಿಶೇಷವಾಗಿದೆ. ಇದನ್ನೂ ಓದಿ: KSRTC ಹೆಸರು ಕೈ ತಪ್ಪುವ ಆತಂಕ ಬೇಡ: ಡಿಸಿಎಂ ಸವದಿ ಸ್ಪಷ್ಟನೆ

ಅನುಪಯುಕ್ತ ವಾಹನವನ್ನು ಬಳಸಿ ಸ್ತ್ರೀ ಶೌಚಾಲಯ ನಿರ್ಮಾಣ: ಮಹಿಳಾ ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕಾಗಿ ವಾ.ಕ.ರ.ಸಾ. ಸಂಸ್ಥೆಯು ಹುಬ್ಬಳ್ಳಿಯ ಪ್ರಾದೇಶಿಕ ಕಾರ್ಯಾಗಾರದಲ್ಲಿ ಅನುಪಯುಕ್ತ ವಾಹನವನ್ನು ‘ಸ್ತ್ರೀ ಶೌಚಾಲಯ’ವನ್ನಾಗಿ ಪರಿವರ್ತಿಸಿದೆ. ಈ ಶೌಚಾಲಯದ ನಿರ್ಮಾಣಕ್ಕೆ ಒಟ್ಟು ರೂ.8,13,962 (Overhead ಹೊರತುಪಡಿಸಿ) ವೆಚ್ಚ ತಗುಲಿದೆ.

ಮುಖ್ಯಮಂತ್ರಿ @BSYBJP ರವರಿಂದ ಇಂದು ಬೆಳಗಾವಿಯಲ್ಲಿ ಲೋಕಾರ್ಪಣೆಗೊಂಡ "ಸಾರಿಗೆ ಸುರಕ್ಷಾ” – ಬಸ್ ಆಂಬ್ಯುಲೆನ್ಸ್ ಸೇವೆಯ ವೈಶಿಷ್ಟ್ಯತೆಗಳು;#KarnatakaFightsCorona #BusAmbulance@PMOIndia @MoHFW_INDIA @LaxmanSavadi pic.twitter.com/Df5v5MA0Ps

— CM of Karnataka (@CMofKarnataka) June 4, 2021

ಸ್ತ್ರೀ ಶೌಚಾಲಯದ ವಿಶೇಷತೆಗಳು: ವಾಹನದ ಒಳ ಹೋಗುವ ಸ್ಟೆಪ್‌ನ ಬಲಭಾಗದಲ್ಲಿ ಮಗುವಿಗೆ ಡೈಪರ್ ಬದಲಾಯಿಸುವ ಸಲುವಾಗಿ ಮಗು ಆರೈಕೆ ವ್ಯವಸ್ಥೆಯ ಕೊಠಡಿ ಕಲ್ಪಿಸಲಾಗಿದೆ ಹಾಗೂ ಮಗುವಿಗೆ ಹಾಲುಣಿಸುವ ಸಲುವಾಗಿ ಪ್ರತ್ಯೇಕ ಕೊಠಡಿಯನ್ನು ನಿರ್ಮಿಸಲಾಗಿದೆ. ಈ ವಾಹನದಲ್ಲಿ 4 ಶೌಚಾಲಯಗಳಿದ್ದು, 2 ಶೌಚಾಲಯ ಇಂಡಿಯನ್ ಮಾದರಿ ಹಾಗೂ 2 ಶೌಚಾಲಯ ವೆಸ್ಟರ್ನ್ ಮಾದರಿಯಲ್ಲಿ ಇವೆ ಹಾಗೂ ಕೈ ತೊಳೆಯುವ ಸಲುವಾಗಿ ನೀರಿನ ನಳಗಳನ್ನು ಒಳಗೊಂಡಿರುವ 2 ಸಿಂಕ್‌ಗಳನ್ನು ಅಳವಡಿಸಲಾಗಿದೆ.

ವಿದ್ಯುತ್ ವ್ಯವಸ್ಥೆಗಾಗಿ 3.5 ಕೆವಿಎ ಸಾಮರ್ಥ್ಯದ ಯುಪಿಎಸ್ ಇನ್ವರ್ಟರ್ ಅಳವಡಿಸಲಾಗಿದೆ ಮತ್ತು ಸಂಚಾರಿ ಶೌಚಾಲಯಕ್ಕೆ ಸ್ಥಳೀಯವಾಗಿ ಲಭ್ಯವಿರುವ ಎಕ್ಸ್‌ಟರ್ನಲ್ ಎ.ಸಿ. ಪವರ್ ಸಪ್ಲೈನಿಂದ ಸಂಪರ್ಕ ಪಡೆದುಕೊಳ್ಳಲು ಬೇಕಾದ ಸ್ವಿಚ್ ಅಳವಡಿಸಲಾಗಿದೆ. ಅಲ್ಲದೇ, ವಿದ್ಯುತ್ ಸಂಪರ್ಕ ತಾತ್ಕಾಲಿಕವಾಗಿ ಸ್ಥಗಿತಗೊಂಡಲ್ಲಿ 3 ಗಂಟೆಗಳವರೆಗೆ ಬ್ಯಾಕಪ್ ಇರುತ್ತದೆ. ವಾಹನದ ಎಲ್ಲಾ ಕೊಠಡಿಗಳಿಗೆ ಬೆಳಕು ಮತ್ತು ಫ್ಯಾನ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಶೌಚಾಲಯದಲ್ಲಿ ನೀರಿನ ರಭಸವನ್ನು ಹೆಚ್ಚಿಸಲು ಪ್ರೆಶರ್ ಪಂಪ್ ಅಳವಡಿಸಲಾಗಿದೆ. ಚಾಲಕರ ಕ್ಯಾಬಿನನಲ್ಲಿ 1,000 ಲೀಟರ್ ನೀರನ್ನು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಟ್ಯಾಂಕ್ ಅಳವಡಿಸಲಾಗಿದೆ.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹಸಚಿವ ಬಸವರಾಜ ಬೊಮ್ಮಾಯಿ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಉಮೇಶ್ ಕತ್ತಿ, ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್ ಹಾಗೂ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:belagaviBusAmbulanceICUBusSarige Surakshaಬಸ್‌ ಆಂಬುಲೆನ್ಸ್‌ಬೆಳಗಾವಿಸಾರಿಗೆ ಸುರಕ್ಷಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
26 minutes ago
Kunigal Ranganath
Bengaluru City

ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

Public TV
By Public TV
27 minutes ago
CRIME
Bengaluru City

ಹೆಂಡತಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

Public TV
By Public TV
37 minutes ago
Team India 2
Cricket

T20 World Cup | ಟೀಂ ಇಂಡಿಯಾದ ‘ಸೂಪರ್-8’ ಸಂಗ್ರಾಮ – ಹೀಗಿದೆ ವೇಳಾಪಟ್ಟಿ

Public TV
By Public TV
54 minutes ago
HISTORIC After Lok Sabha Rajya Sabha Passes Womens Reservation Bill With Majority Votes
Latest

Rajya Sabha Elections: 10 ರಾಜ್ಯಗಳ 37 ಸ್ಥಾನಗಳಿಗೆ ಮಾ.16 ರಂದು ಮತದಾನ

Public TV
By Public TV
1 hour ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?