ಮುಂಬೈ: ಬಾಲಿವುಡ್ ನಟ ಆತ್ಮಹತ್ಯೆಗೆ ಶರಣಾಗಿ ಭಾರೀ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಬ್ಬ ಯುವ ನಟ ಸಾವಿಗೆ ಶರಣಾಗಿದ್ದಾರೆ.
ಹೌದು. ಮರಾಠಿ ನಟ ಅಶುತೋಷ್ ಭಕ್ರೆ ಆತ್ಮಹತ್ಯೆಗೆ ಶರಣಾಗಿದ್ದಾರೆ. 32 ವರ್ಷದ ನಟ ಮಹಾರಾಷ್ಟ್ರದ ಮರಾಠವಾಡದ ನಂದೇಡ್ ಪಟ್ಟಣದಲ್ಲಿರುವ ತಮ್ಮ ಮನೆಯಲ್ಲಿ ಬುಧವಾರ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಅಶುತೋಷ್ ಸೀರಿಯಲ್ ನಟಿ ಮಯೂರಿ ದೇಶ್ಮುಖ್ ಪತಿ. ತಿಂಗಳ ಹಿಂದೆಯಷ್ಟೇ ಅಶುತೋಷ್ ನಂದೇಡ್ ನಲ್ಲಿರುವ ತಮ್ಮ ಪೋಷಕರ ಮನೆಗೆ ಬಂದಿದ್ದಾರೆ. ಸದ್ಯ ಆತ್ಮಹತ್ಯೆಗೆ ನಿಖರ ಕಾಣವೇನೆಂದು ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಓದಿ: ಬಾಲಿವುಡ್ಗೆ ಬೈ ಹೇಳಿ ಕೊಡಗಿನಲ್ಲಿ ಕೃಷಿ ಮಾಡೋಕೆ ಮುಂದಾಗಿದ್ದ ಸುಶಾಂತ್ ಸಿಂಗ್
ಅಶುತೋಷ್ ಕೆಲ ದಿನಗಳ ಹಿಂದೆ ಅವರು ಖಿನ್ನತೆಯಿಂದ ಬಳಲುತ್ತಿದ್ದರು. ಅಲ್ಲದೆ ಈ ಹಿಂದೆ, ಒಬ್ಬ ವ್ಯಕ್ತಿ ಯಾಕೆ ಆತ್ಮಹತ್ಯೆಗೆ ಶರಣಾಗುತ್ತಾನೆ ಎಂದು ವಿಶ್ಲೇಷಣೆ ಇರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಕೂಡ ಮಾಡಿಕೊಂಡಿದ್ದರು. ಅಶುತೋಷ್ ಭಕ್ರೆ ಅವರು ‘ಭಕರ್’, ‘ಇಚರ್ ಥಾರ್ಲ ಪಕ್ಕಾ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದನ್ನೂ ಓದಿ: ರಿಯಾಗೆ ನಾನೆಂದೂ ಸುಶಾಂತ್ನನ್ನು ಬಿಟ್ಟು ಬರೋಕೆ ಹೇಳಿರಲಿಲ್ಲ: ಮಹೇಶ್ ಭಟ್
ಇದೀಗ ನಟನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಶಿವಾಜಿನಗರ ಠಾಣೆಯ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸುಶಾಂತ್ ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಸ್ತಿದ್ದ ರಿಯಾ
ಜೂನ್ 14ರಂದು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮುಂಬೈನ ಬಾಂದ್ರಾ ನಿವಾಸದಲ್ಲಿ ಪತ್ತೆಯಾಗಿತ್ತು. ಮಾನಸಿಕ ಖಿನ್ನತೆಗೆ ಒಳಗಾಗಿದ್ದರಿಂದ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ. ಆದ್ರೆ ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಅಭಿಮಾನಿಗಳು ಇದೊಂದು ಪೂರ್ವಯೋಜಿತ ಕೊಲೆ ಎಂದು ಆರೋಪಿಸುತ್ತಿದ್ದರೆ, ಇತ್ತ ತಂದೆ, ಸುಶಾಂತ್ ಪ್ರೇಯಸಿ ನಟಿ ರಿಯಾ ಚಕ್ರವರ್ತಿ ವಿರುದ್ಧ ದೂರು ನೀಡಿದ್ದಾರೆ.