Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಾತಂತ್ರ್ಯಾ ನಂತರ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮೊದಲ ಮಹಿಳೆ- ಜೈಲಿನಲ್ಲಿ ಸಕಲ ತಯಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸ್ವಾತಂತ್ರ್ಯಾ ನಂತರ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮೊದಲ ಮಹಿಳೆ- ಜೈಲಿನಲ್ಲಿ ಸಕಲ ತಯಾರಿ

Crime

ಸ್ವಾತಂತ್ರ್ಯಾ ನಂತರ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮೊದಲ ಮಹಿಳೆ- ಜೈಲಿನಲ್ಲಿ ಸಕಲ ತಯಾರಿ

Public TV
Last updated: February 19, 2021 5:14 pm
Public TV
Share
2 Min Read
shabnam
SHARE

– ಕೊನೆಯ ಹಂತದ ಸಿದ್ಧತೆಗೆ ಕಾಯುತ್ತಿದ್ದೇವೆಂದ ಕುಟುಂಬಸ್ಥರು

ಲಕ್ನೋ: ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬಳಿಗೆ ಗಲ್ಲು ಶಿಕ್ಷೆ ಪ್ರಕಟವಾಗಿರುವುದು ಹಲವರಲ್ಲಿ ಅಚ್ಚರಿ ಮೂಡಿಸಿದ್ದು, ಇದೀಗ ಈ ಕೊಲೆ ಪಾತಕಿಯನ್ನು ಗಲ್ಲಿಗೇರಿಸಲು ಮಥುರಾ ಜೈಲಿನಲ್ಲಿ ಸಕಲ ಸಿದ್ಧತೆ ನಡೆಸಲಾಗಿದೆ.

ಪ್ರಿಯಕರನಿಗಾಗಿ ಅಪ್ಪ, ಅಮ್ಮ ಸೇರಿದಂತೆ 7 ಮಂದಿ ಕುಟುಂಬಸ್ಥರನ್ನು ರಾಕ್ಷಸಿ ರೀತಿಯಲ್ಲಿ ಕೊಲೆ ಮಾಡಿದ್ದ ಮಹಿಳೆ ಶಬ್ನಮ್‍ಗೆ ಶೆಷನ್ಸ್ ಕೋರ್ಟ್‍ನಿಂದ ಸುಪ್ರೀಂ ಕೋರ್ಟ್ ವರೆಗೆ ಗಲ್ಲು ಶಿಕ್ಷೆಯೇ ಗತಿಯಾಗಿದೆ. ಅಲ್ಲದೆ ರಾಷ್ಟ್ರಪತಿಗಳ ಕ್ಷಮಾದಾನ ಸಹ ತಿರಸ್ಕೃತಗೊಂಡಿದೆ.

Shabnam 2

ಶಬ್ನಮ್ 2008ರಲ್ಲಿ ತನ್ನ ಪ್ರಿಯಕರಿನಾಗಿ ಅಪ್ಪ, ಅಮ್ಮ ಸೇರಿ 7 ಜನ ಕುಟುಂಬಸ್ಥರನ್ನು ಕೊಲೆ ಮಾಡಿದ್ದಾಳೆ. ಹೀಗಾಗಿ ಅಮ್ರೋಹ ಜಿಲ್ಲಾ ನ್ಯಾಯಾಲಯ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ್ದು, ಬಳಿಕ ತೀರ್ಪು ಪ್ರಶ್ನಿಸಿ ಅಲಹಬಾದ್ ಹೈ ಕೋರ್ಟ್‍ನಲ್ಲಿ ಇವರಿಬ್ಬರು ಮೇಲ್ಮನವಿ ಸಲ್ಲಿಸಿದ್ದರು. ಅಲ್ಲಿಯೂ ಅರ್ಜಿ ತಿರಸ್ಕಾರಗೊಂಡ ಬಳಿಕ ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು. ಆದರೆ ಎರಡೂ ನ್ಯಾಯಾಲಯಗಳು ಇದೀಗ ಅರ್ಜಿಯನ್ನು ತಿರಸ್ಕರಿಸಿದ್ದು, ಗಲ್ಲು ಶಿಕ್ಷೆಯೇ ಗತಿಯಾಗಿದೆ. ಕೊನೆಯ ಪ್ರಯತ್ನವಾಗಿ ರಾಷ್ಟ್ರಪತಿಗಳ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇದೂ ಸಹ ತಿರಸ್ಕಾರಗೊಂಡಿದೆ.

Supreme Court

ಇದೀಗ ಅಪರಾಧಿಗಳಾದ ಶಬ್ನಮ್ ಹಾಗೂ ಸಲೀಮ್ ಡೆತ್ ವಾರೆಂಟ್ ಯಾವಾಗ ಬೇಕಾದರೂ ಬರಬಹುದು. ಶಬ್ನಮ್‍ಳನ್ನು ರಾಮ್‍ಪುರ ಜೈಲಿನಲ್ಲಿರಿಸಲಾಗಿದ್ದು, ಮಥುರಾ ಜೈಲಿನಲ್ಲಿ ಗಲ್ಲಿಗೇರಿಸಲು ಸಿದ್ಧತೆ ನಡೆಸಲಾಗಿದೆ. ಆಶ್ಚರ್ಯವೆಂದರೆ ಈಕೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಗಲ್ಲಿಗೇರುತ್ತಿರುವ ಮೊದಲ ಮಹಿಳೆಯಾಗಿದ್ದಾಳೆ. ಈ ಇಬ್ಬರನ್ನು ಗಲ್ಲಿಗೇರಿಸಲು ಮಥುರಾ ಜೈಲಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿದ್ದ ಪವನ್ ಜಲ್ಲದ್ ಅವರೇ ನೇಣಿಗೇರಿಸಲಿದ್ದಾರೆ.

ಶಬ್ನಮ್ ಯಾರು, ಏನಿದು ಪ್ರಕರಣ?
ಉತ್ತರ ಪ್ರದೇಶದ ಅಮ್ರೋಹಾದ ಬವಾಂಖೇಡಿ ಗ್ರಾಮದಲ್ಲಿ ಈ ಕೊಲೆ ನಡೆದು 13 ವರ್ಷಗಳು ಕಳೆದಿದ್ದು, 2008ರ ಏಪ್ರಿಲ್ 14 ರಂದು ಕೃತ್ಯ ನಡೆದ ಸಂದರ್ಭ ನೆನೆದರೆ ಗ್ರಾಮಸ್ಥರು ಇಂದಿಗೂ ಬೆಚ್ಚಿಬೀಳುತ್ತಾರೆ. ಪ್ರಿಯತಮನಿಗಾಗಿ ತನ್ನ ಅಪ್ಪ, ಅಮ್ಮ ಸೇರಿ 7 ಜನ ಕುಟುಂಬಸ್ಥರನ್ನು ಕೊಚ್ಚಿ ಕೊಲೆ ಮಾಡಿದ್ದಳು.

Shabnam 1

ಶಬ್ನಮ್ ಎಂಎ ಇಂಗ್ಲಿಷ್ ಹಾಗೂ ಭೂಗೋಳಶಾಸ್ತ್ರದಲ್ಲಿ ಎಂಎ ಮಾಡಿದ್ದು, ತನ್ನ ಮನೆ ಬಳಿ ಇದ್ದ 6ನೇ ತರಗತಿಗೆ ಶಾಲೆ ಬಿಟ್ಟ ಸಲೀಮ್‍ನನ್ನು ಪ್ರೀತಿಸುತ್ತಿದ್ದಳು. ಇದಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ತನ್ನ ಮನೆಯ ಮೇಲೆಯೇ ಪ್ರಿಯತಮನ ಮೂಲಕ ಶಬ್ನಮ್ ದಾಳಿ ನಡೆಸಿದ್ದಳು. ಈ ವೇಳೆ ಮನೆಯವರಿಗೆ ಮತ್ತು ಬರುವ ಔಷಧಿ ನೀಡಿದ್ದಳು. ತನ್ನ ಪ್ರಿಯಕರನೊಂದಿಗೆ ಸೇರಿ 7 ಜನ ಕುಟುಂಬಸ್ಥರನ್ನು ಕೊಲೆ ಮಾಡಿದ್ದಳು.

shabnam first woman be hang

ಸಲೀಮ್ ಶಬ್ನಮ್ ಮನೆಯ ಬಳಿಯೇ ಕಟ್ಟಿಗೆ ಯುನಿಟ್‍ನಲ್ಲಿ ಕೆಲಸ ಮಾಡುತ್ತಿದ್ದ. ಕೊಲೆ ಪ್ರಕರಣವನ್ನು ಅಮ್ರೋಹ ನ್ಯಾಯಾಲಯ ಎರಡು ವರ್ಷಗಳ ಕಾಲ ವಿಚಾರಣೆ ನಡೆಸಿತ್ತು. 2015ರಲ್ಲಿ ಅಲಹಬಾದ್ ಹೈ ಕೋರ್ಟ್‍ನ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ಮರಣದಂಡನೆ ಶಿಕ್ಷೆ ವಿಧಿಸಿತ್ತು.

TAGGED:Public TVSalimShabnamSupreme Courtuttar pradeshಉತ್ತರ ಪ್ರದೇಶಪಬ್ಲಿಕ್ ಟಿವಿಶಬ್ನಮ್ಸಲೀಮ್ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Techie Dies Of Brain Stroke
Bengaluru City

ತಾಯಿ ಜೊತೆ ನಗುತ್ತಾ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು

Public TV
By Public TV
5 minutes ago
kids illegally ridding scooter 1
Bengaluru City

ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತರ ಸವಾರಿ – ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿ ಪೋಷಕರ ವಿರುದ್ಧ ಆಕ್ರೋಶ

Public TV
By Public TV
6 minutes ago
Chinnaswamy Stadium RCB
Bengaluru City

ಆರ್‌ಸಿಬಿ ಪಂದ್ಯದಂದೇ 240 ಸಿಸಿಟಿವಿ ಕೇಬಲ್‌ ಕಟ್‌ – ಚಿನ್ನಸ್ವಾಮಿಯಲ್ಲಿ ಭಾರೀ ಭದ್ರತಾ ಲೋಪ!

Public TV
By Public TV
1 hour ago
kunal ghosh TMC
Latest

ಬಿಜೆಪಿಗಾಗಿ ರಾಹುಲ್‌ ಗಾಂಧಿ ಕೆಲಸ, ಪಪ್ಪು ಅನ್ನೋದ್ರಲ್ಲಿ ತಪ್ಪಿಲ್ಲ: ಕುನಾಲ್ ಘೋಷ್ ಕಿಡಿ

Public TV
By Public TV
3 hours ago
kea
Bengaluru City

2026ರ ಸಿಇಟಿ ಪರೀಕ್ಷೆ ಕೀ ಉತ್ತರ ಪ್ರಕಟಿಸಿದ ಕೆಇಎ

Public TV
By Public TV
3 hours ago
Reading newspapers is now mandatory in all schools in Karnataka Department of Public Education order
Bagalkot

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?