Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಭೇಟಿಯಾದ ಅಖಂಡ ಶ್ರೀನಿವಾಸ್- ಗಲಭೆ ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಭೇಟಿಯಾದ ಅಖಂಡ ಶ್ರೀನಿವಾಸ್- ಗಲಭೆ ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹ

Bengaluru City

ಸಿಎಂ ಭೇಟಿಯಾದ ಅಖಂಡ ಶ್ರೀನಿವಾಸ್- ಗಲಭೆ ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹ

Public TV
Last updated: August 17, 2020 6:18 pm
Public TV
Share
3 Min Read
CM AKHANDA 1
SHARE

– ಭದ್ರತೆ ಹೆಚ್ಚಳಕ್ಕೂ ಸಿಎಂ ಬಳಿ ಮನವಿ
– ಕಾಂಗ್ರೆಸ್ ಬಿಡೋ ಮಾತೇ ಇಲ್ಲ

ಬೆಂಗಳೂರು: ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಅವರನ್ನು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಭೇಟಿ ಮಾಡಿದ್ದಾರೆ.

AKHANDA 1 medium

ಘಟನೆಯ ಬಳಿಕ ಮೊದಲ ಬಾರಿಗೆ ಶಾಸಕ ಅರವಿಂದ ಲಿಂಬಾವಳಿ ಜೊತೆ ಬಂದು ಕಾವೇರಿ ನಿವಾಸದಲ್ಲಿ ಸಿಎಂ ಭೇಟಿಯಾದ ಅಖಂಡ, ಗಲಭೆ ಕುರಿತು ಬಿಎಸ್‍ವೈ ಜೊತೆ ಚರ್ಚೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಸಿಎಂ ಬಿಎಸ್‍ವೈಗೆ ಅಖಂಡ ವಿವರಣೆ ನೀಡಿದ್ದಾರೆ.

ಈ ಗಲಭೆ ಪ್ರಮುಖ ಕಾರಣ ಯಾರು, ಗಲಭೆ ನಡೆದ ದಿನದಿಂದ ಇಲ್ಲಿವರೆಗೂ ಆಗಿರುವ ಬೆಳವಣಿಗೆ, ಪ್ರಕರಣದ ಕುರಿತು ತನಿಖೆ ಬಗ್ಗೆ ಚರ್ಚೆ ಮಾಡಿದ್ದಾರೆ. ಎಸ್‍ಡಿಪಿಐ ಸಂಘಟನೆಯ ಕೈವಾಡ ಹಾಗೂ ಸ್ಥಳೀಯ ನಾಯಕರ ಆಂತರಿಕ ಭಿನ್ನಾಭಿಪ್ರಾಯ ಸೇರಿದಂತೆ ಹಲವು ವಿಷಯಗಳ ಗಳ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಮುಂದೆ ಯಾವ ರೀತಿ ತನಿಖೆ ನಡೆಸಬೇಕು ಎಂಬುದರ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ.

CM AKHANDA medium

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಖಂಡ, ಭದ್ರತೆ ಹೆಚ್ಚಳಕ್ಕೆ ಮನವಿ ಮಾಡಿದ್ದೇನೆ. ಸಿಬಿಐ ತನಿಖೆ ಮಾಡಿಸುವಂತೆ ಕೇಳಿಕೊಂಡಿದ್ದೇನೆ. ತನಿಖೆ ಬಳಿಕ ಪರಿಶೀಲಿಸಿ ನೋಡೋದಾಗಿ ಸಿಎಂ ಹೇಳಿದ್ದಾರೆ. ಯಾರೇ ಇದ್ರೂ ತಪ್ಪಿತಸ್ಥರನ್ನು ಬಂಧಿಸಲು ಮನವಿ ಮಾಡಿದ್ದೇನೆ ಎಂದರು.

ನನಗೆ ಸರ್ಕಾರ ಇನ್ನೂ ಪೊಲೀಸ್ ಭದ್ರತೆ ಕೊಟ್ಟಿಲ್ಲ. ನನ್ನ ಮನೆಗೆ ಭದ್ರತೆ ಕೊಟ್ಟಿದ್ದಾರೆ. ಭದ್ರತೆ ವಿಚಾರದಲ್ಲಿ ಸರ್ಕಾರ ಸ್ಪಂದಿಸಿಲ್ಲ ಎಂದು ಇದೇ ವೇಳೆ ಅಖಂಡ ಆರೋಪ ಮಾಡಿದರು. ಮೊನ್ನೆ ಸಿಎಂ ಜೊತೆ ಫೋನಲ್ಲಿ ಮಾತಾಡಿದ್ದೆ. ನಮ್ಮನೆ ಅಕ್ಕ-ಪಕ್ಕ ಮನೆ, ವಾಹನಗಳನ್ನು ಸುಟ್ಟಿದ್ದಾರೆ. ಇವರಿಗೆಲ್ಲ ಪರಿಹಾರ ಕೊಡಲು ಸಿಎಂಗೆ ಮನವಿ ಮಾಡಿಕೊಂಡಿದ್ದೇನೆ. ಅಪರಾಧಿಗಳು ಯಾರೇ ಇರಲಿ, ಎಷ್ಟೇ ಪ್ರಭಾವಿಗಳಿದ್ರೂ ಶಿಕ್ಷೆ ಆಗಲೇಬೇಕು ಎಂದು ಕಟುವಾಗಿ ಹೇಳಿದರು.

CM AKHANDA 2 medium

ಇದೇ ವೇಳೆ ಮಾಜಿ ಶಾಸಕ ಪ್ರಸನ್ನಕುಮಾರ್ ಮತ್ತೆ ಕಾಂಗ್ರೆಸ್ ಸೇರೋ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅಖಂಡ,ಪ್ರಸನ್ನಕುಮಾರ್ ಕಾಂಗ್ರೆಸ್ ಸೇರೋ ವಿಷಯ ನನಗೆ ಗೊತ್ತೇ ಇಲ್ಲ. ನನ್ನ ಗಮನಕ್ಕೂ ಬಂದಿಲ್ಲ. ಪ್ರಸನ್ನಕುಮಾರ್ ಸೇರ್ಪಡೆಯಿಂದ ನನಗೆ ತೊಂದರೆ ಇಲ್ಲ. ಕಾಂಗ್ರೆಸ್ಸಿಗೆ ಯಾರು ಬೇಕಾದರೂ ಬರಬಹುದು. ಪ್ರಸನ್ನಕುಮಾರ್ ಕಾಂಗ್ರೆಸ್ ಸೇರೋ ವಿಷಯ ಅಧ್ಯಕ್ಷರಿಗೆ ಬಿಟ್ಟಿದು ಎಂದು ತಿಳಿಸಿದರು.

ಆದರೆ ಪ್ರಸನ್ನಕುಮಾರ್ ಅವರು ಕಾಂಗ್ರೆಸ್ ಸೇರಲು ಬಯಸಿರುವ ವಿಷಯ ಅಖಂಡ ಶ್ರೀನಿವಾಸ್ ಗಮನಕ್ಕೆ ತಂದಿರೋದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಈ ಹಿಂದೆ ತಿಳಿಸಿದ್ದರು. ಪ್ರಸನ್ನಕುಮಾರ್ ಸೇರ್ಪಡೆಗೆ ಅಖಂಡ ವಿರೋಧ ಇಲ್ಲ ಅಂದಿದ್ದರು. ಆದರೆ ಈಗ ಪ್ರಸನ್ನಕುಮಾರ್ ಮತ್ತೆ ಬರೋ ವಿಷಯ ನನಗೆ ಗೊತ್ತಿಲ್ಲ ಎಂದು ಅಖಂಡ ಹೇಳುತ್ತಿದ್ದಾರೆ. ಇದನ್ನು ಗಮನಿಸಿದರೆ ಡಿಕೆಶಿ ಸುಳ್ಳು ಹೇಳಿದ್ರಾ?, ಸುಳ್ಳೇ ಹೇಳಿದ್ರೂ ಯಾಕೆ ಹೇಳಿದ್ರು ಎಂಬ ಪ್ರಶ್ನೆ ಮೂಡಿದೆ.

AKHANDA 1 1 medium

ನಾನು ಕಾಂಗ್ರೆಸ್ ಬಿಡಲ್ಲ. ನಮ್ಮ ತಂದೆಯೂ ಕಾಂಗ್ರೆಸ್ಸಿನಲ್ಲೇ ಇದ್ದಿದ್ದು. ಹೀಗಾಗಿ ನಾನು ಕಾಂಗ್ರೆಸ್ ಪಕ್ಷ ಬಿಡೋ ಮಾತೇ ಇಲ್ಲ. ನನ್ನ ರಕ್ತದಲ್ಲಿ ಇರೋದು ಕಾಂಗ್ರೆಸ್. ನನ್ನ ರಕ್ಷಣೆಗೆ ಸರ್ಕಾರ ಸೇರಿದಂತೆ ನಮ್ಮ ಪಕ್ಷದ ನಾಯಕರು ಬರಬೇಕು. ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಸೇರಿದಂತೆ ಡಿಕೆ ಶಿವಕುಮಾರ್ ನನ್ನ ರಕ್ಷಣೆಗೆ ಬರಬೇಕು. ನನ್ನ ಮೇಲೆ ಯಾರಿಂದಲೂ ಒತ್ತಡ ಇಲ್ಲ, ಯಾವ ಒತ್ತಡವೂ ಇಲ್ಲ ಎಂದರು.

ಬಿಜೆಪಿ ಶಾಸಕರ ಜೊತೆ ಸಿಎಂ ಭೇಟಿಗೆ ಬಂದ ವಿಚಾರದ ಕುರಿತು ಸ್ಪಷ್ಟನೆ ನೀಡಿದ ಅವರು, ನಮ್ಮ ಭೋವಿ ಸಮಾಜದ ಮುಖಂಡರ ಜೊತೆ ನಾನು ಸಿಎಂ ಭೇಟಿಗೆ ಆಗಮಿಸಿದೆ. ನಮ್ಮ ಸಮಾಜದ ಮುಖಂಡರು ಇದ್ದರು. ಅರವಿಂದ ಲಿಂಬಾವಳಿ ಭೋವಿ ಜನಾಂಗದ ಶಾಸಕರು. ನಮ್ಮ ಜನಾಂಗದ ಶಾಸಕರ ಜೊತೆ ನಾನು ಬಂದಿದ್ದೇನೆ. ಭೋವಿ ಜನಾಂಗದ ಅಧ್ಯಕ್ಷ ಮಾಕಳಿ ರವಿಯವರು ಬಂದಿದ್ದಾರೆ. ಅವರ ಜೊತೆಯಲ್ಲಿ ನಾನು ಬಂದು ಸಿಎಂ ಭೇಟಿ ಮಾಡಿದ್ದೇನೆ ಅಷ್ಟೇ ಎಂದರು.

TAGGED:Akhanda Srinivasa MurthybengaluruBengaluru Riotsbs yeddyurappacongressMLAಅಖಂಡ ಶ್ರೀನಿವಾಸ ಮೂರ್ತಿಕಾಂಗ್ರೆಸ್ಬಿಎಸ್ ಯಡಿಯೂರಪ್ಪಬೆಂಗಳೂರುಬೆಂಗಳೂರು ಗಲಭೆಶಾಸಕ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

belagavi money robbery
Belgaum

400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ

Public TV
By Public TV
6 minutes ago
AI Impact Summit 2
Latest

ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ – ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ

Public TV
By Public TV
34 minutes ago
Vijayapura House Theft
Crime

ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ – 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ

Public TV
By Public TV
2 hours ago
yadgir
Districts

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ – ಸ್ವಕುಳ ಸಾಳಿ ಸಮಾಜದ 15 ಕುಟುಂಬಕ್ಕೆ ಬಹಿಷ್ಕಾರ ಶಿಕ್ಷೆ

Public TV
By Public TV
2 hours ago
Bengaluru GBA Skywalk
Bengaluru City

18 ಟ್ರಾಫಿಕ್ ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಜಿಬಿಎ ಪ್ಲ್ಯಾನ್

Public TV
By Public TV
2 hours ago
siddaramaiah dk shivakumar
Bengaluru City

ʻಪವರ್‌ ಫೈಟ್‌ʼ ನಡುವೆ ನಾಳೆಯಿಂದ 27 ಶಾಸಕರ ಫಾರಿನ್ ಟ್ರಿಪ್‌ ಫಿಕ್ಸ್?‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?