ಸಿದ್ಧಾರೂಢ ಮಠದಲ್ಲಿ 35 ದಿನಗಳಲ್ಲಿ 18.63 ಲಕ್ಷ ದೇಣಿಗೆ ಸಂಗ್ರಹ

Public TV
1 Min Read
hbl siddharudha swamy math mutt

ಹುಬ್ಬಳ್ಳಿ: ಉತ್ತರ ಕರ್ನಾಟಕದ ಆರಾಧ್ಯದೈವ ವಾಣಿಜ್ಯ ನಗರಿಯ ಸದ್ಗುರು ಶ್ರೀ ಸಿದ್ಧಾರೂಢರ ಮಠದಲ್ಲಿ ಮಾರ್ಚ್ 18 ರಿಂದ ಏಪ್ರಿಲ್ 22ರ ವರೆಗೆ 18,63,527 ರೂಪಾಯಿ ದೇಣಿಗೆ ಸಂಗ್ರಹವಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಶ್ರೀ ಸಿದ್ಧಾರೂಢ ಸ್ವಾಮಿ ಟ್ರಸ್ಟ್ ಕಮಿಟಿಯ ನೇತೃತ್ವದಲ್ಲಿ ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ತೆರದು ಏಣಿಕೆ ಮಾಡಲಾಗಿದ್ದು, 35 ದಿನಗಳಲ್ಲಿ 18,63,527 ರೂಪಾಯಿ ದೇಣಿಗೆ ಸಂಗ್ರಹವಾಗಿದೆ. ವಾಣಿಜ್ಯ ನಗರಿ ಮಾತ್ರವಲ್ಲದೆ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಸೇರಿದಂತೆ ರಾಜ್ಯ ಅಂತರರಾಜ್ಯದಲ್ಲಿ ಕೂಡ ಶ್ರೀ ಸಿದ್ಧಾರೂಢರ ಭಕ್ತರಿದ್ದು, ಈ ಬಾರಿ ಕೊರೊನಾ ಸಮಯದಲ್ಲಿಯೂ ದೊಡ್ಡ ಮಟ್ಟದಲ್ಲಿ ದೇಣಿಗೆ ಸಂಗ್ರಹವಾಗಿದೆ.

hbl siddharudha swamy math mutt 2

ಎಣಿಕೆ ಮೇಲ್ವಿಚಾರಣೆಯನ್ನು ಟ್ರಸ್ಟ್ ಅಧ್ಯಕ್ಷರಾದ ಡಿ.ಡಿ.ಮಾಳಗಿ, ಉಪಾಧ್ಯಕ್ಷ ಜಗದೀಶ್ ಮಗಜಿಕೊಂಡಿ ಸೇರಿದಂತೆ ಟ್ರಸ್ಟ್ ಸದಸ್ಯರು ವಹಿಸಿಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *