ಅಬುಧಾಬಿ: ಐಪಿಎಲ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಅಘಾತವೊಂದು ಎದುರಾಗಿದೆ. ತಂಡದ ಅನುಭವಿ ಮತ್ತು ಸ್ಟಾರ್ ಆಟಗಾರ ಸುರೇಶ್ ರೈನಾ ಐಪಿಎಲ್ ಟೂರ್ನಿಯಿಂದ ಹೊರಬಂದಿದ್ದಾರೆ.
ಈಗಾಗಲೇ ಯುಎಇಯಲ್ಲಿರುವ ಚೆನ್ನೈ ತಂಡದ ವೇಗಿ ದೀಪಕ್ ಚಹರ್ ಮತ್ತು ತಂಡದ ಕೆಲ ಸಹಾಯ ಸಿಬ್ಬಂದಿಗೆ ಕೊರೊನಾ ಬಂದು ಸುದ್ದಿಯಾಗಿತ್ತು. ಈಗ ಸುರೇಶ್ ರೈನಾ ಅವರು ತಮ್ಮ ವೈಯಕ್ತಿಕ ಕಾರಣದಿಂದ ಭಾರತಕ್ಕೆ ವಾಪಸ್ ಬರುತ್ತಿದ್ದಾರೆ ಮತ್ತು ಐಪಿಎಲ್ನಲ್ಲಿ ಅಲಭ್ಯರಾಗಲಿದ್ದಾರೆ ಎಂದು ಸ್ವತಃ ಚೆನ್ನೈ ತಂಡವೇ ಹೇಳಿಕೊಂಡಿದೆ.
Suresh Raina has returned to India for personal reasons and will be unavailable for the remainder of the IPL season. Chennai Super Kings offers complete support to Suresh and his family during this time.
KS Viswanathan
CEO
— Chennai Super Kings (@ChennaiIPL) August 29, 2020
ಈ ವಿಚಾರವಾಗಿ ಟ್ವೀಟ್ ಮಾಡಿರುವ ಚೆನ್ನೈ ತಂಡದ ಸಿಇಓ ವಿಶ್ವನಾಥನ್, ಸುರೇಶ್ ರೈನಾ ಅವರು ವೈಯಕ್ತಿಕ ಕಾರಣಗಳಿಗಾಗಿ ಭಾರತಕ್ಕೆ ವಾಪಸ್ ಹೋಗುತ್ತಿದ್ದಾರೆ ಮತ್ತು ಮುಂದೆ ಆರಂಭವಾಗುವ ಐಪಿಎಲ್ ಟೂರ್ನಿಯಲ್ಲಿ ಅವರು ಲಭ್ಯವಿರುವುದಿಲ್ಲ. ಈ ಸಮಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸುರೇಶ್ ರೈನಾ ಮತ್ತು ಅವರ ಕುಟುಂಬಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಶುಕ್ರವಾರಷ್ಟೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ವೇಗಿ ದೀಪಕ್ ಚಹರ್ ಅವರು ಸೇರಿದಂತೆ ಕೆಲ ಸಹಾಯ ಸಿಬ್ಬಂದಿಗೆ ಕೊರೊನಾ ಪಾಸಿಟವ್ ಬಂದಿತ್ತು. ಇದರಿಂದ ಶುಕ್ರವಾರದಿಂದ ಅಭ್ಯಾಸವನ್ನು ಆರಂಭ ಮಾಡಬೇಕಿದ್ದ ಚೆನ್ನೈ ತಂಡ ಸೆಪ್ಟೆಂಬರ್ 1ರವರೆಗೆ ಕ್ವಾರಂಟೈನ್ನಲ್ಲಿ ಇರಲು ತೀರ್ಮಾನ ಮಾಡಿತ್ತು. ಇದರ ನಡುವೆ ವೈಯಕ್ತಿಕ ಕಾರಣದಿಂದ ರೈನಾ ಕೂಡ ಹೊರಗೆ ಬಂದಿರುವುದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗಸ್ಟ್ 21ರಂದೇ ಯುಎಇಗೆ ತೆರಳಿತ್ತು. ಎಂದಿನಂತೆ ಎಲ್ಲ ಆಟಗಾರರಿಗೆ ಭಾರತದಲ್ಲೂ ಕೂಡ ಒಂದು ಬಾರಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅಂತೆಯೇ ಯುಎಇಗೆ ತೆರಳಿದ ತಂಡ ಅಲ್ಲಿ ಆರು ದಿನಗಳ ಕಾಲ ಕ್ವಾರಂಟೈನ್ಗೆ ಒಳಗಾಗಿತ್ತು. ಶುಕ್ರವಾರಕ್ಕೆ ಆ ಅವಧಿ ಮುಗಿಯಲಿದ್ದು, ಚೆನ್ನೈ ತಂಡ ಅಭ್ಯಾಸ ನಡೆಸಬೇಕಿತ್ತು. ಆದರೆ ಕೊರೊನಾ ಟೆಸ್ಟ್ ನಲ್ಲಿ ತಂಡದ ಸದಸ್ಯರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಹೀಗಾಗಿ ತಂಡ ಸೆಪ್ಟೆಂಬರ್ 1ರಿಂದ ಅಭ್ಯಾಸ ಆರಂಭಿಸಲಿದೆ.