Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ತವರು ಕ್ಷೇತ್ರ ಶಿಕಾರಿಪುರದಲ್ಲಿ ಆಪರೇಷನ್ ಕಮಲ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿಎಂ ತವರು ಕ್ಷೇತ್ರ ಶಿಕಾರಿಪುರದಲ್ಲಿ ಆಪರೇಷನ್ ಕಮಲ?

Districts

ಸಿಎಂ ತವರು ಕ್ಷೇತ್ರ ಶಿಕಾರಿಪುರದಲ್ಲಿ ಆಪರೇಷನ್ ಕಮಲ?

Public TV
Last updated: July 14, 2020 6:25 pm
Public TV
Share
2 Min Read
Shikaripura
SHARE

ಶಿವಮೊಗ್ಗ : ಈ ಕೊರೊನಾ ಮಹಾಮಾರಿ ತಲೆ ಮೇಲೆ ಹತ್ತಿ ಕುಣಿಯುತ್ತಿದೆ. ಯಾರು, ಎಲ್ಲಿ, ಏನು ಮಾಡಬೇಕೆಂಬ ಯೋಚನೆ ಮಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆಯೂ ಸಿಎಂ ತವರು ಜಿಲ್ಲೆ ಶಿವಮೊಗ್ಗದಲ್ಲಿ ರಾಜಕೀಯ ಮೇಲಾಟಗಳು ಮುಂದುವರಿದಿವೆ. ಇದೀಗ ಶಿಕಾರಿಪುರ ಪುರಸಭೆಯಲ್ಲಿ ಆಪರೇಷನ್ ಕಮಲ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಕೊರೋನಾ ಸಂಕಷ್ಟದ ನಡುವೆಯೂ ಸಿಎಂ ಮತ್ತು ಸಂಸದರ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲವಾಗಿದೆ.

Shikaripura 1

ಶಿಕಾರಿಪುರ ಎಂದಾಕ್ಷಣ ಬಿ.ಎಸ್. ಯಡಿಯೂರಪ್ಪ, ಬಿ.ಎಸ್. ಯಡಿಯೂರಪ್ಪ ಅಂದರೆ ಶಿಕಾರಿಪುರ ಎಂಬ ಮಾತಿದೆ. ಆದರೆ ಶಿಕಾರಿಪುರ ಪುರಸಭೆಯಲ್ಲಿ ಮಾತ್ರ ಕಳೆದ ಒಂದೂವರೆ ವರ್ಷದಿಂದ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆ. ಆದರೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕ ಇದುವರೆಗೂ ಆಗಿಲ್ಲ ಎಂಬುದು ಇಲ್ಲಿ ಪ್ರಮುಖ ಸಂಗತಿ. ಮೀಸಲಾತಿ ಪ್ರಕಟಗೊಂಡಿದ್ದರೂ ಇದನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ಡಿಸೆಂಬರ್ ನಲ್ಲಿ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ಸಹ ಸರ್ಕಾರ ಮೀಸಲಾತಿ ಪ್ರಕಟಿಸಿತ್ತು. ಇದಕ್ಕೂ ಸಹ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಪುರಸಭೆಯಲ್ಲಿ ಕಾಂಗ್ರೆಸ್ ಗೆ ಬಹುಮತ ಇದ್ದರೂ ಸಹ ಅಧಿಕಾರ ಮಾತ್ರ ಅನುಭವಿಸಲು ಸಾಧ್ಯವಾಗಿಲ್ಲ. ಆದರೆ ಇದೀಗ ಬಿಜೆಪಿ ಆಪರೇಷನ್ ಕಮಲ ಮಾಡಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದಕ್ಕೆ ಕಾಂಗ್ರೆಸ್ ನಿಗಿ ನಿಗಿ ಕೆಂಡವಾಗಿದೆ.

Shikaripura 1

ಶಿಕಾರಿಪುರ ಪುರಸಭೆಯಲ್ಲಿ ವಾಮಮಾರ್ಗದಿಂದ ಅಧಿಕಾರ ಹಿಡಿಯಲು ಆಪರೇಷನ್ ಕಮಲ ಮಾಡಲಾಗಿದೆ ಎಂಬ ಆರೋಪವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡುತ್ತಿದ್ದಾರೆ. ಖುದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ಸಂಸದ ಬಿ.ವೈ. ರಾಘವೇಂದ್ರ ಅವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರ ಆರೋಪವಾಗಿದೆ.

Shikaripura 2

ಅಂದಹಾಗೆ ಶಿಕಾರಿಪುರ ಪುರಸಭೆಯಲ್ಲಿ ಕಳೆದ 20 ವರ್ಷದಿಂದ ಬಿಜೆಪಿ ಅಧಿಕಾರದಲ್ಲಿತ್ತು. ಬಿಜೆಪಿಯ ಆಡಳಿತ ಬೇಸತ್ತು ಕಳೆದ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‍ಗೆ ಆಶೀರ್ವದಿಸಿ ಬಹುಮತ ನೀಡಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ 12 ಸ್ಥಾನ, ಬಿಜೆಪಿ-8 ಹಾಗೂ ಮೂವರು ಪಕ್ಷೇತರರು ಆಯ್ಕೆಯಾಗಿದ್ದರು. ಇದರಿಂದ ಯಡಿಯೂರಪ್ಪ ಹಾಗೂ ಬಿ.ವೈ.ರಾಘವೇಂದ್ರ ಅವರಿಗೆ ಮುಖಭಂಗವಾಗಿತ್ತು. ಹಾಗೂ ಯಡಿಯೂರಪ್ಪ ಅವರ ನಿವಾಸದ ವಾರ್ಡ್‍ನಲ್ಲೂ ಸಹ ಬಿಜೆಪಿ ಅಭ್ಯರ್ಥಿ ಸೋಲು ಕಂಡಿದ್ದರು. ಇದೀಗ ಮರ್ಯಾದೆ ಉಳಿಸಿಕೊಳ್ಳಲು ಹಾಗೂ ಬಿಜೆಪಿ ಆಡಳಿತದಲ್ಲಿ ಆಗಿರುವ ಭ್ರಷ್ಟಾಚಾರವನ್ನು ಮರೆ ಮಾಚಲು ಆಪರೇಷನ್ ಕಮಲಕ್ಕೆ ಕೈಹಾಕಿ ಕಾಂಗ್ರೆಸ್ ಸದಸ್ಯರಾದ ರಮೇಶ್ ಹಾಗೂ ಉಮಾವತಿ ಅವರಿಂದ ರಾಜೀನಾಮೆ ಕೊಡಿಸಲಾಗಿದೆಯಂತೆ.

BJP Congress

ಪುರಸಭೆಯಲ್ಲಿ 35 ಸಿಬ್ಬಂದಿಗಳ ಹುದ್ದೆ ಖಾಲಿ ಇದ್ದರೂ ಸಹ ಇದುವರೆಗೆ ಭರ್ತಿ ಮಾಡಿಲ್ಲ. ಇದರಿಂದಾಗಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಚುನಾವಣೆ ನಡೆದು ಒಂದು ವರ್ಷ ಎರಡು ತಿಂಗಳು ಆಗಿದ್ದರೂ ಸಹ ಇದುವರೆಗೂ ಅಧ್ಯಕ್ಷ-ಉಪಾಧ್ಯಕ್ಷರ ನೇಮಕವಾಗಿಲ್ಲ. ಸದಸ್ಯರಿಗೆ ಗೌರವವೂ ಸಿಗುತ್ತಿಲ್ಲ ಹಾಗೂ ಕೆಲಸವೂ ಆಗುತ್ತಿಲ್ಲ ಎಂದು ಸಿ.ಎಂ. ಯಡಿಯೂರಪ್ಪ ವಿರುದ್ಧ ಶಿಕಾರಿಪುರ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

Congress BJP Flag

ಒಟ್ಟಾರೆ ಮುಖ್ಯಮಂತ್ರಿ ತವರು ಕ್ಷೇತ್ರ ಶಿಕಾರಿಪುರದ ಪುರಸಭೆಯಲ್ಲಿ ಕಾಂಗ್ರೆಸ್ ಆಡಳಿತ ನಡೆಸಿದ್ದಲ್ಲಿ ಹಿಂದಿನ ಬಿಜೆಪಿ ಆಡಳಿತದ ಭ್ರಷ್ಟಾಚಾರ ಬೆಳಕಿಗೆ ಬರಬಹುದು ಎಂಬ ಉದ್ದೇಶವಿದ್ದು, ಹೀಗಾಗಿ ಆಪರೇಷನ್ ಕಮಲಕ್ಕೆ ಕೈ ಹಾಕಿ ಹಿಂಬಾಗಿಲಿನಿಂದ ಅಧಿಕಾರ ಪಡೆಯಲು ಯತ್ನಿಸಿದ್ದಾರೆ ಎಂಬ ಆರೋಪ ಕಾಂಗ್ರೆಸ್ ನದ್ದಾಗಿದೆ. ಏನೇ ಆಗಲಿ ಕೊರೊನಾ ಬಂದು ತಲೆ ಮೇಲೆ ಕೂತಿರುವ ಇಂತಹ ಸಂದರ್ಭದಲ್ಲಿ ಇಂತಹ ಕ್ಷುಲ್ಲಕ ರಾಜಕೀಯ ಬೇಕಾ ಎಂಬುದು ಸಾರ್ವಜನಿಕರ ಮಾತಾಗಿದೆ.

TAGGED:bjpcongressOperation LotusPublic TVshikaripurShikaripur Municipalityಆಪರೇಷನ್ ಕಮಲಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಶಿಕಾರಿಪುರಶಿಕಾರಿಪುರ ಪುರಸಭೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
21 minutes ago
Bengaluru Nayandhalli
Bengaluru City

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

Public TV
By Public TV
52 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
2 hours ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
2 hours ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
2 hours ago
Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?