– ಅಶೋಕ್, ಸಿಟಿ ರವಿ, ಶೆಟ್ಟರ್ ಸಭೆ ನಡೆಸಿರುವುದು ಸುಳ್ಳು
– ಯಾರೂ ಒಬ್ಬರನ್ನೊಬ್ಬರು ಭೇಟಿ ಮಾಡಿಲ್ಲ
ಹಾಸನ: ಸಿಎಂ ಬದಲಾವಣೆ ಮಾಧ್ಯಮಗಳ ಉಹಾಪೋಹ ಅಷ್ಟೆ. ಸಿಎಂ ಬದಲಾವಣೆ ಇಲ್ಲ. ಯಡಿಯೂರಪ್ಪ ಅವರೇ ನಮ್ಮ ಪಕ್ಷದ ನಾಯಕ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
- Advertisement 2
- Advertisement 3
ಜಿಲ್ಲಾ ಪಂಚಾಯಿತಿ ಸಭೆ ಬಳಿಕ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ದೆಹಲಿಗೆ ಹೋಗಿ ರಾಷ್ಟ್ರ ನಾಯಕರ ಭೇಟಿ ವಿಚಾರವಾಗಿ ಮಾತನಾಡುವಾಗ ಅವರು ಈ ಕುರಿತು ಸ್ಪಷ್ಟಪಡಿಸಿದರು. ಜಗದೀಶ್ ಶೆಟ್ಟರ್ ಬೃಹತ್ ಕೈಗಾರಿಕಾ ಸಚಿವರು, ಪ್ರಭಾವಿ ನಾಯಕರು. ಕೈಗಾರಿಕಾ ಕ್ಷೇತ್ರದ ಕುರಿತು ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದಾರೆ. ಇನ್ನಾವುದೇ ಉದ್ದೇಶ ಇಲ್ಲ ಎಂದು ಅವರು ತಿಳಿಸಿದರು.
- Advertisement 4
ಕೈಗಾರಿಕಾ ಸಚಿವರು ಯಾಕೆ ದೆಹಲಿಗೆ ಹೋಗಿದ್ದರು ಎಂದು ನನ್ನನ್ನು ಕೇಳಿದರೆ ನನ್ನಂಥ ದಡ್ಡ ಯಾರೂ ಇಲ್ಲ. ಆದರೆ ಯಡಿಯೂರಪ್ಪ ಈ ರಾಜ್ಯದ ಮತ್ತು ನಮ್ಮ ಪಕ್ಷದ ಪ್ರಶ್ನಾತೀತ ನಾಯಕ ಎಂದು ಹೇಳಿದರು.
ಸಿಎಂ ಬದಲಾವಣೆ ವಿಚಾರದ ಬಗ್ಗೆ ಚಿಕ್ಕಮಗಳೂರಿನಲ್ಲಿ ಜಗದೀಶ್ ಶೆಟ್ಟರ್, ಆರ್.ಅಶೋಕ್ ಮತ್ತು ಸಿ.ಟಿ.ರವಿ ಭೇಟಿ ಮಾಡಿ ಸಭೆ ನಡೆಸಿದ್ದಾರೆ ಎಂಬುದರ ಕುರಿತು ಪ್ರತಿಕ್ರಿಯಿಸಿದ ಅವರು, ಸಿ.ಟಿ.ರವಿಯವರಿಗೆ ಕೋವಿಡ್-19 ಸೋಂಕು ತಗುಲಿತ್ತು. ಅವರನ್ನು ಮಾತನಾಡಿಸಲು ಯಾರೂ ಹೋಗಿರಲಿಲ್ಲ. ಆರ್.ಅಶೋಕ್ ಸಹ ಎಲ್ಲೋ ಇದ್ದರು. ಜಗದೀಶ್ ಶೆಟ್ಟರ್ ಅಲ್ಲಿ ಇರಲೇ ಇಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದರು.