ಸುರೇಶ್‌ ಅಂಗಡಿ ಪತ್ನಿಗೆ ಟಿಕೆಟ್‌- ಲೋಕಸಭೆಗೆ ಸ್ಪರ್ಧಿಸಲಿದ್ದಾರೆ ನಿವೃತ್ತ ಸಿಎಸ್‌ ರತ್ನಪ್ರಭಾ

Public TV
1 Min Read
suresh angadi wife mangala suresh

ನವದೆಹಲಿ: ಬೆಳಗಾವಿ ಉಪಚುನಾವಣೆಯಲ್ಲಿ ದಿ. ಸುರೇಶ್‌ ಅಂಗಡಿ ಅವರ ಪತ್ನಿ ಮಂಗಳಾ ಸುರೇಶ್‌ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳಿಗೆ ಬಿಜೆಪಿ ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಂಗಳಾ ಸುರೇಶ್‌ ಅಂಗಡಿ, ಬಸವಕಲ್ಯಾಣಕ್ಕೆ ಶರಣು ಸಲಗಾರ್‌, ಮಸ್ಕಿಗೆ ಪ್ರತಾಪ್‌ ಗೌಡ ಪಾಟೀಲ್‌ ಅವರಿಗೆ ಟಿಕೆಟ್‌ ನೀಡಿದೆ.

Raichur Pratap Gowda

ದಿವಂಗತ ಸುರೇಶ್ ಅಂಗಡಿ ಪುತ್ರಿ, ಜಗದೀಶ್ ಶೆಟ್ಟರ್ ಸೊಸೆ ಶ್ರದ್ಧಾ ಅವರಿಗೆ ಟಿಕೆಟ್ ಸಿಗಬಹುದು ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್‌ ಅಚ್ಚರಿ ನಡೆ ಅನುಸರಿಸಿದ್ದು ಸುರೇಶ್‌ ಅಂಗಡಿ ಪತ್ನಿಗೆ ಟಿಕೆಟ್‌ ನೀಡಿದೆ.

ಬಸವಕಲ್ಯಾಣಕ್ಕೆ ಶರಣು ಸಲಗಾರ್ ಹೆಸರನ್ನು ಯಡಿಯೂರಪ್ಪ ಸೂಚಿಸಿದ್ದರು. ಕಳೆದ ಬಾರಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಖೂಬಾಗೆ ಟಿಕೆಟ್ ನಿರಾಕರಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಏ.17 ರಂದು ಉಪಚುನಾವಣೆ ನಡೆಯಲಿದೆ.

rathnaprabha

ಕರ್ನಾಟಕದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನ ಪ್ರಭಾಗೆ ಬಿಜೆಪಿ ಟಿಕೆಟ್‌ ನೀಡಿದ್ದು, ತಿರುಪತಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *