ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಪೊಲೀಸರು ಮಾಡುತ್ತಿದ್ದಾರೆ. ಆದರೆ ಈ ಪ್ರಕರಣ ದಿನಕ್ಕೊಂದು ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದೀಗ ಸುಶಾಂತ್ ಸಿಂಗ್ ಸಹೋದರಿ ಪ್ರಧಾನಿ ಮೋದಿ ಅವರಿಗೆ ಬಹಿರಂಗವಾಗಿ ಒಂದು ಪತ್ರವನ್ನು ಬರೆದಿದ್ದಾರೆ. ಇದನ್ನೂ ಓದಿ: ‘ಸತ್ಯವು ಮೇಲುಗೈ ಸಾಧಿಸುತ್ತೆ’ – ಕೈ ಮುಗಿದು ವಿಡಿಯೋ ರಿಲೀಸ್ ಮಾಡಿದ ರಿಯಾ
ನಟ ಸುಶಾಂತ್ ಸಿಂಗ್ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ತಮ್ಮ ಸಹೋದರನ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ನೇರವಾಗಿ ಮನವಿ ಮಾಡಿಕೊಂಡಿದ್ದಾರೆ. ಶ್ವೇತಾ ಅವರು ಸೋಶಿಯಲ್ ಮೀಡಿಯಾದ ಮೂಲಕ ಪ್ರಧಾನಿ ಮೋದಿ ಅವರಿಗೆ ಒಂದು ಪತ್ರವನ್ನು ಬರೆದಿದ್ದಾರೆ. ಇದನ್ನೂ ಓದಿ: ಜೂ.8ರ ವರೆಗೂ ಸುಶಾಂತ್ ಜೊತೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದೆ: ರಿಯಾ ಸ್ಪಷ್ಟನೆ
“ಡಿಯರ್ ಸರ್… ನೀವು ಸತ್ಯದ ಪರವಾಗಿ ನಿಲ್ಲುತ್ತೀರಿ ಎಂದು ನನ್ನ ಮನಸ್ಸು ಹೇಳುತ್ತಿದೆ. ನಾವು ತುಂಬ ಸರಳ ಕುಟುಂಬದವರು. ನನ್ನ ತಮ್ಮ ಬಾಲಿವುಡ್ಗೆ ಬಂದಾಗ ಅವನಿಗೆ ಯಾವುದೇ ಗಾಡ್ಫಾದರ್ ಇರಲಿಲ್ಲ. ಈಗಲೂ ಇಲ್ಲ. ಹೀಗಾಗಿ ನೀವು ಕೂಡಲೇ ಈ ಪ್ರಕರಣದ ಬಗ್ಗೆ ಗಮನ ಹರಿಸಬೇಕು ಎಂದು ನಾನು ಮನವಿ ಮಾಡಿಕೊಳ್ಳುತ್ತಿದ್ದೀನಿ. ಎಲ್ಲ ಸರಿಯಾದ ಮಾರ್ಗದಲ್ಲಿ ತನಿಖೆ ನಡೆಯುತ್ತಿದಿಯೇ ಎಂದು ಪರಿಶೀಲನೆ ಮಾಡಿ. ಯಾವುದೇ ಸಾಕ್ಷಿ ನಾಶ ಆಗಲು ಅವಕಾಶ ಕೊಡಬೇಡಿ. ಸತ್ಯಕ್ಕೆ ಜಯವಾಗಲಿ” ಎಂದು ಶ್ವೇತಾ ಪತ್ರದಲ್ಲಿ ಬರೆದಿದ್ದಾರೆ.
ಅಷ್ಟೇ ಅಲ್ಲದೇ ಈ ಪತ್ರವನ್ನು ಟ್ವಿಟರ್, ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ, “ನಾನು ಸುಶಾಂತ್ ಸಿಂಗ್ ರಜಪೂತ್ ಸಹೋದರಿ. ಈ ಪ್ರಕರಣದ ಬಗ್ಗೆ ತುರ್ತಾಗಿ ಗಮನ ಹರಿಸಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ನಾವು ಭಾರತದ ನ್ಯಾಯಾಂಗ ವ್ಯವಸ್ಥೆ ಮೇಲೆ ನನಗೆ ನಂಬಿಕೆ ಇಟ್ಟುಕೊಂಡಿದ್ದೇನೆ” ಎಂದು ಶ್ವೇತಾ ಅವರು ಬರೆದುಕೊಂಡಿದ್ದಾರೆ. ಜೊತೆಗೆ #JusticeForSushant #SatyamevaJayate ಎಂಬ ಹ್ಯಾಶ್ ಟ್ಯಾಗ್ ಹಾಕಿದ್ದಾರೆ.
https://www.instagram.com/p/CDT8UNlFfl0/?igshid=2974n2ga3hdu
ಶ್ವೇತಾ ತಮ್ಮ ಸಹೋದರನಿಗೆ ಸಂಬಂಧಿಸಿದ ಹಲವಾರು ಪೋಸ್ಟ್ ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಶನಿವಾರ ಅಂದರೆ ಜೂನ್ 29ರಂದು ಸುಶಾಂತ್ ಸಿಂಗ್ ಪ್ರತಿದಿನ ಮಾಡುತ್ತಿದ್ದ ಕೆಲಸಗಳ ವಿಷಯಗಳ ಪಟ್ಟಿಯನ್ನು ಅವರ ಹಂಚಿಕೊಂಡಿದ್ದರು. ಒಂದು ಬಿಳಿ ಬಣ್ಣದ ಬೋರ್ಡಿನಲ್ಲಿ ಸುಶಾಂತ್ ಸಿಂಗ್ ಮಾಡುತ್ತಿದ್ದ ಕೆಲಸಗಳ ಪಟ್ಟಿಯನ್ನು ಬರೆದಿದ್ದು, ಆ ಫೋಟೋವನ್ನು ಶೇರ್ ಮಾಡಿಕೊಂಡಿದ್ದರು. ಅದರಲ್ಲಿ ಬೆಳಗ್ಗೆ ಎದ್ದೇಳುವುದು, ಪುಸ್ತಕಗಳನ್ನು ಓದುವುದು, ಸಿನಿಮಾ ನೋಡುವುದು, ಗಿಟಾರ್ ಕಲಿಮತ್ತೆ ವರ್ಕೌಟ್ ಮಾಡುವುದು ಇತ್ಯಾದಿ ಕೆಲಸಗಳನ್ನು ಕಾಣಬಹುದಾಗಿದೆ.
https://www.instagram.com/p/CDVGI7hFxSJ/?igshid=1s4ddf2e2rsop