ಸಿಡಿ ಗ್ಯಾಂಗ್‌ಗೆ ಲಕ್ಷ ಲಕ್ಷ ಹಣ – ಶಿವಕುಮಾರ್ ಬೆನ್ನು ಬಿದ್ದ ಎಸ್‍ಐಟಿ

Public TV
1 Min Read
CD 4

ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ(ಎಸ್‍ಐಟಿ) ಈಗ ಶಿವಕುಮಾರ್ ಬೆನ್ನು ಬಿದ್ದಿದೆ.

ಅಸಲಿಗೆ ಈ ಪ್ರಕರಣದಲ್ಲಿರುವ ಶಿವಕುಮಾರ್ ಕನಕಪುರ ಮೂಲದ ವ್ಯಕ್ತಿಯಾಗಿದ್ದು, ಗ್ರಾನೈಟ್ ಉದ್ಯಮ ನಡೆಸುತ್ತಿದ್ದಾನೆ. ಈತನಿಗೆ ಸಿಡಿ ಸೂತ್ರದಾರರ ಜೊತೆ ನಂಟು ಇರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

naresh gowda cd case

ಸಿಡಿ ಹುಡುಗರಿಗೆ 10 ಲಕ್ಷ ಹಣ ಸಂದಾಯ ಮಾಡಿದ್ದ ಶಿವಕುಮಾರ್ ಸಿಡಿ ರಿಲೀಸ್ ಬಳಿಕ ಯುವತಿಯ ಗೆಳೆಯನಿಗೆ 50 ಸಾವಿರ ಕೊಟ್ಟಿದ್ದಾನೆ. ಯುವತಿಯನ್ನು ಗೋವಾಗೆ ಕರೆದೊಯ್ಯಲು 50 ಸಾವಿರ ರೂ. ಕೊಟ್ಟಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸದ್ಯ ಕೊಚ್ಚಿಯಲ್ಲಿ ಶಿವಕುಮಾರ್ ತಲೆ ಮರೆಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಆತನ ಪತ್ತೆಗೆ ಈಗ ಬಲೆ ಬೀಸಲಾಗಿದೆ. ಕಾಲ್‌ ಡಿಟೈಲ್ಸ್‌ನಲ್ಲಿ ಈತ ಸಿಡಿ ಗ್ಯಾಂಗ್‌ ಸದಸ್ಯರ ಜೊತೆ ನಿಖಟ ಸಂಪರ್ಕ ಹೊಂದಿದ್ದ ಮಾಹಿತಿಯೂ ಸಿಕ್ಕಿದೆ.

shravan cd case

ಎಸ್‍ಐಟಿ ಪೊಲೀಸರು ಈಗ ವಿಚಾರಣೆಗೆ ಒಳಪಟ್ಟವರ ಬ್ಯಾಂಕ್ ಖಾತೆಯನ್ನು ಪರಿಶೀಲನೆ ಮಾಡುತ್ತಿದ್ದಾರೆ. ಎರಡು ದಿನ ಬ್ಯಾಂಕ್ ಮುಷ್ಕರ ಇದ್ದ ಹಿನ್ನೆಲೆಯಲ್ಲಿ ಮಾಹಿತಿ ಸಿಕ್ಕಿರಲಿಲ್ಲ. ಬುಧವಾರ ವಿಚಾರಣೆಗೆ ಒಳಪಟ್ಟವರ ಬ್ಯಾಂಕ್ ಮಾಹಿತಿ ಲಭ್ಯವಾಗಿದ್ದು, ಈ ವೇಳೆ ಗ್ಯಾಂಗ್ ಸದಸ್ಯರ ಖಾತೆಗೆ ಈತ ಹಣ ಹಾಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *