Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋಂಕಿತರೆಲ್ಲರೂ ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇಲ್ಲ: ಡಾ. ಶಂಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೋಂಕಿತರೆಲ್ಲರೂ ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇಲ್ಲ: ಡಾ. ಶಂಕರ್

Bengaluru City

ಸೋಂಕಿತರೆಲ್ಲರೂ ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇಲ್ಲ: ಡಾ. ಶಂಕರ್

Public TV
Last updated: April 17, 2021 3:51 pm
Public TV
Share
3 Min Read
MANIPAL DOCTER
SHARE

ಬೆಂಗಳೂರು: ಕೊರೊನಾ ಎರಡನೇ ಅಲೆ ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಸಾರ್ವಜನಿಕರಲ್ಲಿ ಕೊರೊನಾದ ಸಣ್ಣ ಪ್ರಮಾಣದ ಲಕ್ಷಣಗಳು ಕಂಡು ಬಂದರೆ ಗಾಬರಿ ಪಡಬೇಕಾಗಿಲ್ಲ. ಕೂಡಲೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಔಷಧಿಗಳನ್ನು ಪಡೆದುಕೊಂಡು ಮನೆಯಲ್ಲೇ ವಿಶ್ರಾಂತಿ ಪಡೆಯಿರಿ ಎಂದು ಮಲ್ಲೇಶ್ವರಂ ನಾರ್ತ್ ಮಣಿಪಾಲ ಆಸ್ಪತ್ರೆ ಯ ತಜ್ಞ ವೈದ್ಯ ಡಾ ಶಂಕರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

MANIPAL DOCTER 1

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಡಾ.ಶಂಕರ್ ಅವರು, ರಾಜ್ಯದ ಪ್ರತಿಯೊಂದು ಆಸ್ಪತ್ರೆಗಳಲ್ಲಿ ಕೂಡ ಬೆಡ್, ಐಸಿಯು, ವೆಂಟಿಲೇಟರ್ ಎಲ್ಲವೂ ಕೂಡ ಭರ್ತಿಯಾಗಿದೆ. ಹಾಗಾಗಿ ಸಾರ್ವಜನಿಕರು ಸುಮ್ಮನೆ ಗಾಬರಿಯಾಗಿಕೊಂಡು ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇಲ್ಲ. ನೀವು ವೈದ್ಯರನ್ನು ಸಂಪರ್ಕಿಸಿ ನಿಮ್ಮ ಮನೆಯಲ್ಲೇ ಸೂಕ್ತ ಔಷಧಿಗಳನ್ನು ಪಡೆದುಕೊಂಡು ವಿಶ್ರಾಂತಿ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.

corona test 2

ಕೊರೊನಾ ಸೋಂಕನ್ನು ಮೂರು ಮಾದರಿಯಲ್ಲಿ ವಿಂಗಡನೆ ಮಾಡಲಾಗುತ್ತದೆ. ಅದರಲ್ಲಿ ಮೊದಲ ಹಂತದಲ್ಲಿ ರೋಗಿಯ ರಕ್ತ ಪರೀಕ್ಷೆ ಅಥವಾ ಲಕ್ಷಣಗಳನ್ನು ಗಮನಿಸುತ್ತೇವೆ. ಕೊರೊನಾ ಮೊದಲ ಅಲೆಯಲ್ಲಿ ಶ್ವಾಸಕೋಶದ ಸಮಸ್ಯೆಗಳು ಕಂಡು ಬಂದಿತ್ತು. ಆದರೆ ಎರಡನೇ ಅಲೆ ಬೇರೆಯೇ ಆಗಿದ್ದು, ಮೈಕೈನೋವು, ಸೊಂಟ ನೋವು, ನಾಲಗೆ ರುಚಿ ಇಲ್ಲದೆ ಇರುವುದು ಮತ್ತು ಚರ್ಮ ಅಲರ್ಜಿಗಳನ್ನು ನೋಡಬಹುದು. ಅದೇ ರೀತಿ ನಾನು ನೋಡಿದ ಪ್ರಕಾರ ವಾಂತಿ ಭೇದಿ ಕಂಡು ಬರುತ್ತಿದೆ ಇದು ಕೂಡ 20ರಿಂದ 40 ವರ್ಷ ಪ್ರಾಯದವರಲ್ಲಿ ಹೆಚ್ಚು ಕಂಡು ಬರುತ್ತಿದೆ. ಇದು ನಾವು ಮಾಡುತ್ತಿರುವ ನಿರ್ಲಕ್ಷ್ಯದಿಂದಾಗಿ ಬರುತ್ತಿದೆ. ಸಾರ್ವಜನಿಕರು ಸರಿಯಾಗಿ ಮಸ್ಕ್ ಹಾಕದೆ ಓಡಾಡುತ್ತಿದ್ದು, ಸಾಮಾಜಿಕ ಅಂತರ ಕಾಪಾಡದೆ ಇರುವುದರಿಂದ ಮತ್ತು ಸಭೆ ಸಮಾರಂಭಗಳಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಂಡು ಸೋಂಕು ಹರಡಿಸಿಕೊಳ್ಳುತ್ತಿದ್ದೇವೆ ಎಂದು ಅಭಿಪ್ರಾಯಾಪಟ್ಟರು.

ಕೊರೊನಾ ಎರಡನೇ ಅಲೆಯಲ್ಲಿ ಇದೇ ರೀತಿಯ ಲಕ್ಷಣಗಳಿವೆ ಎಂದು ಹೇಳಲಾಗುತ್ತಿಲ್ಲ ಆದರೆ ಲಕ್ಷಣಗಳು ಕಂಡು ಬಂದರೆ ಸಾರ್ವಜನಿಕರು ನಿಮ್ಮ ವೈದ್ಯರನ್ನು ಕಂಡು ಸೂಕ್ತ ಔಷಧಿ ಪಡೆದುಕೊಂಡು, ವ್ಯಾಯಾಮಮಾಡಿ ಮತ್ತು ಒಳ್ಳೆಯ ಆಹಾರ ಪಡೆದುಕೊಂಡರೆ ಅಂತವರು ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇಲ್ಲ. ಯಾರಿಗೆ ತುಂಬಾ ವಯಸ್ಸಾಗಿದೆ, ಹೃದಯ ಸಂಬಂಧಿತ ಖಾಯಿಲೆಯಿಂದ, ಸರ್ಜರಿ, ಸಕ್ಕರೆ ಖಾಯಿಲೆಯಿಂದ ಬಳಲುತ್ತಿರುವವರಿಗೆ ಸೋಂಕು ಬಂದರೆ ಬೆಡ್ ಬೇಕಾಗಿದ್ದು, ಇದನ್ನು ಹೊರತುಪಡಿಸಿ ಸಣ್ಣ ಪ್ರಮಾಣದ ಲಕ್ಷಣಗಳಿದ್ದರೆ ಅಂತವರಿಗೆ ಬೆಡ್‍ನ ಅವಶ್ಯಕತೆ ಇಲ್ಲ. ಅವರು ಮನೆಯಲ್ಲೇ ಔಷಧಿ ಪಡೆದು ಸೋಂಕನ್ನು ಗುಣಪಡಿಸಿಕೊಳ್ಳಬಹುದು. ಈಗಾಗಲೇ ರಾಜ್ಯದ ವೈದ್ಯರೆಲ್ಲರೂ ಕೂಡ ಆಸ್ಪತ್ರೆಗಳಲ್ಲಿ ಹೆಚ್ಚಿನ ಸಮಯ ಕೆಲಸ ನಿರ್ವಹಿಸಿ ಸಾರ್ವಜನಿಕರ ಆರೋಗ್ಯ ಕಾಪಾಡಲು ಪ್ರಯತ್ನಿಸುತ್ತಿದ್ದೇವೆ ಎಂದರು.

mask 2

ದಯವಿಟ್ಟು ಸಾರ್ವಜನಿಕರು ಸೋಂಕಿನ ಬಗ್ಗೆ ನಿರ್ಲಕ್ಷ್ಯ ಮಾಡದೆ. ಎಚ್ಚೆತ್ತುಕೊಳ್ಳಿ ತುಂಬಾ ಪ್ರಮಾಣದಲ್ಲಿ ಸೋಂಕು ಕಂಡು ಬಂದರೆ ಕೂಡಲೇ ಆಸ್ಪತ್ರೆಗೆ ಬನ್ನಿ ನಾವೆಲ್ಲರು ನಿಮಗೆ ಸಹಾಯಮಾಡಲು ತಯಾರಿದ್ದೇವೆ. ಒಬ್ಬರಿಗೆ ಸಣ್ಣ ಪ್ರಮಾಣದ ಸೋಂಕಿನ ಲಕ್ಷಣ ಕಂಡು ಬಂದರೆ ಮನೆಯಲ್ಲಿ ಬೇರೆ ಕೊಠಡಿಯಲ್ಲಿ ಐಸೋಲೇಶನ್ ಆಗಿ. ಇದರಿಂದ ನಿಮ್ಮ ಮನೆಯವರಿಗೆ ಸೋಂಕು ಹರಡದಂತೆ ಕಾಪಾಡಬಹುದು. ಸೋಂಕು ಕಂಡು ಬಂದರೆ ಔಷಧಿಗಳನ್ನು ಪಡೆದುಕೊಂಡು ವ್ಯಾಯಾಮಗಳನ್ನು ಮತ್ತು ವಿಟಮಿನ್ ಸಿ ಹೆಚ್ಚಿಸಿಕೊಂಡು ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಂಡರೆ ನೀವು ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇಲ್ಲ. ಕೊರೊನಾ ಎರಡನೇ ಅಲೆ, ಮೊದಲನೇ ಅಲೆಗಿಂತ ವೇಗವಾಗಿ ಹರಡುತ್ತಿದೆ. ಆದರೆ ಮರಣ ಪ್ರಮಾಣ ಕಡಿಮೆ. ಯುವಕರಲ್ಲಿ ಸೋಂಕು ಕಂಡು ಬಂದರೆ ಬೇಗ ಕಡಿಮೆಯಾಗುತ್ತದೆ. ಹಾಗಾಗಿ ಸಾರ್ವಜನಿಕರೆಲ್ಲರೂ ಕೂಡ ನಮ್ಮೊಂದಿಗೆ ಸಹಕರಿಸಿ ಸಣ್ಣ ಪ್ರಮಾಣದಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದರೂ ಕೂಡ ವೈದ್ಯರನ್ನು ಭೇಟಿಯಾಗಿ ಸೂಕ್ತ ಔಷಧಿ ಪಡೆದುಕೊಳ್ಳಿ ಎಲ್ಲರೂ ಕೂಡ ಸಾಮಾಜಿಕ ಅಂತರ ಕಾಪಾಡಿ, ಮಾಸ್ಕ್‍ಗಳನ್ನು ಸರಿಯಾಗಿ ಬಳಕೆ ಮಾಡಿ, ಸ್ಯಾನಿಟೈಸರ್ ಬಳಕೆ ಮಾಡಿ ಮತ್ತು ಅನವಶ್ಯಕ ಓಡಾಟ ಮತ್ತು ಪಾರ್ಟಿ, ಮದುವೆ, ಕಾರ್ಯಕ್ರಮಗಳನ್ನು ಬದಿಗೊತ್ತಿ. ಇನ್ನು ಒಂದು, ಒಂದುವರೆ ತಿಂಗಳು ತುಂಬಾ ಜಾಗರೂಕರಾಗಿ ಇರಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

TAGGED:bengaluruCoronaCoronavirusCovid 19Doctor ShankarhospitalManipalPublic TVಕೊರೊನಾಕೊರೊನಾ ವೈರಸ್ಕೋವಿಡ್ 19ಡಾ. ಶಂಕರ್ಪಬ್ಲಿಕ್ ಟಿವಿಬೆಂಗಳೂರುಮಣಿಪಾಲವೈದ್ಯರುಸೋಂಕು
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

pakistan Airstrikes In Afghanistan
Latest

ಅಫ್ಘಾನ್‌ ಮೇಲೆ ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ – 12 ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸಾವು

Public TV
By Public TV
9 minutes ago
Kamalakar Bhat
Crime

ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪೋಕ್ಸೊ ಕೇಸ್ ದಾಖಲು

Public TV
By Public TV
14 minutes ago
Accident
Chitradurga

ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರಿಗೆ ಗಾಯ

Public TV
By Public TV
52 minutes ago
INDIA AI
Latest

India AI Summit: ಆಶಾ ಕಾರ್ಯಕರ್ತೆಯರು, ರೈತರಿಂದ ಹಿಡಿದು ಸರ್ಕಾರಿ ಶಾಲಾ ಮಕ್ಕಳವರೆಗೆ – ಭಾರತಕ್ಕೆ ಎಐನಿಂದ ಆಗೋ ಲಾಭಗಳೇನು?

Public TV
By Public TV
60 minutes ago
Cyber Crime
Bengaluru City

ವರ್ಕ್ ಫ್ರಮ್ ಹೋಂ ಹೆಸರಲ್ಲಿ ಸೈಬರ್ ಕಿರಾತಕರು ಆಕ್ಟೀವ್ – ಮಗನ ಮಾತು ಕೇಳಿ 40,000 ರೂ. ಕಳೆದುಕೊಂಡ ಮಹಿಳೆ

Public TV
By Public TV
1 hour ago
Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?