ಮುಂಬೈ: ಉತ್ತರ ಪ್ರದೇಶದ ಮುಖ್ಯಮಂತ್ರಿ ಸಿಎಂ ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆ ಹಾಕಿದ್ದ ಯುವಕನನ್ನು ಮಹಾರಾಷ್ಟ್ರದ ಭಯೋತ್ಪಾದನ ನಿಗ್ರಹ ದಳ ಬಂಧಿಸಿದೆ. ಯುವಕ ಬಾಂಬ್ ಬ್ಲಾಸ್ಟ್ ನಲ್ಲಿ ಮುಖ್ಯಮಂತ್ರಿಗಳನ್ನ ಕೊಲ್ಲುವದಾಗಿ ಬೆದರಿಕೆ ಹಾಕಿದದ್ದನು.
ಕಮ್ರಾನ್ ಅಮಿನ್ ಖಾನ್ ಬಂಧಿತ ಯುವಕ. ಮುಂಬೈನ ಚುನಬತ್ತಿ ಏರಿಯಾದಲ್ಲಿ ಕಮ್ರಾನ್ ವಾಸವಾಗಿದ್ದನು. ಸೋಶಿಯಲ್ ಮೀಡಿಯಾ ಮೂಲಕ ಲಕ್ನೋ ಹೆಲ್ಪ್ ಡೆಸ್ಕ್ಗೆ ಬೆದರಿಕೆ ಸಂದೇಶವನ್ನು ರವಾನಿಸಿದ್ದನು. ಪ್ರಕರಣ ದಾಖಲಿಸಿಕೊಂಡಿದ್ದ ಉತ್ತರ ಪ್ರದೇಶದ ಪೊಲೀಸರು ಸಂದೇಶದ ಮೂಲ ಪತ್ತೆ ಆರಂಭಿಸಿದ್ದರು.
ಮಹಾರಾಷ್ಟ್ರದ ಭಯೋತ್ಪಾದನ ನಿಗ್ರಹದಳ ಸಹಾಯದೊಂದಿಗೆ ಯುವಕನ್ನು ಬಂಧಿಸಿದ್ದಾರೆ. ಬಂಧಿತ ಯುವಕನನ್ನು ಯುಪಿ ಎಸ್ಟಿಎಫ್ ತಂಡದ ವಶಕ್ಕೆ ನೀಡಲಾಗಿದೆ.