ಚಿಕ್ಕಮಗಳೂರು: ಮಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಗೆ ಸಿಎಂಗೆ ಬೆಂಗಾವಲು ವಾಹನವಾಗಿ ಹೋಗಿದ್ದ ಚಿಕ್ಕಮಗಳೂರಿನ ಡಿ.ಆರ್.ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವಂತಹ ಘಟನೆ ತಾಲೂಕಿನ ಜೇನುಗದ್ದೆ ಗ್ರಾಮದ ಬಳಿ ನಡೆದಿದೆ.
ಬಿಜೆಪಿ ಕಾರ್ಯಕಾರಣಿ ಸಭೆಗೆ ಸಿಎಂ ಕೂಡ ಆಗಮಿಸಿದ್ದ ಹಿನ್ನೆಲೆ ಸಿಎಂ ಬಂದೋಬಸ್ತ್ ಗಾಗಿ ಚಿಕ್ಕಮಗಳೂರಿನಿಂದ ಪೊಲೀಸರು ಹಾಗೂ ಡಿ.ಆರ್.ವಾಹನ ಹೋಗಿತ್ತು. ಸಿಎಂ ನಿನ್ನೆಯೇ ಬೆಂಗಳೂರಿಗೆ ಹಿಂದಿರುಗಿದ್ದರು. ಆದರೆ ಡಿ.ಆರ್.ಕಾರ್ಯಕ್ರಮ ಮುಗಿಸಿ ವಾಹನ ಇಂದು ಚಿಕ್ಕಮಗಳೂರಿಗೆ ಹಿಂದಿರುಗುವಾಗ ಈ ಅವಘಡ ಸಂಭವಿಸಿದೆ.
- Advertisement 2
- Advertisement 3
ಮಂಗಳೂರಿನಿಂದ ವಾಪಸ್ಸಾಗುವ ವೇಳೆ ಪೊಲೀಸ್ ಜೀಪ್ ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಗ್ರಾಮದ ಬಳಿ ಬರುತ್ತಿದ್ದಂತೆ ಜೀಪಿನ ಬ್ರೇಕ್ ಜಾಮ್ ಆದ ಪರಿಣಾಮ ಜೀಪ್ ಪಲ್ಟಿಯಾಗಿದೆ. ಜೀಪಿನಲ್ಲಿ ಚಾಲಕ ನನ್ನ ಹೊರತುಪಡಿಸಿ ಬೇರೆ ಯಾವುದೇ ಸಿಬ್ಬಂದಿ ಇರಲಿಲ್ಲ. ಜೀಪ್ ಪಲ್ಟಿಯಾದ ಹಿನ್ನೆಲೆ ಚಾಲಕ ಶರತ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ಚಾಲಕ ಶರತ್ ನನ್ನ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.