ವಿಜಯಪುರ: ಜಿಲ್ಲೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವ್ಯಕ್ತಿಯೊಬ್ಬರು ನರಳಾಡಿ ಪ್ರಾಣ ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ರೋಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಕಂಡು ಬಂದ ಕೂಡಲೇ ತಡ ರಾತ್ರೀ ವಿಜಯಪುರ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಈ ವೇಳೆ ಖಾಸಗಿ ಹಾಗೂ ಸರ್ಕಾರಿ ವೈದ್ಯರು ವ್ಯಕ್ತಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು.
- Advertisement 2
- Advertisement 3
ರಾತ್ರಿ ಇಡೀ ಅಲೆದು ಕೊನೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ರೋಗಿ ಸಮೇತ ಪೋಷಕರು ಆಗಮಿಸಿದ್ದರು. ಕೊನೆಗೆ ಜಿಲ್ಲಾಧಿಕಾರಿಗಳ ಸೂಚನೆಯ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ತಡ ರಾತ್ರಿ ರೋಗಿ ಮೃತಪಟ್ಟಿದ್ದಾರೆ.
- Advertisement 4