ಸೋಕಿನಿಂದ ಹಲವು ಕುಟುಂಬಗಳು ವಿನಾಶದ ಅಂಚಿನಲ್ಲಿವೆ – ಸಂಸದ ಎ.ನಾರಾಯಣ ಸ್ವಾಮಿ

Public TV
2 Min Read
Chitradurga A Narayanaswamy

– ಸಿಎಂ ಸ್ಥಾನ ಬದಲಾವಣೆ ವಿಚಾರ ಮುಗಿದ ಅಧ್ಯಾಯ

ಚಿತ್ರದುರ್ಗ: ಕೊರೊನಾ ಎರಡನೇ ಅಲೆ ಆರ್ಭಟ ದಿಂದಾಗಿ ಹಲವು ಕುಟುಂಬಗಳು ಮನೆಯ ಸದಸ್ಯರನ್ನು ಕಳೆದುಕೊಂಡು ವಿನಾಶದ ಅಂಚಿನಲ್ಲಿವೆ ಆದರು ಸಾರ್ವಜನಿಕವಾಗಿ ಜನರು ಜಾಗೃತರಾಗಿಲ್ಲವೆಂದು ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸೋಂಕಿನಿಂದ ನಿಧನರಾದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಅರವಿಂದ ಲಿಂಬಾವಳಿ

Chitradurga A Narayanaswamy7 medium

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದ ಬಿಎಂ ಜಿಹೆಚ್ ಪ್ರೌಢಶಾಲಾ ಆವರಣದಲ್ಲಿ ಪೌರಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಆಹಾರ ಕಿಟ್ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಎರಡನೇ ಅಲೆಯ ಬಗ್ಗೆ ಯಾರು ಸಹ ಗಂಭೀರವಾಗಿ ಪರಿಗಣಿಸಲಿಲ್ಲ. ಈಗಾಗಲೇ ಕೋರೊನಾದಿಂದಾಗಿ ಹಲವರು ತಂದೆ ತಾಯಿಗಳನ್ನು ಕಳೆದುಕೊಂಡಿದ್ದಾರೆ. ಕೆಲವರು ಮಕ್ಕಳು ಅಣ್ಣತಮ್ಮರನ್ನು ಕಳೆದುಕೊಂಡಿದ್ದಾರೆ. ಇಂತಹ ಸಮಯದಲ್ಲೂ ನಿರ್ಲಕ್ಷ್ಯವಹಿಸದೇ ಎಲ್ಲರು ತಪ್ಪದೇ ಕೊರೊನಾ ವ್ಯಾಕ್ಸಿನ್ ಪಡೆದು ಜೀವ ರಕ್ಷಣೆ ಮಾಡಿಕೊಳ್ಳಬೇಕು ಎಂದು ಮನವಿಯನ್ನು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರೇಣುಕಾಚಾರ್ಯರನ್ನ ಪತಿಯಾಗಿ ಪಡೆದ ನಾನೇ ಅದೃಷ್ಟವಂತೆ: ಕೊಂಡಾಡಿದ ಪತ್ನಿ ಸುಮಿತ್ರಾ

Chitradurga A Narayanaswamy3 medium

ಸಾರ್ವಜನಿಕರು ಎಲ್ಲೆಡೆ ಕಡ್ಟಾಯವಾಗಿ ಮಾಸ್ಕ್ ಹಾಕಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡ ಕೊರೊನಾವನ್ನು ಹಿಮ್ಮೆಟ್ಟಿಸಬೇಕು. ಪೌರಕಾರ್ಮಿಕರು ಇಲ್ಲದಿದ್ದರೆ ನಗರ ಪರಸ್ಥಿತಿ ಹೇಳತೀರದಾಗಿರುತ್ತು. ನಗರ ಸ್ವಚ್ಚ ಕಾರ್ಯದಲ್ಲಿ ತೋಡಗುವ ಕಾರ್ಮಿಕರು ವೈಯಕ್ತಿಕ ಬದುಕನ್ನು ಬದಿಗೊತ್ತಿ ನಗರ ಸ್ವಚ್ಚತೆಗೆ ಆದ್ಯತೆ ನೀಡುತ್ತಾರೆ. ಮೊದಲು ಪೌರಕಾರ್ಮಿರು ಲಸಿಕೆಯನ್ನು ಪಡೆಯಿರಿ ತಮ್ಮ ಅರೋಗ್ಯ ಕಾಪಾಡುವ ಕೊಳ್ಳಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ವೀಡಿಯೋ ವೈರಲ್: ಸೀರೆಯುಟ್ಟು ಮ್ಯಾನ್‍ಹೋಲ್‍ಗೆ ಇಳಿದ ಮುನ್ಸಿಪಲ್ ಆಫೀಸರ್

Chitradurga A Narayanaswamy8 medium

ಸಿಎಂ ಸ್ಥಾನ ಬದಲಾವಣೆ ವಿಚಾರ ಮುಗಿದ ಅಧ್ಯಾಯ ಎನಿಸಿದೆ. ನಿನ್ನೆ ರಾಜ್ಯ ಉಸ್ತುವಾರಿ ಅರುಣ್ ಜಿ ಯವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದ ಸಿಎಂ ಬದಲಾವಣೆ ವಿಚಾರ ಕೇಂದ್ರದಲ್ಲೂ ಇಲ್ಲ, ರಾಜ್ಯದಲ್ಲೂ ಇಲ್ಲ ಹೀಗಾಗಿ ಸಾಮಾನ್ಯ ಕಾರ್ಯಕರ್ತನಿಂದ ರಾಜ್ಯ ನಾಯಕರವರೆಗೆ ಇದೇ ಧೋರಣೆ ನಮ್ಮಲ್ಲಿದೆ. ಸಿಎಂ ಸ್ಥಾನದಿಂದ ಬಿಎಸ್‍ವೈ ಬದಲಾವಣೆ ಚರ್ಚೆ ನಮ್ಮಲ್ಲಿ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದರು.
Chitradurga A Narayanaswamy5 medium
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ನಗರಸಭೆ ಸದಸ್ಯ ಜಯಣ್ಣ,ಶಿವಕುಮಾರ್, ಬಿಜೆಪಿ ಮುಖಂಡರಾದ ಜಯಪಾಲ ಬಾಳೆಮಂಡಿ ರಾಮದಾಸ್, ದೇವರಾಜ್, ತಿಮ್ಮರಾಜ್, ಶಿಮಮೂರ್ತಿ ತಹಸೀಲ್ದಾರ್ ಎಂ. ಮಲ್ಲಿಕಾರ್ಜುನ್ ಇತರರಿದ್ದರು.

Share This Article
Leave a Comment

Leave a Reply

Your email address will not be published. Required fields are marked *