– ಆಸ್ಪತ್ರೆಗೆ ದಾಖಲಿಸಿ ಸ್ನೇಹಿತರು ಎಸ್ಕೇಪ್
ಹಾಸನ: ಜಿಲ್ಲೆಯಲ್ಲಿ ಬಂದೂಕು ಸದ್ದು ಮಾಡಿದ್ದು, ಗುಂಡಿನ ದಾಳಿಗೆ ಯುವಕನೋರ್ವ ಬಲಿಯಾಗಿದ್ದಾನೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಲಹಳ್ಳಿ ಫಾರೆಸ್ಟ್ ನಲ್ಲಿ ಈ ಘಟನೆ ನಡೆದಿದೆ. ಬೇಲೂರು ತಾಲೂಕಿನ ಮಧು (24) ಮೃತ ಯುವಕ. ಈತ ನಿನ್ನೆ ಸಂಜೆ ತನ್ನ ಸ್ನೇಹಿತರ ಜೊತೆಗೆ ತೆರಳಿದ್ದು, ಗುಂಡಿನ ದಾಳಿಗೊಳಗಾಗಿದ್ದಾನೆ.
ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಧುವನ್ನು ಕೂಡಲೇ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಸ್ನೇಹಿತರು ಎಸ್ಕೇಪ್ ಆಗಿದ್ದಾರೆ. ಇತ್ತ ಚಿಕಿತ್ಸೆ ಫಲಿಕಾರಿಯಾಗದೆ ಮೃತಪಟ್ಟಿರುವ ಮಧು ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಎರಡೂವರೆ ತಿಂಗಳ ಬಳಿಕ ಅನ್ಲಾಕ್ – ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ಗಳು ಓಪನ್
ಸಾವಿನ ಬಗ್ಗೆ ಹಲವು ಅನುಮಾನಗಳು ಎದ್ದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಗಿಳಿದಿದ್ದಾರೆ. ಅರಣ್ಯಕ್ಕೆ ಭೇಟೆಗೆ ತೆರಳಿದಾಗ ಮಿಸ್ ಫೈರ್ ಆಗಿದೆಯಾ ಅಥವಾ ಕೊಲೆಯಾ ಎಂಬ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.