ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ನಿನ್ನೆ ರಮೇಶ್ ಜಾರಕಿಹೊಳಿಗೆ ಅಧಿಕಾರಿಗಳು ಸುಮಾರು 4 ಗಂಟೆಗಳ ಕಾಲ ವಿಚಾರಣೆ ನಡೆಸಿದರು ಎಂಬ ಮಾಹಿತಿ ಲಭ್ಯವಾಗಿದೆ.
ಎಸ್ಐಟಿ ಪ್ರಶ್ನೆಗೆ ರಮೇಶ್ ಜಾರಕಿಹೊಳಿ ಹೇಳಿದ್ದೇನು..?
ಎಸ್ಐಟಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಜಾರಕಿಹೊಳಿ ಹಾರಿಕೆಯ ಉತ್ತರ ನೀಡಿದ್ದಾರೆ. ಆಡಿಯೋ, ವೀಡಿಯೋ ಇಟ್ಟುಕೊಂಡು ಅಧಿಕಾರಿಗಳು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.
- Advertisement 2
- Advertisement 3
ಜಾರಕಿಹೊಳಿಗೆ 15 ಆಡಿಯೋ ತುಣುಕುಗಳ ಬಗ್ಗೆ ಎಸ್ಐಟಿ ಅಧಿಕಾರಿಗಳು ಕೇಳಿದ್ದಾರೆ. ಸಿಸಿಟಿವಿ ನರೇಶ್, ಶ್ರವಣ್, ಆಕಾಶ್ ತಲವಾಡೆ, ಅಭಿಷೇಕ್ ಹಾಗೂ ಉದ್ಯಮಿಗಳಿಬ್ಬರ ಫೋಟೋ, ವೀಡಿಯೋ ತೋರಿಸಿ ವಿಚಾರಣೆ ನಡೆಸಿದ್ದಾರೆ. ಈ ಪ್ರಶ್ನೆಗಳಿಗೆ ಜಾರಕಿಹೊಳಿ ಅವರು, ಇವರ್ಯಾರು ನನಗೆ ಗೊತ್ತೇ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.
- Advertisement 4
ಸದಾಶಿವನಗರದಲ್ಲೇ ಹುನ್ನಾರ ನಡೆದಿದೆ ಅನ್ನೋ ಆರೋಪದ ಬಗ್ಗೆ ಹಾಗೂ ಸಿಡಿಕೋರರಿಗೆ ಹಣ ಕೊಟ್ಟಿದ್ದಾರೆ ಅನ್ನೋ ಆರೋಪಗಳ ಮೇಲೂ ಪ್ರಶ್ನೆಗಳನ್ನು ಕೇಳಲಾಗಿದೆ. ಆದರೆ ಎಸ್ಐಟಿ ಅಧಿಕಾರಿಗಳ ಪ್ರಶ್ನೆಗೆ ಜಾರಕಿಹೊಳಿ ಸ್ಪಷ್ಟ ಉತ್ತರ ನೀಡಿಲ್ಲ ಎಂಬುದಾಗಿ ತಿಳಿದುಬಂದಿದೆ.