Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಲದಲ್ಲಿ ವಿಐಎಲ್ ಕಂಪನಿ – ಸರ್ಕಾರಕ್ಕೆ ಷೇರು ಮಾರಲು ಮುಂದಾದ ಬಿರ್ಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಾಲದಲ್ಲಿ ವಿಐಎಲ್ ಕಂಪನಿ – ಸರ್ಕಾರಕ್ಕೆ ಷೇರು ಮಾರಲು ಮುಂದಾದ ಬಿರ್ಲಾ

Latest

ಸಾಲದಲ್ಲಿ ವಿಐಎಲ್ ಕಂಪನಿ – ಸರ್ಕಾರಕ್ಕೆ ಷೇರು ಮಾರಲು ಮುಂದಾದ ಬಿರ್ಲಾ

Public TV
Last updated: August 3, 2021 5:05 pm
Public TV
Share
3 Min Read
Kumar Mangalam Birla vil
SHARE

ನವದೆಹಲಿ: ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ ವೊಡಾಫೋನ್ ಐಡಿಯಾ ಲಿಮಿಟೆಡ್ (ವಿಐಎಲ್) ಕಂಪನಿಯಲ್ಲಿ ತಾವು ಹೊಂದಿರುವ ಷೇರುಗಳನ್ನು ಸರ್ಕಾರಕ್ಕೆ ವರ್ಗಾವಣೆ ಮಾಡುವುದಾಗಿ ಹೇಳಿದ್ದಾರೆ.

ಸಾಲದ ಸುಳಿಯಲ್ಲಿರುವ ವಿಐಎಲ್ ಕಂಪನಿ ಬಾಕಿ ಉಳಿಸಿಕೊಂಡಿರುವ ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ (ಅಡ್ಜಸ್ಟೆಡ್ ಗ್ರಾಸ್ ರೆವೆನ್ಯೂ- ಎಜಿಆರ್) ಹಣವನ್ನು ಪಾವತಿಸಬೇಕಿದೆ. ಈ ನಡುವೆ ಕುಮಾರ್ ಮಂಗಲಂ ಬಿರ್ಲಾ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ನಮಗೆ ಪರಿಹಾರ ಕಲ್ಪಿಸಬೇಕು ಎಂದು ಕೇಳಿದ್ದಾರೆ.

ಬಿರ್ಲಾ ಅವರು ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರಿಗೆ ಜೂನ್ 7ರಂದು ಬರೆದಿರುವ ಪತ್ರದಲ್ಲಿ ಸರ್ಕಾರ ಮಾತ್ರ ಅಲ್ಲದೆ ವಿಐಎಲ್ ಕಂಪನಿಯನ್ನು ಮುನ್ನಡೆಸುವ ಶಕ್ತಿ ಇದೆ ಎಂದು ಸರ್ಕಾರ ಹೇಳುವ ಯಾವುದೇ ಕಂಪನಿಗೆ ಕೂಡ ಷೇರು ವರ್ಗಾವಣೆ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ.  ಇದನ್ನೂ ಓದಿ : ಸರ್ಕಾರ ಸಹಾಯ ಮಾಡದಿದ್ದರೆ ವೊಡಾಫೋನ್, ಐಡಿಯಾ ಮುಚ್ಚುತ್ತೇವೆ- ಬಿರ್ಲಾ

vodafone A

ಅಂಕಿಅಂಶಗಳ ಪ್ರಕಾರ ವಿಐಎಲ್ ಕಂಪನಿಯು ಎಜಿಆರ್ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ 50,399 ಕೋಟಿ ರೂ. ಹಣವನ್ನು ಪಾವತಿಸಬೇಕಿದೆ. ಸರ್ಕಾರ ಹಾಕಿರುವ ಎಜಿಆರ್ ಲೆಕ್ಕ ಸರಿಯಿಲ್ಲ ಎಂದು ಎಂದು ವಿಐಎಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ ಕಂಪನಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

ವಿಐಎಲ್ ಕಂಪನಿಗೆ 25 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಕಂಪನಿಯ ಆಡಳಿತ ಮಂಡಳಿ 2020ರ ಸೆಪ್ಟೆಂಬರ್ ನಲ್ಲಿ ಅನುಮತಿ ನೀಡಿತ್ತು. ಆದರೆ ಅಷ್ಟು ಮೊತ್ತವನ್ನು ಸಂಗ್ರಹಿಸಲು ಕಂಪನಿ ವಿಫಲವಾಗಿತ್ತು.

vodafone idea e1575707198848 medium

ಕಂಪನಿಯನ್ನೇ ಮುಚ್ಚುತ್ತೇವೆ:
ಬಿರ್ಲಾ ಅವರು ಕಂಪನಿಯಲ್ಲಿ ಶೇ 27ರಷ್ಟು ಷೇರು ಹೊಂದಿದ್ದಾರೆ. ಈ ಹಿಂದೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಬಿರ್ಲಾ ಅವರು, ಕೇಂದ್ರ ಸರ್ಕಾರ ನಮಗೆ ಪರಿಹಾರೋಪಾಯಗಳನ್ನು ಕಲ್ಪಿಸದಿದ್ದಲ್ಲಿ ವೊಡಾಫೋನ್ ಹಾಗೂ ಐಡಿಯಾ ಕಂಪನಿಗಳನ್ನು ಮುಚ್ಚುತ್ತೇವೆ ಹೇಳಿದ್ದರು. ಇದನ್ನೂ ಓದಿ : ತಿಂಗಳಿಗೆ 160 ರೂ.ಗೆ 16 ಜಿಬಿ ಡೇಟಾ ಸಿಗುತ್ತಿರುವುದು ದುರಂತ – ಏರ್‌ಟೆಲ್‌ ಮುಖ್ಯಸ್ಥ

ಕೇಂದ್ರ ಸರ್ಕಾರದ ನಮಗೆ ಏನಾದರೂ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ವೊಡಾಫೋನ್, ಐಡಿಯಾದ ಅಧ್ಯಾಯ ಮುಕ್ತಾಯವಾಗಲಿದೆ. ದಿವಾಳಿಯಾದ ನಂತರವೂ ನಾವು ಹಣ ಹೂಡುವುದರಲ್ಲಿ ಅರ್ಥವಿಲ್ಲ ಹೀಗಾಗಿ ನಾವು ಮಳಿಗೆಗಳನ್ನು ಮುಚ್ಚುತ್ತೇವೆ ಎಂದು ಬಿರ್ಲಾ ಸ್ಪಷ್ಟಪಡಿಸಿದ್ದರು.

MOBILE PHONE TOWER

ಅರ್ಜಿ ವಜಾ:
ಎಜಿಆರ್ ಪ್ರಕರಣ ಸಂಬಂಧ 2019ರ ಅಕ್ಟೋಬರ್ 26 ರಂದು ಕೇಂದ್ರ ಸರ್ಕಾರದ ಪರ ತೀರ್ಪು ನೀಡಿರುವ ಸುಪ್ರೀಂಕೋರ್ಟ್ 92 ಸಾವಿರ ಕೋಟಿ ರೂ. ಹಣವನ್ನು ಟೆಲಿಕಾಂ ಕಂಪನಿಗಳಿಂದ ವಸೂಲು ಮಾಡಲು ಅನುಮತಿ ನೀಡಿತ್ತು. ಅಷ್ಟೇ ಅಲ್ಲದೇ ಕೋರ್ಟ್ 3 ತಿಂಗಳ ಒಳಗಡೆ ಈ ಹಣವನ್ನು ಪಾವತಿಸುವಂತೆ ಟೆಲಿಕಾಂ ಕಂಪನಿಗಳಿಗೆ ಗಡುವು ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ವೊಡಾಫೋನ್ ಮತ್ತು ಏರ್ ಟೆಲ್ ಕಂಪನಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು.

ಬಾಕಿ ಎಷ್ಟಿದೆ?
ಎಜಿಆರ್ ಪ್ರಕರಣದಲ್ಲಿ ವೊಡಾಫೋನ್ ಐಡಿಯಾ ಲಿಮಿಟೆಡ್  ಕಂಪನಿ ಒಟ್ಟು 58,254 ಕೋಟಿ ರೂ.ವನ್ನು ಪಾವತಿಸಬೇಕಿತ್ತು. ಆದರೆ ಇಲ್ಲಿಯವರೆಗೆ ಕಂಪನಿ ಕೇವಲ 7,584 ಕೋಟಿ ರೂ. ಪಾವತಿಸಿದ್ದು ಇನ್ನೂ 50,399 ಕೋಟಿ ರೂ. ಪಾವತಿಸಬೇಕಿದೆ.

Supreme Court

ಏನಿದು ಎಜಿಆರ್?:
ದೇಶದ ಹೊಸ ಟೆಲಿಕಾಂ ನೀತಿ ಪ್ರಕಾರ, ದೂರಸಂಪರ್ಕ ಆದಾಯದ ಜತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ಎಜಿಆರ್ ಎಂದು ಪರಿಗಣಿಸಲಾಗುತ್ತದೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ಕಾರ್ಯನಿರ್ವಹಿಸುವ ಕಂಪನಿಗಳು ತಮ್ಮ ಎಜಿಆರ್ ನಲ್ಲಿ ಒಂದಷ್ಟು ಪಾಲನ್ನು ಕೇಂದ್ರ ಸರ್ಕಾರಕ್ಕೆ ನೀಡಬೇಕಾಗುತ್ತದೆ. ಅದನ್ನು ವಾರ್ಷಿಕ ಲೈಸೆನ್ಸ್ ಶುಲ್ಕ ಎಂದು ಕರೆಯಲಾಗುತ್ತದೆ. ಇದರ ಜತೆಗೆ ತಮಗೆ ಹಂಚಿಕೆಯಾದ ಸ್ಪೆಕ್ಟ್ರಂ ಅನ್ನು ಬಳಕೆ ಮಾಡಿದ್ದಕ್ಕೆ ಬಳಕೆ ಶುಲ್ಕವನ್ನೂ ಪಾವತಿಸಬೇಕಾಗಿದೆ.

TAGGED:ideakannada newsKumar Mangalam BirlatechtelecomVodafoneಆದಿತ್ಯ ಬಿರ್ಲಾಎಜಿಆರ್ಕುಮಾರ್ ಮಂಗಲಂ ಬಿರ್ಲಾಟೆಲಿಕಾಂವೊಡಾಫೋನ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

hassan Halle
Districts

ಶಾಸಕ ಶಿವಲಿಂಗೇಗೌಡ ಬಲಗೈ ಬಂಟನ ಪುತ್ರನಿಂದ ರೌಡಿಸಂ – ದಂಪತಿ ಮೇಲೆ ಮನಸ್ಸೋಯಿಚ್ಛೆ ಹಲ್ಲೆ ನಡೆಸಿ ಕ್ರೌರ್ಯ

Public TV
By Public TV
5 minutes ago
ಸಾಂದರ್ಭಿಕ ಚಿತ್ರ
Latest

ದಿವಾಳಿ ಪಾಕ್‌ನಿಂದ ಮತ್ತೆ ಶಾಕ್‌ – ಎಮ್ಮೆ ಸಾಕಿದವರಿಗೆ ಸೆಗಣಿ ತೆರಿಗೆ

Public TV
By Public TV
28 minutes ago
Khawaja Asif
Latest

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ

Public TV
By Public TV
34 minutes ago
Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
8 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?