ಬೆಂಗಳೂರು: ಅನ್ಲಾಕ್ 3.ಓ ನಲ್ಲಿ ಇನ್ನಷ್ಟು ಕ್ಷೇತ್ರಗಳನ್ನು ಓಪನ್ ಮಾಡುವ ಪ್ಲಾನ್ ನಲ್ಲಿ ರಾಜ್ಯ ಸರ್ಕಾರವಿದೆ. ಇಂದು ನಡೆಯುವ ಮಹತ್ವದ ಸಭೆಯ ಬಳಿಕ ಸೋಮವಾರದಿಂದ ಅನ್ಲಾಕ್ ಮೂರನೇ ಹಂತ ಜಾರಿಗೆ ಬರಲಿದೆ. ಮೂರನೇ ಹಂತದ ಅನ್ಲಾಕ್ ನಲ್ಲಿ ಧಾರ್ಮಿಕ ಕ್ಷೇತ್ರಗಳಿಗೆ ಭಕ್ತರು ಬರುವ ಅವಕಾಶ ನೀಡುವ ಸಾಧ್ಯತೆ ಹೆಚ್ಚಾಗಿದೆ.
ದೇವಾಲಯಳಿಗೆ ಕೊರೊನಾ ಲಾಕ್ಡೌನ್ನಿಂದ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಮೂರನೇ ಹಂತದಲ್ಲಿ ದೇವಾಲಯಕ್ಕೆ ಭಕ್ತರಿಗೆ ಮುಕ್ತಗೊಳಿಸುವ ಚಿಂತನೆ ನಡೆದಿದೆ. ಈ ಹಿನ್ನೆಲೆ ಸೋಮವಾರದಿಂದ ಭಕ್ತರು ದೇವಾಲಯಕ್ಕೆ ಬರುವ ಸಾಧ್ಯತೆ ಹಚ್ಚಾಗಿದೆ. ಹಾಗಾಗಿ ದೇವಾಲಯವನ್ನು ಶುದ್ಧಗೊಳಿಸಿಕೊಳ್ಳುವ ಕಾರ್ಯಕ್ಕೆ ಸಿಬ್ಬಂದಿ ಮುಂದಾಗಿದ್ದಾರೆ.
ಬೆಂಗಳೂರಿನ ಪುರಾಣ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಒಳ ಆವರಣವನ್ನು ನೀರಿನ ಮೂಲಕ ತೊಳೆದು ಸ್ಯಾನಿಟೈಸರ್ ಮಾಡುವ ಕಾರ್ಯದಲ್ಲಿ ದೇವಾಲಯದ ಸಿಬ್ಬಂದಿ ನಿರತರಾಗಿದ್ದಾರೆ.
ಸರ್ಕಾರ ನೀಡುವ ಮಾರ್ಗಸೂಚಿಯ ಅನುಸಾರ ದೇವಾಲಯಕ್ಕೆ ಭಕ್ತರು ಬರಬೇಕಾಗುತ್ತದೆ. ಸರ್ಕಾರ ಸೋಮವಾರದಿಂದ ದೇವಾಲಯಗಳಲ್ಲಿ ಭಕ್ತರಿಗೆ ಅವಕಾಶ ನೀಡುವ ನಿರೀಕ್ಷೆಯಿಂದ ನಾವೂ ಇಂದೇ ಶುದ್ಧತೆಯ ಕಾರ್ಯವನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಆರ್ಚಕರು ಹೇಳಿದ್ದಾರೆ. ಇದನ್ನೂ ಓದಿ : ಉತ್ತರಾಖಂಡ್ ಮುಂದಿನ ಮುಖ್ಯಮಂತ್ರಿ ಯಾರು?