ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮತ್ತು ನಟಿ ಕಂಗನಾ ರಣಾವತ್ ಅವರನ್ನು ವಿಚಾರಣೆಗೆ ಒಳಪಡಿಸಲು ಮುಂಬೈ ಪೊಲೀಸರು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಸುಶಾಂತ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 27 ಜನರ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಸುಶಾಂತ್ ತಂದೆ ಕೆ.ಕೆ.ಸಿಂಗ್, ಬಾಲಿವುಡ್ ನಟಿ ರಿಯಾ ಚಕ್ರವರ್ತಿ, ಗೆಳೆಯ ಮಹೇಶ್ ಶೆಟ್ಟಿ ಅವರ ಹೇಳಿಕೆಯನ್ನ ಪಡೆದುಕೊಂಡಿದ್ದಾರೆ. ಇದೀಗ ಸಂಜಯ್ ಲೀಲಾ ಬನ್ಸಾಲಿ ಮತ್ತು ಕಂಗನಾ ರಣಾವತ್ ವಿಚಾರಣಗೆ ಹಾಜರಾಗುವಂತೆ ನೋಟಿಸ್ ನೀಡಲು ಪೊಲೀಸರು ಮುಂದಾಗಿದ್ದಾರೆ.
- Advertisement 2
- Advertisement 3
ಸಂಜಯ್ ಲೀಲಾ ಬನ್ಸಾಲಿ ಅವರ ಯಶಸ್ವಿ ಚಿತ್ರ ಬಾಜೀರಾವ್ ಮಸ್ತಾನಿಗೆ ಮೊದಲು ಸುಶಾಂತ್ ಆಯ್ಕೆಯಾಗಿದ್ದರಂತೆ. ಆದ್ರೆ ಡೇಟ್ ಹೊಂದಾಣಿಕೆಯಾಗದ ಹಿನ್ನೆಲೆಯಲ್ಲಿ ಸುಶಾಂತ್ ಸಿನಿಮಾದಿಂದ ಹೊರ ಬಂದಿದ್ದರು ಎನ್ನಲಾಗಿದೆ. ಇದೇ ರೀತಿ ಸಂಜಯ್ ಲೀಲಾ ಬನ್ಸಾಲಿಯವರ ಒಟ್ಟು 4 ಸಿನಿಮಾಗಳು ಸುಶಾಂತ್ ಕೈ ತಪ್ಪಿದ್ದು ಎನ್ನಲಾಗಿದೆ. ಹೀಗಾಗಿ ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ವರದಿಯಾಗಿದೆ.
- Advertisement 4
ಇನ್ನು ನಟಿ ಕಂಗನಾ ರಣಾವತ್ ಸೋಶಿಯಲ್ ಮೀಡಿಯಾದಲ್ಲಿ ಬಾಲಿವುಡ್ ನಲ್ಲಿರುವ ಸ್ವಜನಪಕ್ಷಪಾತದಿಂದಲೇ ಸುಶಾಂತ್ ಈ ನಿರ್ಧಾರ ತೆಗೆದುಕೊಳ್ಳುವಂತಾಗಿದೆ. ಇದು ಸೂಸೈಡ್ ಅಲ್ಲ ಕೊಲೆ ಎಂದು ಆರೋಪಿಸಿದ್ದರು. ವಿಡಿಯೋದಲ್ಲಿಯ ಹೇಳಿಕೆ ಕುರಿತು ಸ್ಪಷ್ಟನೆ ಪಡೆಯಲು ಕಂಗಾನರನ್ನು ವಿಚಾರಣಗೆ ಒಳಪಡಿಸಲಿದ್ದಾರೆ.