Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿಎಂ ಬಿಎಸ್‍ವೈ ನೇತೃತ್ವದಲ್ಲಿ ಉತ್ತಮ ಕೆಲಸವಾಗುತ್ತಿದೆ: ಅರುಣ್ ಸಿಂಗ್

Public TV
Last updated: June 16, 2021 5:40 pm
Public TV
Share
2 Min Read
arun singh 1
SHARE

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಉತ್ತರ ಕೆಲಸಗಳಾಗುತ್ತಿವೆ. ನಾನು ಇದನ್ನು ಪ್ರತಿ ಬಾರಿ ಹೇಳಿದ್ದೇನೆ. ಈ ಬಗ್ಗೆ ಹೆಚ್ಚು ಪ್ರಶ್ನಿಸುವ ಅಗತ್ಯವಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದರು.

ಕುಮಾರ ಕೃಪಾ ಗೆಸ್ಟ್ ಹೌಸ್‍ನಲ್ಲಿ ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಉತ್ತರ ಕೆಲಸಗಳಾಗುತ್ತಿವೆ. ನಾನು ಇದನ್ನು ಪ್ರತಿ ಬಾರಿ ಹೇಳಿದ್ದೇನೆ. ಈ ಬಗ್ಗೆ ಹೆಚ್ಚು ಪ್ರಶ್ನಿಸುವ ಅಗತ್ಯವಿಲ್ಲ. ಬಿಜೆಪಿ ಸಚಿವರು, ಶಾಸಕರು, ನಾಯಕರು ಒಟ್ಟಾಗಿದ್ದಾರೆ. ಅಲ್ಲದೆ ಯಾರೂ ಸಹ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಮಾತನಾಡಬಾರದು. ಪಕ್ಷದ ವೇದಿಕೆಯಲ್ಲೇ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಅರುಣ್ ಸಿಂಗ್ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರಿಗೆ ಸೂಚಿಸಿದರು.

rcr cm bsy

ಅಲ್ಲದೆ ಪಕ್ಷದ ಸಂಘಟನೆ, ಕಾರ್ಯಕರ್ತರ ಬಗ್ಗೆ ಚರ್ಚಿಸಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರು ಸಾಕಷ್ಟು ಸೇವೆಯಲ್ಲಿ ತೊಡಗಿದ್ದಾರೆ. ಅಲ್ಲದೆ ಅಂತರಾಷ್ಟ್ರೀಯ ಯೋಗ ದಿನದ ಕುರಿತು ಸಹ ಚರ್ಚಿಸಬೇಕಿದೆ ಎಂದು ತಿಳಿಸಿದರು.

ಸಿಎಂ ಬದಲಾವಣೆ ಬಗ್ಗೆ ಮುಂದೆ ತಿಳಿಸ್ತೇನೆ
ಇದಕ್ಕೂ ಮೊದಲು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಕುರಿತು ಮುಂದೆ ತಿಳಿಸುತ್ತೇನೆ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆ ಕುರಿತು ಮಾಹಿತಿ ನೀಡಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಿರಾಕರಿಸಿದ್ದಾರೆ.

cm bsy 1

ಕೋವಿಡ್ ಸಂಕಷ್ಟ ಕಾಲದಲ್ಲಿ ಕಾರ್ಯಕರ್ತರು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಜೀವವನ್ನು ಲೆಕ್ಕಿಸದೆ, ಸಾರ್ವಜನಿಕರ ಸೇವೆ ಮಾಡಿದ್ದಾರೆ, ಸೇವೆಯೇ ಸಂಘಟನೆ ಎಂಬ ಮನೋಭಾವದಿಂದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಸೇವೆ ಮಾಡುವುದು ನಮ್ಮ ಪರಮ ಕರ್ತವ್ಯವಾಗಿದೆ. ಆದರೆ ಇಂತಹ ಕಠಿಣ ಪರಿಸ್ಥಿತಿಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ಆರೋಪ, ಪ್ರತ್ಯಾರೋಪ ಮಾಡುತ್ತಿದ್ದಾರೆ. ಜೆಡಿಎಸ್‍ನವರು ಇಂತಹ ಸಂದರ್ಭದಲ್ಲಿ ಕ್ವಾರಂಟೈನ್‍ನಲ್ಲಿ ಉಳಿದಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಏನ್ ಹೇಳ್ಬೇಕೋ ಅದನ್ನು ಕರ್ನಾಟಕದಲ್ಲೇ ಹೇಳ್ತೀನಿ: ಅರುಣ್ ಸಿಂಗ್

bjp

ಅವರು ಜನತೆಯ ಸೇವೆಯನ್ನು ಮಾಡುತ್ತಿಲ್ಲ, ಆದರೆ ಬಿಜೆಪಿ ಕಾರ್ಯಕರ್ತರು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದು ಜನತೆಗೆ ತಿಳಿದಿದೆ ಸಹ, ಅವರ ಕಾರ್ಯದ ಕುರಿತು ಸಮೀಕ್ಷೆ ಮಾಡಬೇಕಿದೆ. ಈ ಮೂಲಕ ಸೇವೆಯ ಮುಂದೆ ಹೇಗೆ ನಡೆಸಬೇಕು ಎಂಬುದರ ಕುರಿತು ಸಹ ನೋಡಬೇಕಿದೆ. ಬಿಜೆಪಿ ಕಾರ್ಯಕರ್ತರು ಗಿಡ ನೆಡುವುದು, ಒನ್ ಟೈಪ್ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸುವುದು ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದ್ದಾರೆ. ಅಲ್ಲದೆ ಮುಂದೆ ಯೋಗ ದಿನಾಚರಣೆಯನ್ನು ಸಹ ಅದ್ಧೂರಿಯಾಗಿ ಮಾಡಬೇಕಿದೆ. ಈ ಕಾರ್ಯಕ್ರಮಗಳ ಕುರಿತು ಸಹ ಕಾರ್ಯಕರ್ತರೊಂದಿಗೆ ಹಾಗೂ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಬೇಕಿದೆ ಎಂದು ವಿವರಿಸಿದರು.

BJP medium

ಅರುಣ್ ಸಿಂಗ್ ಸ್ವಾಗತಕ್ಕೆ ದೆಹಲಿ ವಿಶೇಷ ಪ್ರತಿನಿಧಿ ಶಂಕರ್ ಗೌಡ ಪಾಟೀಲ್ ಆಗಮಿಸಿದ್ದರು. ಜೊತೆಗೆ ಸಾಕಷ್ಟು ಬಿಜೆಪಿ ಕಾರ್ಯಕರ್ತರು ಸಹ ಆಗಮಿಸಿದ್ದರು. ಅಲ್ಲದೆ ಹವಾಮಾನದ ವೈಪರೀತ್ಯ ಹಿನ್ನೆಲೆ ವಿಮಾನ 25 ನಿಮಿಷ ತಡವಾಗಿ ವಿಮಾನ ಲ್ಯಾಂಡ್ ಆಯಿತು. 3.55ಕ್ಕೆ ಏರ್ಪೋರ್ಟ್ ಗೆ ಆಗಮಿಸಲಿರುವ ಅರುಣ್ ಸಿಂಗ್, ಕಾರ್ಯಕರ್ತರೊಂದಿಗೆ ನಡೆದರು. ಈ ವೇಳೆ ಸಾಮಾಜಿಕ ಅಂತರ ಕಾಪಾಡದ್ದಕ್ಕೆ ಕಾರ್ಯಕರ್ತರು ಹಾಗೂ ಪೋಲೀಸರ ನಡುವೆ ಮಾತಿನ ಚಕಮಕಿ ಸಹ ನಡೆಯಿತು.

TAGGED:Arun SinghbjpCM BS YediyurappaPublic TVಅರುಣ್ ಸಿಂಗ್ಪಬ್ಲಿಕ್ ಟಿವಿಬಿಜೆಪಿಸಿಎಂ ಬಿ.ಎಸ್.ಯಡಿಯೂರಪ್ಪ
Share This Article
Facebook Whatsapp Whatsapp Telegram

You Might Also Like

Narendra Modi
Latest

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ – ಕೆನಡಾ ಸೇರಿ ಮೂರು ರಾಷ್ಟ್ರಗಳಿಗೆ ಭೇಟಿ

Public TV
By Public TV
8 minutes ago
Uttarakhand Kedarnath Helicopter Crash
Crime

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ – ಪೈಲೆಟ್, ಮಗು ಸೇರಿ 6 ಮಂದಿ ಸಜೀವ ದಹನ

Public TV
By Public TV
9 minutes ago
Weather
Belgaum

ರಾಜ್ಯದಲ್ಲಿ ಇನ್ನೂ ಮೂರು ದಿನಗಳವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
27 minutes ago
Jawahar Singh Bedham
Latest

ಉರ್ದು, ಪರ್ಷಿಯನ್‌ ಬದಲಿಗೆ ಹಿಂದಿಯಲ್ಲಿ ಮಾತನಾಡಿ: ಪೊಲೀಸರಿಗೆ ರಾಜಸ್ಥಾನ ಸಚಿವ ಸೂಚನೆ

Public TV
By Public TV
1 hour ago
Devimane Ghat Land slide
Districts

ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ – ವಾಹನ ಸಂಚಾರ ಸಂಪೂರ್ಣ ಬಂದ್

Public TV
By Public TV
1 hour ago
Hoskote Accident
Bengaluru City

Bengaluru | ಆಟೋಗೆ ಕಾರು ಡಿಕ್ಕಿ – ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?