Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸಿನಿಮಾ ಶೈಲಿಯಲ್ಲಿ ವರ್ತೂರ್ ಕಿಡ್ನಾಪ್ – ಪ್ರಕರಣದ ಸುತ್ತ ಅನುಮಾನದ ಹುತ್ತ

Public TV
Last updated: December 2, 2020 8:57 am
Public TV
Share
3 Min Read
varthur prakash
SHARE

– ಬೆಂಗಳೂರಿಗೆ ಬರುತ್ತಿದ್ದಾಗ ನ.26ರಂದು ಕಿಡ್ನಾಪ್
– ಕೈ ಕಾಲುಗಳನ್ನು ಹಗ್ಗದಿಂದ ಬಿಗಿದು ಲಾಂಗ್, ರಾಡ್‍ಗಳಿಂದ ಹಲ್ಲೆ

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್‍ರನ್ನು ಅಪಹರಿಸಿ ಹಿಂಸೆ ನೀಡಿದ ಪ್ರಕರಣದ ಸುತ್ತ ಅನುಮಾನ ಹುತ್ತ ಸೃಷ್ಟಿಯಾಗಿದೆ. ದೂರಿನ ಪ್ರಕಾರ ವರ್ತೂರು ಪ್ರಕಾಶ್ 3 ದಿನ ಕಿಡ್ನಾಪ್ ಆಗಿದ್ದರು. ಕಿಡ್ನಾಪ್ ಆಗಿದ್ದರೂ ವರ್ತೂರು ಕುಟುಂಬಸ್ಥರು ನಾಪತ್ತೆ ದೂರನ್ನು ಯಾಕೆ ನೀಡಿಲ್ಲ ಎಂಬ ಪ್ರಶ್ನೆ ಎದ್ದಿದೆ.

ಹೌದು. ವರ್ತೂರ್ ಪ್ರಕಾಶ್ ಮಾಜಿ ಸಚವರಾಗಿದ್ದಾರೆ. ಅಷ್ಟೇ ಅಲ್ಲದೇ ಹಲವು ರಾಜಕೀಯ ನಾಯಕರಿಗೆ ಪರಿಚಯ ಹೊಂದಿದ್ದಾರೆ. ಸಾಧಾರಣವಾಗಿ ಹೊರ ಹೋದ ವ್ಯಕ್ತಿ ಒಂದು ದಿನ ಮನೆಗೆ ಬಾರದೇ ಇದ್ದರೂ ಕುಟುಂಬದ ಸದಸ್ಯರು ಆತನನ್ನು ಹುಡುಕಲು ಆರಂಭಿಸಿ ಕೊನೆಗೆ ನಾಪತ್ತೆ ದೂರನ್ನು ದಾಖಲಿಸುತ್ತಾರೆ. ಹೀಗಿರುವಾಗ ಮೂರು ದಿನ ಕಿಡ್ನಾಪ್ ಆಗಿದ್ದರೂ ಮನೆಯವರು ದೂರನ್ನು ಯಾಕೆ ದಾಖಲಿಸಿಲ್ಲ ಎಂಬ ಗಂಭೀರವಾದ ಪ್ರಶ್ನೆ ಎದ್ದಿದೆ.

varthur prakash 2

ದೂರು ತಡ ಯಾಕೆ?
ಅಪಹರಣಕಾರರು ಕಾರಿನಿಂದ ಇಳಿಸಿದ ಬಳಿಕ ಅಪರಿಚಿತ ಕಾರನ್ನು ಅಡ್ಡ ಹಾಕಿ ಕೆ.ಆರ್.ಪುರಂನಲ್ಲಿರುವ ಸಾಯಿ ಆಸ್ಪತ್ರೆವರೆಗೆ ಡ್ರಾಪ್ ಪಡೆದಿದ್ದೆ. ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾಗ ಮಂಗಳವಾರ ಬೆಳ್ಳಂದೂರು ಸ್ಮಶಾನದ ಬಳಿ ನನ್ನ ಕಾರು ಪತ್ತೆಯಾಗಿದೆ. ಗಾಯಗೊಂಡಿದ್ದ ಕಾರಣ ಈಗ ತಡವಾಗಿ ದೂರು ನೀಡುತ್ತಿದ್ದೇನೆ ಎಂದು ವರ್ತೂರ್ ಪ್ರಕಾಶ್ ತಿಳಿಸಿದ್ದಾರೆ.

ಯಾವ ದಿನ ಏನಾಯ್ತು?
ನವೆಂಬರ್ 25:
ಕೋಲಾರದ ಬೆಗ್ಲಿಹೊಸಹಳ್ಳಿ ಫಾರಂಹೌಸ್‍ನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಸಂಜೆ 7 ಗಂಟೆಗೆ ಅಪಹರಣ ನಡೆದಿದೆ. ಎರಡು ಕಾರುಗಳಲ್ಲಿ ಬಂದಿದ್ದ 8 ಜನರ ತಂಡ ಲಾಂಗ್ ತೋರಿಸಿ ಕಾರು ಅಡ್ಡಗಟ್ಟಿ ವರ್ತೂರ್ ಪ್ರಕಾಶ್, ಚಾಲಕನ ಅಪಹರಣ ಮಾಡಿದ್ದಾರೆ. ಕೈ ಕಾಲುಗಳನ್ನು ಹಗ್ಗದಿಂದ ಬಿಗಿದು ಹಲ್ಲೆ ನಡೆಸಿ ಕಣ್ಣಿಗೆ ಪಟ್ಟಿ ಕಟ್ಟಿ ರಹಸ್ಯ ಸ್ಥಳಕ್ಕೆ ಕರೆದೊಯ್ದು 30 ಕೋಟಿಗೆ ಬೇಡಿಕೆ ಇಟ್ಟಿದ್ದಾರೆ.

Varthur Prakash kidnap 1

ನವೆಂಬರ್ 26:
ಅಪಹರಣಕಾರರ ಹಿಂಸೆ ತಾಳಲಾರದೇ ನಯಾಜ್ ಎಂಬಾತನ ಮೂಲಕ 48 ಲಕ್ಷ ಹಣ ವರ್ತೂರ್ ತರಿಸಿಕೊಂಡಿದ್ದಾರೆ. ಕೋಲಾರದ ಕಾಫಿಡೇ ಶಾಪ್ ಬಳಿ ನಯಾಜ್‍ನಿಂದ 48 ಲಕ್ಷ ರೂ. ಹಸ್ತಾಂತರವಾಗಿದೆ. ಈ ವೇಳೆ ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟ ಅಪಹರಣಕಾರರು ಚಿತ್ರಹಿಂಸೆ ನೀಡಿ ಕೊಲೆ ಮಾಡುವ ಬೆದರಿಕೆ ಹಾಕಿದ್ದಾರೆ.

ನವೆಂಬರ್ 27:
ವರ್ತೂರು ಪ್ರಕಾಶ್ ಕೊಟ್ಟ ದೂರಿನಲ್ಲಿ ಈ ದಿನದ ಬಗ್ಗೆ ಉಲ್ಲೇಖ ಇಲ್ಲ.

Varthur Prakash kidnap 2

 

ನವೆಂಬರ್ 28:
ಮುಂಜಾನೆಯವರೆಗೂ ಚಿತ್ರಹಿಂಸೆ ನೀಡಿ ಹಣ ಇಲ್ಲ ಎಂದಾಗ ಚಾಲಕನ ತಲೆಗೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಮಧ್ಯರಾತ್ರಿ 1 ಗಂಟೆಗೆ ಕಾರು ಚಾಲಕ ಮೂರ್ಛೆ ತಪ್ಪಿಬಿದ್ದಿದ್ದ. ಸತ್ತು ಹೋಗಿದ್ದಾನೆ ಭಾವಿಸಿ ಸ್ವಲ್ಪ ದೂರದಲ್ಲಿ ಅಪಹರಣಕಾರರು ಮದ್ಯಪಾನ ಪಾರ್ಟಿ ಮಾಡಿದ್ದಾರೆ. ಆದರೆ ಪ್ರಜ್ಞೆ ಬಂದ ಬಳಿಕ ಅಪಹರಣಕಾರರಿಂದ ಕಾರು ಚಾಲಕ ತಪ್ಪಿಸಿಕೊಂಡಿದ್ದಾನೆ. ಬಳಿಕ ವರ್ತೂರು ಪ್ರಕಾಶ್ ಅವರನ್ನು ಹೊಸಕೋಟೆಯ ಶಿವನಾಪುರ ಬಳಿ ಕಾರಿನಿಂದ ಇಳಿಸಿದ ಅಪಹರಣಕಾರರು ದೂರು ನೀಡಿದರೆ ನಿನ್ನ ಮಕ್ಕಳು ಕೊಲೆ ಆಗ್ತಾರೆ ಎಂದು ಧಮ್ಕಿ ಹಾಕಿ ಪರಾರಿಯಾಗಿದ್ದಾರೆ.

ಅನುಮಾನಕ್ಕೆ ಕಾರಣ ಏನು?
1. ದೂರಿನ ಪ್ರಕಾರ ವರ್ತೂರು ಪ್ರಕಾಶ್ 3 ದಿನ ಕಿಡ್ನಾಪ್ ಆಗಿದ್ದಾರೆ. ಆದರೂ, ವರ್ತೂರು ಕುಟುಂಬಸ್ಥರು ನಾಪತ್ತೆ ದೂರನ್ನು ನೀಡಲಿಲ್ಲ ಯಾಕೆ?
2. ರಿಲೀಸ್ ಆದ ತಕ್ಷಣ ವರ್ತೂರ್ ಪ್ರಕಾಶ್ ದೂರು ನೀಡಲಿಲ್ಲ ಯಾಕೆ?
3. ತಡವಾಗಿ ಕೊಟ್ಟ ದೂರಿನಲ್ಲಿ ಅಪಹರಣಕಾರರ ವೇಷಭೂಷಣ, ಭಾಷೆ ಬಗ್ಗೆ ಉಲ್ಲೇಖವಿಲ್ಲ ಏಕೆ?
4. 30 ಕೋಟಿಗೆ ಬೇಡಿಕೆ ಇಟ್ಟವರು ಕೇವಲ 48 ಲಕ್ಷಕ್ಕೆ ಸುಮ್ಮನಾದರೇ?
5. ಅಪಹರಣಕಾರರಿಂದ ತಪ್ಪಿಸಿಕೊಂಡಿದ್ದಾನೆ ಎನ್ನಲಾದ ಚಾಲಕ ದೂರು ನೀಡಲಿಲ್ಲ ಯಾಕೆ?
6. ಅಪಹರಣಕಾರರಿಗೆ 48 ಲಕ್ಷ ತಲುಪಿಸಿದ್ದ ನಯಾಜ್ ದೂರು ಕೊಡಲಿಲಲ್ಲ ಯಾಕೆ?

 

TAGGED:bengalurukannada newsKolarpolicevarthur prakashಅಪಹರಣಕೋಲಾರಬೆಂಗಳೂರುವರ್ತೂರ್ ಪ್ರಕಾಶ್
Share This Article
Facebook Whatsapp Whatsapp Telegram

Cinema Updates

Madenur Manu 2
ನಮ್ಮ ಜಗಳ ನಮ್ಮಲ್ಲೇ ಇರಬೇಕಿತ್ತು, ನಾನು ಸತ್ತರೂ ಯಾರೂ ಕಾರಣರಲ್ಲ: ಸಹ ಕಲಾವಿದೆ
50 minutes ago
rishab shetty 2
‘ಕಾಂತಾರ ಚಾಪ್ಟರ್ 1’ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ: ಹೊಂಬಾಳೆ ಫಿಲಂಸ್ ಸ್ಪಷ್ಟನೆ
2 hours ago
madenur manu 4
ಅಪ್ಪಂಗೂ, ತಾತನಿಗೂ ಇಬ್ರೂ ಹೆಂಡ್ತಿರು, ನಿನ್ನ ಮದ್ವೆ ಆಗ್ತೀನಿ ಅಂತ ಕಥೆ ಕಟ್ಟಿದ್ದ- ಮನು ಕರ್ಮಕಾಂಡ ಬಿಚ್ಚಿಟ್ಟ ಸಂತ್ರಸ್ತೆ
1 hour ago
Darshan and Vijayalakshmi
ಯೂಟ್ಯೂಬ್‌ ಸಂದರ್ಶನ ನೀಡಿ ತಗಲಾಕಿಕೊಂಡ ದಾಸ – ಕೋರ್ಟ್‌ನಿಂದ ದರ್ಶನ್‌, ವಿಜಯಲಕ್ಷ್ಮಿಗೆ ಸಮನ್ಸ್‌
3 hours ago

You Might Also Like

rahul gandhi aravind kejriwal narendra modi
Latest

Delhi Election| ಆಪ್‌ಗಿಂತ ಮೂರು ಪಟ್ಟು ಹೆಚ್ಚು ಖರ್ಚು ಮಾಡಿತ್ತು ಕಾಂಗ್ರೆಸ್‌ – 68 ಮಂದಿಗೆ ಬಿಜೆಪಿಯಿಂದ ತಲಾ 25 ಲಕ್ಷ

Public TV
By Public TV
3 minutes ago
K S Naveen
Bengaluru City

ಚಿತ್ತಾಪುರದಲ್ಲಿ ಛಲವಾದಿ ಮೇಲೆ ಹಲ್ಲೆ ಯತ್ನ – ಸಿಎಂ, ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲಿ; ಕೆ.ಎಸ್ ನವೀನ್

Public TV
By Public TV
10 minutes ago
Nikhil Kumaraswamy
Bengaluru City

ರಾಮನಗರ ಹೆಸರು ಬದಲಾವಣೆ ರಿಯಲ್ ಎಸ್ಟೇಟ್‌ನ ಕರಪತ್ರದಂತೆ: ನಿಖಿಲ್ ಕುಮಾರಸ್ವಾಮಿ

Public TV
By Public TV
52 minutes ago
M B Patil
Bengaluru City

ರಶ್ಮಿಕಾ, ಶ್ರೀಲೀಲಾ ಎಲ್ಲಾ ಬ್ಯುಸಿ ಇದ್ರು, ಅದಕ್ಕೇ ತಮನ್ನಾ ಆಯ್ಕೆ ಮಾಡಿದ್ವಿ: ಎಂ.ಬಿ ಪಾಟೀಲ್

Public TV
By Public TV
1 hour ago
KRS Dam
Districts

ಕಾವೇರಿ ಜಲಾನಯನ ಪ್ರದೇಶದಲ್ಲಿ ಸುಳಿಯದ ಮಳೆ – ಕೆಆರ್‌ಎಸ್ ನೀರಿನ ಮಟ್ಟ 89 ಅಡಿಗೆ ಕುಸಿತ

Public TV
By Public TV
1 hour ago
DK Shivakumar and dk Suresh
Latest

ಡಿಕೆ ಬ್ರದರ್ಸ್‌ ಬುಡಕ್ಕೆ ಬಂತು ನ್ಯಾಷನಲ್‌ ಹೆರಾಲ್ಡ್‌ ಕೇಸ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?