ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನ ಕಿಡ್ನಾಪ್- ಸಿಸಿಟಿವಿಯಲ್ಲಿ ಸೆರೆ

Public TV
1 Min Read
KIDNAP

ಕೊಪ್ಪಳ: ಸಿನಿಮೀಯ ರೀತಿಯಲ್ಲಿ ನಗರ ಸಭೆ ಸದಸ್ಯರೊಬ್ಬರನ್ನು ಅಪಹರಣ ಮಾಡಲಾಗಿದ್ದು, ಕಿಡ್ನಾಪ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನವೆಂಬರ್ 02ಕ್ಕೆ ನಗರಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಗಂಗಾವತಿ ನಗರ ಸಭೆ ಕಾಂಗ್ರೆಸ್ ಸದಸ್ಯ ಮನೋಹರ ಸ್ವಾಮಿ ಹಿರೇಮಠರನ್ನ ಬಿಜೆಪಿ ಪಕ್ಷದ ನಗರ ಸಭೆ ಸದಸ್ಯರು ಕಿಡ್ನಾಪ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

KIDNAP 1

ಬಿಜೆಪಿಯ ಹಾಲಿ ಸದಸ್ಯರಾದ ಅಜಯ್ ಬಿಚ್ಚಾಲಿ, ನವೀನ ಪಾಟೀಲ್, ಪರಶುರಾಮ ಮಡ್ಡೇರ್, ಹಾಗೂ ಮಾಜಿ ಸದಸ್ಯ ರಾಚ್ಚಪ್ಪ ಸಿದ್ದಾಪುರ ಹಾಗೂ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಸೇರಿದಂತೆ ಸಹಚರರಾದ ರವಿ ಲಿಂಗರಾಜ ಕ್ಯಾಂಪ್, ಡಬರಿ ಶರಣ ಹೀಗೆ ಒಟ್ಟು 08 ಜನರ ವಿರುದ್ಧ ಕಾಂಗ್ರೆಸ್ ಸದಸ್ಯನ ಕಿಡ್ನಾಪ್ ಆರೋಪ ಕೇಳಿಬಂದಿದೆ.

ಗಂಗಾವತಿಯ ನಕ್ಷತ್ರ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಕಿಡ್ನಾಪ್ ಮಾಡಿದ್ದು, ಕತ್ತು ಹಿಡಿದು ಎಳೆದುಕೊಂಡು ಹೊಗುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಿಡ್ನಾಪ್ ಮಾಡಿದ ಎಂಟು ಜನರ ವಿರುದ್ಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Police Jeep 1 1 medium

Share This Article
Leave a Comment

Leave a Reply

Your email address will not be published. Required fields are marked *