ಯಾದಗಿರಿ: ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ಮಗ ಯತೀಂದ್ರ ಸೂಪರ್ ಸಿಎಂ ಆಗಿದ್ದರು. ಆ ಲೆಕ್ಕದಲ್ಲಿ ಸಿದ್ದರಾಮಯ್ಯ ಈಗ ರಾಜ್ಯದಲ್ಲಿ ಇಬ್ಬರು ಸಿಎಂ ಇಬ್ಬರು ಇದ್ದಾರೆ ಎಂದಿದ್ದಾರೆ. ಸಿದ್ದರಾಮಯ್ಯ ಯತೀಂದ್ರ ಎಂದು ಹೇಳುವ ಬದಲು ವಿಜಯೇಂದ್ರ ಎಂದಿದ್ದಾರೆ ಎಂದು ಸಚಿವ ಈಶ್ವರಪ್ಪ ರಾಜ್ಯದಲ್ಲಿ ಇಬ್ಬರು ಸಿಎಂ ಇದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದ್ದಾರೆ.
ಈ ಬಗ್ಗೆ ಯಾದಗಿರಿಯಲ್ಲಿ ಮಾತನಾಡಿದ ಈಶ್ವರಪ್ಪ, ಇನ್ನೂ ಮುಂದೆ ಜೀವನ ಪರ್ಯಂತ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಸಿದ್ದರಾಮಯ್ಯ ಮತ್ತೆ ಮುಖ್ಯ ಮಂತ್ರಿ ಆಗಲ್ಲ ಎನ್ನುವುದು ಅವರಿಗೆ ಗೊತ್ತಾಗಿದೆ. ಅವರ ಕನಸು ಮುಗಿದಿದೆ. ಹೀಗಾಗಿ ಅವರ ಮಗನ ಬಗ್ಗೆ ಸಿದ್ದು ಕನಸು ಕಾಣುವುದನ್ನು ಶುರು ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.
- Advertisement 2
- Advertisement 3
ಗ್ರಾ.ಪಂ ಚುನಾವಣಾ ವಿಚಾರವಾಗಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹೇಳಿಕೆ ನೀಡದ ಬಗ್ಗೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ ಎಂದು ನಾನು ನೇರವಾಗಿ ಹೇಳುವುದಿಲ್ಲ. ಮುಖ್ಯಮಂತ್ರಿಯಾದವರಿಗೆ ಜ್ಞಾನ ಬೇಡವಾ. ಗ್ರಾ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ ಅಂತೀರಾ? ಹೇಗೆ ಗೆಲ್ಲತ್ತೀರಾ ನಿಮಗೆ ಟಿಕೆಟ್ ಇಲ್ಲ. ತಳ ಮಟ್ಟದಿಂದ ಪಕ್ಷ ಗಟ್ಟಿ ಮಾಡುವ ಅವಶ್ಯಕತೆ ಬಿಜೆಪಿಗಿಲ್ಲ ಎಂದರು.
- Advertisement 4
ಪದಗ್ರಹಣ ಕಾರ್ಯಕ್ರಮಕ್ಕೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂಬ ಡಿಕೆಶಿ ಆರೋಪ ವಿಚಾರ ಮಾತನಾಡಿದ ಅವರು, ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿಯನ್ನು ಕೆಪಿಸಿಸಿ ಅಧ್ಯಕ್ಷರಾಗಿ ಮಾಡುತ್ತಿರುವುದಕ್ಕೆ ತುಂಬಾ ನೋವಿದೆ. ದೇಶದಲ್ಲಿ ಕೊರೊನಾ ಇರುವ ವಿಚಾರ ಡಿಕೆಶಿಗೆ ಗೊತ್ತಿಲ್ವಾ. ಡಿಕೆಶಿ ಎನಾದರೂ ಮಾಡಿ ಕೊರೊನಾವನ್ನು ನಮ್ಮ ದೇಶದಿಂದ ಓಡಿಸಿಬಿಡಲಿ. ನಾನೇ 50 ಲಕ್ಷ ಜನರನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗುತ್ತೇನೆ. ಮೈ ಮೇಲೆ ಜ್ಞಾನ ಇಲ್ಲದೆ ಪ್ರತಿ ವಿಚಾರವನ್ನು ರಾಜಕೀಯಕ್ಕೆ ತರುವ ಪ್ರಯತ್ನವನ್ನು ಡಿಕೆಶಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.