ಚಿಕ್ಕಬಳ್ಳಾಪುರ: ಸಿಡಿಲು ಬಡಿದ ಪರಿಣಾಮ ಚಪ್ಪಡಿಕಲ್ಲಿನ ಮನೆಯೊಂದು ಕುಸಿದು ಬಿದ್ದಿದ್ದು, ಮನೆಯಲ್ಲಿದ್ದ 4 ಜನ ಮಕ್ಕಳು ಸೇರಿ 7 ಜನ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದಲ್ಲಿ ನಡೆದಿದೆ.
- Advertisement 2
ಸಾಯಂಕಾಲ ಇದ್ದಕ್ಕಿದ್ದಂತೆ ತುಂತುರು ಶುರುವಾಗಿದ್ದು, ಮಳೆಯ ನಡುವೆ ಸಿಡಿಲು ಬಡಿದು ನೋಡು ನೋಡುತ್ತಿದ್ದಂತೆ ಗ್ರಾಮದ ಅಂಬರೀಶ್ ಹಾಗೂ ಗಾಯತ್ರಿ ದಂಪತಿ ಅವರ ಮನೆಗೆ ಸಿಡಿಲು ಹೊಡೆದು ಮನೆಯಲ್ಲಿದ್ದ ವೃದ್ಧ ಜಗನ್ನ 60, ಅಂಬರೀಶ್ 32, ಗಾಯತ್ರಿ 28, ಗೌತಮ್ 3, ವಾಣಿಶ್ರೀ 6, ದರ್ಶನ್ 1 ಹಾಗೂ 4 ವರ್ಷದ ಲಾವಣ್ಯಗೆ ತೀವ್ರ ರೀತಿಯ ಗಾಯಗಳಾಗಿವೆ.
- Advertisement 3
- Advertisement 4
ಗಾಯಾಳುಗಳನ್ನು ತಕ್ಷಣವೇ ಚಿಂತಾಮಣಿಯ ತಾಲೂಕು ಆಸ್ಪತ್ರೆಗೆ ರವಾನಿಸಿದ್ದು, ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಹಾಗೂ ತಹಶೀಲ್ದಾರ್ ಹನುಮಂತರಾಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.