ಸಿದ್ದರಾಮಯ್ಯಗೆ ಧಮ್ ಇದ್ರೆ ಚಿದಂಬರಂ ಮುಂದೆ ನಿಂತು ಮಾತಾಡಲಿ – ಕಟೀಲ್ ಟಾಂಗ್

Public TV
1 Min Read
SIDDU NALIN

ಮಡಿಕೇರಿ: ಕೊರೊನಾ ಲಸಿಕೆಯನ್ನು ಉಚಿತವಾಗಿ ವಿತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡುವೆ ಮಾತಿನ ಸಮರ ಮುಂದುವರಿದಿದೆ. ನನ್ನ ಧಮ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರಿಗೆ ಧಮ್ ಇದ್ದರೆ ಚಿದಂಬರಂ ಮುಂದೆ ನಿಂತು ಮಾತನಾಡಲಿ ಎಂದು ಕಟೀಲ್, ಮಾಜಿ ಸಿಎಂಗೆ ಟಾಂಗ್ ನೀಡಿದ್ದಾರೆ.

nalin 1

ಮಡಿಕೇರಿಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಗೆ ಆಗಮಿಸಿದ ಸಂದರ್ಭ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೊರೊನಾಗೆ ಲಸಿಕೆ ಬಂದಾಗ ಆತ್ಮನಿರ್ಭರ ಭಾರತ್ ಅಡಿಯಲ್ಲಿ ಯಾವೆಲ್ಲ ರಾಜ್ಯಗಳಿಗೆ ಹೇಗೆ ತಲುಪಿಸಬೇಕೋ ಹಾಗೆ ತಲುಪಿಸುತ್ತೇವೆ. ಅದನ್ನು ಯಾರಿಂದಲೂ ಹೇಳಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಪೋಕರಿ ಕಟೀಲ್ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್: ಸಿದ್ದರಾಮಯ್ಯ

Siddaramaiah 4

ಸಿದ್ದರಾಮಯ್ಯ ಮೊದಲು ಸಂಸ್ಕಾರ ಮತ್ತು ಸಂಸ್ಕೃತಿ ಇಟ್ಟುಕೊಂಡು ಮಾತನಾಡುವುದನ್ನು ಕಲಿಯಬೇಕು ಎಂದು ತಿರುಗೇಟು ನೀಡಿದ್ರು. ರಾಜ್ಯದಲ್ಲಿ ನಡೆಯುತ್ತಿರುವ ಆರ್ ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಕಟೀಲ್, ಎರಡು ಕ್ಷೇತ್ರಗಳಲ್ಲಿಯೂ ನಮ್ಮ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

nalin 2

ರಾಜ್ಯದಲ್ಲಿ ಮುಂಬರುವ ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಇದೇ ವೇಳೆ ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯನವರೇ ನಿಮ್ಮ ಖಾತೆ ಹ್ಯಾಕ್ ಆಗಿದ್ಯಾ- ಕಟೀಲ್ ಪ್ರಶ್ನೆ

Share This Article
Leave a Comment

Leave a Reply

Your email address will not be published. Required fields are marked *