Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋನಿಯಾ ಗಾಂಧಿಯನ್ನು ತೃಪ್ತಿಪಡಿಸುವುದೇ ಸಿದ್ದರಾಮಯ್ಯ, ಡಿಕೆಶಿ ಉದ್ದೇಶ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಸೋನಿಯಾ ಗಾಂಧಿಯನ್ನು ತೃಪ್ತಿಪಡಿಸುವುದೇ ಸಿದ್ದರಾಮಯ್ಯ, ಡಿಕೆಶಿ ಉದ್ದೇಶ: ಈಶ್ವರಪ್ಪ

Karnataka

ಸೋನಿಯಾ ಗಾಂಧಿಯನ್ನು ತೃಪ್ತಿಪಡಿಸುವುದೇ ಸಿದ್ದರಾಮಯ್ಯ, ಡಿಕೆಶಿ ಉದ್ದೇಶ: ಈಶ್ವರಪ್ಪ

Public TV
Last updated: April 15, 2021 5:12 pm
Public TV
Share
2 Min Read
smg eshwarappa 1
SHARE

ಶಿವಮೊಗ್ಗ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದು, ಸೋನಿಯಾ ಗಾಂಧಿಯವರನ್ನು ತೃಪ್ತಿಪಡಿಸುವುದೇ ಅವರ ಉದ್ದೇಶ ಎಂದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿಕೆಶಿ ಅವರಿಗೆ ಈ ಜನ್ಮದಲ್ಲಿ ಅಲ್ಲ, ಮುಂದಿನ ಜನ್ಮದಲ್ಲೂ ಬುದ್ಧಿ ಬರಲ್ಲ. ಅವರದ್ದು ಇಟಲಿ ಸಂಸ್ಕೃತಿ, ಭಾರತೀಯ ಸಂಸ್ಕೃತಿ ಅವರಿಗೆ ಗೊತ್ತಿಲ್ಲ. ಸೋನಿಯಾ ಗಾಂಧಿ ಅವರನ್ನು ತೃಪ್ತಿ ಪಡಿಸುವುದೇ ಅವರ ಉದ್ದೇಶ. ಎಲ್ಲ ಚುನಾವಣೆಯಲ್ಲಿ ಸೋತು ಸುಣ್ಣವಾದರೂ ಅವರಿಗೆ ಬುದ್ಧಿ ಬರುತ್ತಿಲ್ಲ. ನಳೀನ್ ಕುಮಾರ್ ಅವರಿಗೆ ವಿದೂಷಕ ಎಂಬ ಪದ ಬಳಸುತ್ತಿದ್ದಾರೆ. ನನಗೂ ಬುದ್ಧಿ ಇಲ್ಲ, ಮೆದುಳು ಇಲ್ಲ ಅನ್ನುತ್ತಿದ್ದರು. ನಾನು ಅದಕ್ಕೆ ಹುಚ್ಚ, ಬೆಪ್ಪ ಅಂತೆಲ್ಲಾ ಬಳಸಿದೆ ಎಂದು ತಿರುಗೇಟು ನೀಡಿದರು.

SIDDARAMYA

ಏಯ್ ಸಿದ್ದರಾಮಯ್ಯ ನಿನಗೆ ಬುದ್ಧಿ ಇಲ್ಲವೇನಲೇ ಎಂದು ನನಗೆ ಕೇಳುವುದಕ್ಕೆ ಬರಲ್ವಾ? ಆದರೆ ನಾನು ಬಳಸಲ್ಲ. ನೀವು ಮುಖ್ಯಮಂತ್ರಿ ಆಗಿದ್ದವರು ಭಾಷೆ ಬಳಸಬೇಕಾದರೆ ಎಚ್ಚರಿಕೆಯಿಂದ ಮಾತನಾಡಿ, ಇಲ್ಲ ನಾನೂ ಹೀಗೇ ಮಾತನಾಡೋದು, ಹೀಗೆ ಮಾತನಾಡಿದರೇ ಆತ್ಮಕ್ಕೆ ತೃಪ್ತಿ ಸಿಗೋದು ಎಂದರೆ ಬಳಸಿ, ನಾನು ಏನೂ ಹೇಳಲ್ಲ. ಸಿದ್ದರಾಮಯ್ಯ ನನ್ನ ಆತ್ಮೀಯರು ಹಾಗಾಗಿ ಇನ್ನಾದರೂ ತಿದ್ದಿಕೊಳ್ಳಲಿ ಎಂದರು.

ಯಡಿಯೂರಪ್ಪ ಭ್ರಷ್ಟಾಚಾರ ಮಾಡಿದ್ದಾರೆ ಅಂತಾರೆ. ಡಿಕೆಶಿ ಯಾಕೆ ಜೈಲಿಗೆ ಹೋಗಿ ಬಂದ್ರು, ವಿರೋಧ ಪಕ್ಷದ ನಾಯಕರಾಗಿ ನೀವು ಯಾವ ಭ್ರಷ್ಟಾಚಾರ ಹೊರಗೆ ತೆಗೆದಿದ್ದೀರಿ. ಹಾಗಾದ್ರೆ ನೀವು ವಿರೋಧ ಪಕ್ಷದ ನಾಯಕರಾಗಿ ವಿಫಲರಾಗಿದ್ದೀರಾ ಎಂದು ಪ್ರಶ್ನಿಸಿದರು. ರಾಜ್ಯಪಾಲರಿಗೆ ನಾನು ದೂರು ಕೊಟ್ಟಿಲ್ಲ, ದೂರು ಕೊಡಲು ನಾನು ಅವರ ಬಳಿ ಹೋಗಿರಲಿಲ್ಲ. ಅವರು ಗುಜರಾತ್ ನಲ್ಲಿ ಅರ್ಥ ಸಚಿವರಾಗಿ 14 ಬಾರಿ ಬಜೆಟ್ ಮಂಡಿಸಿದ್ದಾರೆ. ಹೀಗಾಗಿ ನಿಯಮಗಳ ಬಗ್ಗೆ ಚರ್ಚೆ ಮಾಡಲು ಹೋಗಿದ್ದೆ. ನನ್ನ ಜೀವನದಲ್ಲೇ ನಮ್ಮ ಪಕ್ಷದವರ ವಿರುದ್ಧ ದೂರು ಕೊಟ್ಟಿಲ್ಲ, ಕೊಡುವುದಿಲ್ಲ ಎಂದರು.

DKSHI 1 1

ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಿಯಂತ್ರಣಕ್ಕೆ ತರುವ ದೃಷ್ಟಿಯಿಂದ ರಾಜ್ಯದಲ್ಲಿ ಗ್ರಾಮೀಣ ಕಾರ್ಯಪಡೆ ರಚನೆ ಮಾಡುತ್ತಿದ್ದೇವೆ. ಪ್ರತಿ ಗ್ರಾಮದಲ್ಲಿ ಗ್ರಾಮ ಮಟ್ಟಕ್ಕೂ ಗ್ರಾಮಪಡೆ ಇರುತ್ತದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಒಂದು ಗ್ರಾಮಪಡೆ ಕೆಲಸ ನಿರ್ವಹಿಸುತ್ತೆ. ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮದ ಬೀಟ್ ಪೊಲೀಸ್, ಆರೋಗ್ಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆರು, ಆಶಾ ಕಾರ್ಯಕರ್ತೆಯರು, ನೋಂದಾಯಿತ ಸ್ಥಳೀಯ ವೈದ್ಯರು ಇರುತ್ತಾರೆ. ಗ್ರಾಮಗಳಲ್ಲಿ ಜನ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆ ಎಂದರು.

ಹಣಕಾಸಿನ ವ್ಯವಸ್ಥೆಯನ್ನು ಇಲಾಖೆ ಮೂಲಕ ಮಾಡುತ್ತಿದ್ದೇವೆ. ಕೆಮ್ಮು, ನೆಗಡಿ, ಜ್ವರ ಕಾಣಿಸಿದರೆ ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಶಿಫ್ಟ್ ಮಾಡಲು ಕ್ರಮ ಕೈಗೊಳ್ಳುತ್ತೇವೆ. ಕರ್ನಾಟಕದ ಎಲ್ಲ ಗ್ರಾಮಗಳಲ್ಲಿ ಈ ಟಾಸ್ಕ್ ಫೋರ್ಸ್ ಕಾರ್ಯ ನಿರ್ವಹಿಸಲಿದೆ. ತಕ್ಷಣದಿಂದಲೇ ಈ ಟಾಸ್ಕ್ ಫೋರ್ಸ್ ಜಾರಿಗೆ ಬರಲಿದೆ ಎಂದರು.

corona test 2

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆ ಮಾಡಬಾರದು ಎಂದು ಹೇಳಿದರು. ಇಡೀ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಉತ್ತಮವಾಗಿ ನಡೆಯಿತು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಬಗ್ಗೆ ಚುನಾವಣಾ ಆಯೋಗ ತೀರ್ಮಾನ ಮಾಡುತ್ತದೆ. ಪಶ್ಚಿಮ ಬಂಗಾಳ ಚುನಾವಣೆ ಬೇಡವೇ ಬೇಡ ಅಂತಾ ಕುಳಿತಿದ್ದರು. ಕೊಲೆಗಳು ಆಗುತ್ತಿವೆ, ಅಲ್ಲಿ ಕೋವಿಡ್ ನಿಂದ ಸಾಯುತ್ತಿಲ್ಲ. ರಾಜಕೀಯದಿಂದ ಸಾಯುತ್ತಿದ್ದಾರೆ. ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಿದಾಗ ಮಾಡುತ್ತೇವೆ ಎಂದರು.

TAGGED:DK Shivakumarks eshwarappaPublic TVshivamoggasiddaramaiahಕೆ.ಎಸ್.ಈಶ್ವರಪ್ಪಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಶಿವಮೊಗ್ಗಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories
Gilli 1
ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Cinema Latest Main Post Sandalwood TV Shows

You Might Also Like

kalaburagi reels death
Kalaburagi

ಕಲಬುರಗಿ| ರೀಲ್ಸ್ ಮಾಡುತ್ತ ಟ್ರ್ಯಾಕ್ಟರ್‌ ಕೆಳಗೆ ಬಿದ್ದ ಚಾಲಕ; ಚಕ್ರಕ್ಕೆ ಸಿಲುಕಿ ಸಾವು

Public TV
By Public TV
23 minutes ago
Nikhil Kumaraswamy
Districts

ರಾಜ್ಯಪಾಲರ ಘನತೆಗೆ ಕಾಂಗ್ರೆಸ್ ಅಗೌರವ ತೋರಿದೆ, ಸದಾಕಾಲ ಕೇಂದ್ರದ ಜೊತೆ ಸಂಘರ್ಷ ಸರಿಯಲ್ಲ: ನಿಖಿಲ್

Public TV
By Public TV
30 minutes ago
Trump unveils Board of Peace India absent from stage Pakistan joins
Latest

ಅಸ್ತಿತ್ವಕ್ಕೆ ಬಂತು ಟ್ರಂಪ್‌ ಕನಸಿನ ಬೋರ್ಡ್‌ ಆಫ್‌ ಪೀಸ್‌ – ಪಾಕಿಸ್ತಾನವೂ ಸದಸ್ಯ ದೇಶ

Public TV
By Public TV
39 minutes ago
dharwad murder case man set to marry her strangled her to death
Crime

ಧಾರವಾಡ | ಯುವತಿಯ ಕೊಲೆ ಕೇಸ್ – ಮದುವೆ ಆಗಬೇಕಿದ್ದ ಯುವಕನೇ ವಿಲನ್

Public TV
By Public TV
55 minutes ago
woman arrested for blackmailing swamiji ccb police bengaluru
Bengaluru City

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಹನಿಟ್ರ್ಯಾಪ್? – ಬ್ಲ್ಯಾಕ್‌ಮೇಲ್‌ ಮಾಡಿದ್ದ ಮಹಿಳೆ ಬಂಧನ

Public TV
By Public TV
1 hour ago
cocaine bengaluru airport
Crime

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 38 ಕೋಟಿ ಮೌಲ್ಯದ ಕೊಕೇನ್ ಸೀಜ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?