Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಡಿದೆದ್ದ ರೈತರಿಂದ ನಾಳೆ ರಾಜ್ಯದಲ್ಲಿ ಹೆದ್ದಾರಿ ಬಂದ್ – ಬೆಂಗಳೂರಲ್ಲಿ ಅಘೋಷಿತ ಬಂದ್ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಡಿದೆದ್ದ ರೈತರಿಂದ ನಾಳೆ ರಾಜ್ಯದಲ್ಲಿ ಹೆದ್ದಾರಿ ಬಂದ್ – ಬೆಂಗಳೂರಲ್ಲಿ ಅಘೋಷಿತ ಬಂದ್ ಸಾಧ್ಯತೆ

Bengaluru City

ಸಿಡಿದೆದ್ದ ರೈತರಿಂದ ನಾಳೆ ರಾಜ್ಯದಲ್ಲಿ ಹೆದ್ದಾರಿ ಬಂದ್ – ಬೆಂಗಳೂರಲ್ಲಿ ಅಘೋಷಿತ ಬಂದ್ ಸಾಧ್ಯತೆ

Public TV
Last updated: September 24, 2020 9:28 pm
Public TV
Share
3 Min Read
Bandh 1
SHARE

– ಜನರೇ ನೀವು ಹೊರಗೆ ಹೋಗುವ ಮುನ್ನ ಎಚ್ಚರ
– ಬೆಂಗಳೂರಿನ ಯಾವ ರಸ್ತೆ ಲಾಕ್ ಆಗುತ್ತೆ?

ಬೆಂಗಳೂರು: ಕೊರೊನಾ ಲಾಕ್‍ಡೌನ್ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಶುಕ್ರವಾರ ಲಾಕ್ ಆಗುತ್ತಿದೆ. ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ನಾಳೆ ಬೀದಿಗೆ ಇಳಿಯಲಿದ್ದು, ಬೆಂಗಳೂರು ಸೇರಿ ಇಡೀ ರಾಜ್ಯಾದ್ಯಂತ ಹೆದ್ದಾರಿಗಳನ್ನು ಬಂದ್ ಮಾಡಲಿದ್ದಾರೆ. ಇದರಿಂದ ರಾಜ್ಯದಲ್ಲಿ ಜನಜೀವನ ಸ್ತಬ್ಧವಾಗುವ ಎಲ್ಲಾ ಸಾಧ್ಯತೆಗಳು ಇವೆ.

Bandh 2

ಬೆಂಗಳೂರಿನ ದಶ ದಿಕ್ಕುಗಳಲ್ಲೂ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಲಿದ್ದು, ಪ್ರಮುಖ ಜಂಕ್ಷನ್‍ಗಳು ಲಾಕ್ ಆಗಲಿವೆ. ವ್ಯಾಪಾರ ವಹಿವಾಟಿನ ಮೇಲೆಯೂ ಪರಿಣಾಮ ಬೀರಲಿದೆ. ಹೆದ್ದಾರಿ ತಡೆ ಕಾರಣ ನಾಳೆ ಬೆಂಗಳೂರಿಗೆ ಎಂಟ್ರಿ ಮತ್ತು ಎಕ್ಸಿಟ್ ಎರಡೂ ಇರಲ್ಲ. ಜೊತೆಗೆ ನಾಳೆಯಿಂದ ನಾಲ್ಕು ದಿನ ಸಾಲು ಸಾಲು ರಜೆಗಳು ಇವೆ. ನಾಳೆ ಅಧಿಕೃತವಾಗಿ ರಜೆ ಘೋಷಣೆ ಮಾಡಿಲ್ಲ. ಆದ್ರೆ ‘ಅಘೋಷಿತ’ ಬಂದ್ ಇರಲಿದೆ. ನಾಡಿದ್ದು 4ನೇ ಶನಿವಾರದ ರಜೆ ಇದೆ. ಭಾನುವಾರ ಮಾಮೂಲಿ ರಜೆ ಇರಲಿದೆ. ಸೋಮವಾರ ಕರ್ನಾಟಕ ಬಂದ್ ಇದೆ.

Farmer Protest

ಸಾಲು ಸಾಲು ರಜೆ ಇದೆ ಎಂದು ಪ್ರವಾಸ ಹೊರಟಿದ್ರೆ, ನಿಮ್ಮ ಪ್ರಯಾಣ ರದ್ದು ಮಾಡುವುದೋ ಅಥ್ವಾ ಮುಂದಕ್ಕೆ ಹಾಕುವುದು ಒಳ್ಳೆಯದು. ಇಲ್ಲವಾದ್ರೆ ಮಾರ್ಗ ಮಧ್ಯೆ ಸಿಲುಕಿ ಪರದಾಡುವ ಸ್ಥಿತಿ ನಿರ್ಮಾಣವಾಗಬಹುದು.

ಬೆಂಗಳೂರಿನ ಯಾವ ರಸ್ತೆಗಳು ಲಾಕ್: ಮೈಸೂರು ಬ್ಯಾಂಕ್ ಸರ್ಕಲ್, ಏರ್‍ಪೋರ್ಟ್ ರಸ್ತೆ, ಗೊರಗುಂಟೆ ಪಾಳ್ಯ, ನೆಲಮಂಗಲ ಟೋಲ್, ಅತ್ತಿಬೆಲೆ ಟೋಲ್, ದೇವನಹಳ್ಳಿ ರಸ್ತೆ, ಮಲ್ಲೇಶ್ವರಂ- ಯಶವಂತಪುರ ರಸ್ತೆ, ಮಾರತ್‍ಹಳ್ಳಿ-ಎಂಜಿ ರಸ್ತೆ, ಎಲೆಕ್ಟ್ರಾನಿಕ್ ಸಿಟಿ ಟೋಲ್, ವಿಧಾನಸೌಧ ಅಸುಪಾಸು, ಚಿಕ್ಕಪೇಟೆ-ಕೆ.ಆರ್.ಮಾರ್ಕೆಟ್

Farmer Protest

ಹೆದ್ದಾರಿ ಲಾಕ್: ಬೆಂಗಳೂರು- ಮೈಸೂರು ಹೆದ್ದಾರಿ, ಬೆಂಗಳೂರು- ತುಮಕೂರು ಹೆದ್ದಾರಿ, ಬೆಂಗಳೂರು- ಹೊಸೂರು ಹೆದ್ದಾರಿ, ಬೆಂಗಳೂರು- ಹಾಸನ ಹೆದ್ದಾರಿ, ಓಲ್ಡ್ ಮದ್ರಾಸ್ ರೋಡ್, ಬೆಂಗಳೂರು-ಹೊಸಕೋಟೆ, ಬೆಂಗಳೂರು-ದೇವನಹಳ್ಳಿ ರೋಡ್, ಬೆಂಗಳೂರು- ಹೊಸೂರು ಹೈವೇ

Farmer Protest 2

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿ ತರಲು ಉದ್ದೇಶಿಸಿರುವ ಕೃಷಿ ಮಸೂದೆ ವಿರೋಧಿಸಿ 2000ಕ್ಕೂ ಹೆಚ್ಚು ರೈತ ಸಂಘಟನೆಗಳು ದೇಶದ್ಯಾಂತ ನಾಳೆ ಹಾಗೂ ಸೆಪ್ಟೆಂಬರ್ 28ರಂದು ಪ್ರತಿರೋಧ್ ದಿವಸ್ ಹಮ್ಮಿಕೊಂಡಿದ್ದು, ರಾಜ್ಯದಲ್ಲಿಯೂ ಇದರ ಪರಿಣಾಮ ಇರಲಿದೆ. ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ರೈತ ಮುಖಂಡರು ನಾಳೆ ರಸ್ತೆ ರೋಕೋ ಮತ್ತು ಸೋಮವಾರ ಕರ್ನಾಟಕ ಬಂದ್ ನಡೆಸೋದಾಗಿ ಮತ್ತೊಮ್ಮೆ ಸ್ಪಷ್ಟಪಡಿಸಿದರು. ಜೊತೆಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಾಪುರ ನಾಗೇಂದ್ರ ಮಾತನಾಡಿ, ದುಡಿಯುವ ವರ್ಗವನ್ನ ತುಳಿದು ಬದುಕುವ ಕೆಲಸ ನಡೆದಿದೆ ಎಂದು ಆಕ್ರೋಶ ಹೊರಹಾಕಿದರು. ಕೋಡಿಹಳ್ಳಿ ಚಂದ್ರಶೇಖರ್, ರೈತರ ಹೋರಾಟ ಪ್ರಶ್ನಿಸುತ್ತಿರುವ ಸಚಿವ ಬಿಸಿ ಪಾಟೀಲ್, ಸಿಟಿ ರವಿ ಹಾಗೂ ಸೋಮಶೇಖರ್ ಮೇಲೆ ಫುಲ್ ಗರಂ ಆದ್ರು. ನಿಮ್ಮ ಪ್ರಧಾನಿ ಹೇಳಿದ್ದನ್ನು ಸಮರ್ಥಿಸಿಕೊಳ್ಳಿ. ಆದರೆ ರೈತರಿಗೆ ಅನುಕೂಲ ಅಂತ ಹೇಳಬೇಡಿ. ಸಿಟಿ ರವಿ ಅವ್ರೇ ಪ್ರೊಫೆಸರ್ ನಂಜುಂಡ ಸ್ವಾಮಿ ಹೇಳಿದ್ದೇನು ಎಂಬುದೇ ನಿಮಗೆ ಅರ್ಥ ಆಗಿಲ್ಲ. ಎಲ್ಲರೂ ಸೇರಿಕೊಂಡು ರೈತರ ಕಥೆ ಮುಗಿಸಲು ಹೊರಟಿದ್ದೀರಿ ಎಂದು ಕಿಡಿಕಾರಿದ್ರು. ಆದರೆ ರಸ್ತೆ ತಡೆ ನಡೆಸೋದಕ್ಕೆ ತಮ್ಮ ಬೆಂಬಲ ಇಲ್ಲ. ಸೋಮವಾರ ಬಂದ್‍ಗೆ ನಮ್ಮ ಬೆಂಬಲ ಅಂತಾ ಹೇಳಿದರು.

ಈ ಮಧ್ಯೆ ಬಿಜೆಪಿಯವರು ರೈತರನ್ನ ಮಾರಾಟ ಮಾಡ್ತಿದ್ದಾರೆ. ಅಂತಾರಾಷ್ಟ್ರೀಯ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ಹೀಗೆ ಮಾಡಲಾಗ್ತಿದೆ ಅಂತಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದರು. ಕೃಷಿ ಸಚಿವ ಬಿಸಿ ಪಾಟೀಲ್ ಮಾತನಾಡಿ, ಎಪಿಎಂಸಿ ಕಾಯಿದೆಯಿಂದ ಯಾವ ರೈತರಿಗೂ ನಷ್ಟ ಇಲ್ಲ ಅಂತಾ ಪುನರುಚ್ಛಿರಿಸಿದ್ರು. ರೈತರಿಗೆ ಅನ್ಯಾಯ ಆಗ್ತಿದೆ ಅಂದ್ರೆ ಅದು ಯಾವ ರೀತಿ ಅಂತಾ ಕಾಂಗ್ರೆಸ್‍ನವರು ಹೇಳಲಿ. ಕಾಂಗ್ರೆಸ್‍ಗೆ ಹೆದರಿಕೊಂಡು ಕೂರೋಕೆ ಆಗುತ್ತಾ? ಅವ್ರು ಹೇಳಿದಂತೆ ಕೇಳಿಕೊಂಡು ಸರ್ಕಾರ ನಡೆಸೋಕೆ ಆಗಲ್ಲ ಅಂತಾ ಗರಂ ಆದರು.

TAGGED:bengaluruFarmers protesthighway bandhPublic TVಪಬ್ಲಿಕ್ ಟಿವಿಬೆಂಗಳೂರುರೈತರುಲಾಕ್ಹೆದ್ದಾರಿ ಬಂದ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

AIR INDIA
Latest

ಏರ್‌ ಇಂಡಿಯಾ ಪೈಲಟ್ ‌ಹೃದಯಾಘಾತದಿಂದ ನಿಧನ

Public TV
By Public TV
3 minutes ago
Bengaluru Rains
Bengaluru City

Bengaluru Rain | ಬೆಂಗಳೂರಲ್ಲಿ ಆಲಿಕಲ್ಲು ಮಳೆ, ಗಾಳಿ ಅಬ್ಬರ – ವಿಧಾನಸೌಧಕ್ಕೂ ನುಗ್ಗಿದ ನೀರು

Public TV
By Public TV
6 minutes ago
Polling Stopped At Few Bengal Booths After BJP Claims EVM Tampering
Latest

West Bengal Election | ಕಮಲದ ಬಟನ್‌ ಮೇಲೆ ಟೇಪ್‌ – ಫಾಲ್ಟಾದಲ್ಲಿ ಮತದಾನ ಸ್ಥಗಿತ

Public TV
By Public TV
46 minutes ago
Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
60 minutes ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
1 hour ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?